ಅಂಗನವಾಡಿ ಕಟ್ಟಡಗಳ ಮೂಲ ಸೌಕರ್ಯಕ್ಕೆ ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಶಿವಶಂಕರ್. ಎನ್

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸಲು ಅಧಿಕಾರಿಗಳು ಒತ್ತು ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಮೇಲ್ವಿಚಾರಣೆ ಸಮಿತಿ, ಪೋಷಣ್ ಅಭಿಯಾನ ಸಮನ್ವಯ ಸಮಿತಿ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ರಕ್ಷಣೆ 2005-2006, ಬಾಲ್ಯ ವಿವಾಹ ನಿಷೇಧ ಸಮಿತಿ ಸಭೆ ಸೇರಿದಂತೆ ವಿವಿಧ ಸಮಿತಿ ಸಭೆಗಳ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 1277 ಅಂಗನವಾಡಿ ಕೇಂದ್ರಗಳಿದ್ದು 984 ಸ್ವಂತ ಅಂಗನವಾಡಿ ಕಟ್ಟಡಗಳಲ್ಲಿ, 4 ಅಂಗನವಾಡಿಗಳು ಪಂಚಾಯಿತಿ ಕಟ್ಟಡಗಳಲ್ಲಿ, 58 ಅಂಗನವಾಡಿಗಳು ಸಮುದಾಯ ಭವನದಲ್ಲಿ, 85 ಅಂಗನವಾಡಿಗಳು ಶಾಲೆಗಳಲ್ಲಿ ಹಾಗೂ 146 ಅಂಗನವಾಡಿಗಳು ಬಾಡಿಗೆ ಕಟ್ಟಡಗಳಲಲ್ಲಿ ಕಾರ್ಯನಿರ್ವಹಿಸುತ್ತಿವೆ. ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಬೇಕು ಹಾಗೂ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಶೌಚಾಲಯ, ವಿದ್ಯುತ್, ಫ್ಯಾನ್, ನೀರು ಸೇರಿದಂತೆ ಮೂಲ ಸೌಕರ್ಯಕ್ಕೆ ಶೀಘ್ರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಪೌಷ್ಟಿಕತೆಯಿಂದ ಬಳಲುತ್ತಿರುವ ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ಪೋಷಣ್ ಅಭಿಯಾನದಡಿ ಪೌಷ್ಠಿಕ ಆಹಾರ ನೀಡಿ ಅವರನ್ನು ಸದೃಢರನ್ನಾಗಿಸಬೇಕು ಎಂದರಲ್ಲದೆ ಐ.ಸಿ.ಡಿ.ಎಸ್ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ, ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವ ಮೂಲಕ ಜಿಲ್ಲೆಯನ್ನು ಅಪೌಷ್ಟಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದರು.

ಕೌಟುಂಬಿಕ ಹಿಂಸೆಗೊಳಗಾದ ಮಹಿಳೆಯರಿಗೆ ಸಕಾಲದಲ್ಲಿ ಆಪ್ತ ಸಮಾಲೋಚನೆ ನಡೆಸಿ ಆತ್ಮಸ್ಥೈರ್ಯ ತುಂಬಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ದೌರ್ಜನ್ಯಗೊಳಗಾದ ಮಹಿಳೆಯರಿಗೆ ಸೂಕ್ತ ಮಾರ್ಗದರ್ಶನ ನೀಡಿ ನ್ಯಾಯ ಒದಗಿಸಬೇಕು.

ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ರಡಿ ಜಿಲ್ಲೆಯಲ್ಲಿ 2023 ರ ಏಪ್ರಿಲ್ ಮಾಹೆಯಿಂದ ಜೂನ್ ಮಾಹೆಯವರೆಗೆ ಒಟ್ಟು 8 ಪ್ರಕರಣಗಳು ದಾಖಲಾಗಿದೆ. ಈ ಪೈಕಿ ದೇವನಹಳ್ಳಿಯಲ್ಲಿ 01, ದೊಡ್ಡಬಳ್ಳಾಪುರ 04, ಹೊಸಕೋಟೆ ಯಲ್ಲಿ 03 ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಯಲಾಗಿದೆ ಎಂದರಲ್ಲದೆ ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆ ಕುರಿತಂತೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕೆಂದು ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್ ಮಾತನಾಡಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ2005 ರಡಿ ನಿಯಮ 2006 ರ ಪ್ರಸಕ್ತ ಸಾಲಿನಲ್ಲಿ ಸಖಿ ಯೋಜನೆಯ ಅಡಿ ದಾಖಲಾದ 47 ಪ್ರಕರಣಗಳಲ್ಲಿ 39 ಪ್ರಕರಣಗಳು, ಸಾಂತ್ವನ ಕೇಂದ್ರಗಳಲ್ಲಿ ದಾಖಲಾದ 133 ಪ್ರಕರಣಗಳಲ್ಲಿ 121 ಹಾಗೂ ಸಂರಕ್ಷಣಾಧಿಕಾರಿಗಳ ಹಂತದಲ್ಲಿ ದಾಖಲಾದ 08 ಪ್ರಕರಣಗಳಲ್ಲಿ 01 ಪ್ರಕರಣವು ಸಮಾಲೋಚನೆಯಿಂದ ಇತ್ಯರ್ಥಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಮೇಶ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ವಿಜಯೇಂದ್ರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ನಿರ್ದೇಶಕ ಶ್ರೀಕಂಠ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

10 minutes ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

5 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

14 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

20 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

21 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago