ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸಲು ಅಧಿಕಾರಿಗಳು ಒತ್ತು ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಮೇಲ್ವಿಚಾರಣೆ ಸಮಿತಿ, ಪೋಷಣ್ ಅಭಿಯಾನ ಸಮನ್ವಯ ಸಮಿತಿ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ರಕ್ಷಣೆ 2005-2006, ಬಾಲ್ಯ ವಿವಾಹ ನಿಷೇಧ ಸಮಿತಿ ಸಭೆ ಸೇರಿದಂತೆ ವಿವಿಧ ಸಮಿತಿ ಸಭೆಗಳ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು.
ಅಪೌಷ್ಟಿಕತೆಯಿಂದ ಬಳಲುತ್ತಿರುವ ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ಪೋಷಣ್ ಅಭಿಯಾನದಡಿ ಪೌಷ್ಠಿಕ ಆಹಾರ ನೀಡಿ ಅವರನ್ನು ಸದೃಢರನ್ನಾಗಿಸಬೇಕು ಎಂದರಲ್ಲದೆ ಐ.ಸಿ.ಡಿ.ಎಸ್ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ, ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವ ಮೂಲಕ ಜಿಲ್ಲೆಯನ್ನು ಅಪೌಷ್ಟಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದರು.
ಕೌಟುಂಬಿಕ ಹಿಂಸೆಗೊಳಗಾದ ಮಹಿಳೆಯರಿಗೆ ಸಕಾಲದಲ್ಲಿ ಆಪ್ತ ಸಮಾಲೋಚನೆ ನಡೆಸಿ ಆತ್ಮಸ್ಥೈರ್ಯ ತುಂಬಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ದೌರ್ಜನ್ಯಗೊಳಗಾದ ಮಹಿಳೆಯರಿಗೆ ಸೂಕ್ತ ಮಾರ್ಗದರ್ಶನ ನೀಡಿ ನ್ಯಾಯ ಒದಗಿಸಬೇಕು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್ ಮಾತನಾಡಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ2005 ರಡಿ ನಿಯಮ 2006 ರ ಪ್ರಸಕ್ತ ಸಾಲಿನಲ್ಲಿ ಸಖಿ ಯೋಜನೆಯ ಅಡಿ ದಾಖಲಾದ 47 ಪ್ರಕರಣಗಳಲ್ಲಿ 39 ಪ್ರಕರಣಗಳು, ಸಾಂತ್ವನ ಕೇಂದ್ರಗಳಲ್ಲಿ ದಾಖಲಾದ 133 ಪ್ರಕರಣಗಳಲ್ಲಿ 121 ಹಾಗೂ ಸಂರಕ್ಷಣಾಧಿಕಾರಿಗಳ ಹಂತದಲ್ಲಿ ದಾಖಲಾದ 08 ಪ್ರಕರಣಗಳಲ್ಲಿ 01 ಪ್ರಕರಣವು ಸಮಾಲೋಚನೆಯಿಂದ ಇತ್ಯರ್ಥಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಮೇಶ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ವಿಜಯೇಂದ್ರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ನಿರ್ದೇಶಕ ಶ್ರೀಕಂಠ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…