ಕೋಲಾರ: ಅಂಗನವಾಡಿ ಕಾರ್ಯಕರ್ತರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜ.23 ರಂದು ಮಂಗಳವಾರ ಕೋಲಾರ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ಅವರ ನಗರದಲ್ಲಿರುವ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಿದ್ದು ಇದರ ಭಾಗವಾಗಿ ಅಂಗನವಾಡಿ ಕಾರ್ಯಕರ್ತರು ತಾಲೂಕಿನಲ್ಲಿ ಗ್ರಾಪಂ ಹಾಗೂ ಹೋಬಳಿ ಕೇಂದ್ರಗಳಲ್ಲಿ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಅಂಗನವಾಡಿ ನೌಕರರ ತಾಲೂಕು ಅಧ್ಯಕ್ಷೆ ಕಲ್ಪನಾ ಮಾತನಾಡಿ, ದೇಶಾದ್ಯಂತ ಎಲ್ಲಾ ಸಂಸದರ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಯಲಿದೆ. ಕರ್ನಾಟಕದಲ್ಲೂ ಎಲ್ಲಾ 28 ಸಂಸದರ ಕಚೇರಿ ಎದುರು ಧರಣಿ ನಡೆಸಲಿದ್ದೇವೆ. ಜ.23ರಂದು ಬೆಳಗ್ಗೆ 10ಗಂಟೆಯಿಂದ 24ರ ಮುಂಜಾನೆ 5 ಗಂಟೆಯವರೆಗೆ ನಿರಂತರ ಧರಣಿ ನಡೆಯಲಿದೆ. ಒಂದು ದಿನ ಎಲ್ಲಾ ಅಂಗನವಾಡಿಗಳನ್ನು ಮುಚ್ಚಿ ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು
ಅಂಗನವಾಡಿ ನೌಕರರು ಕಳೆದ 49 ವರ್ಷಗಳಿಂದ ಸರಕಾರಿ ನೌಕರರಾಗಿ ದುಡಿಯುತಿದ್ದರೂ ಕನಿಷ್ಠ ವೇತನ, ಪಿಎಫ್, ಇಎಸ್ಐ ಸೇರಿದಂತೆ ಯಾವುದೇ ಸೌಲಭ್ಯಗಳಿಲ್ಲದೇ ಈಗಲೂ ದುಡಿಯುತಿದ್ದಾರೆ. ನಿವೃತ್ತಿ ನಂತರದ ಪಿಂಚಣಿಯೂ ಅವರಿಗೆ ಸಹ ಸಿಗುತ್ತಿಲ್ಲ. ದೇಶದಲ್ಲಿ 14 ಲಕ್ಷ ಅಂಗನವಾಡಿಗಳಿದ್ದು, ಇವುಗಳಲ್ಲಿ 28 ಲಕ್ಷ ಕಾರ್ಯಕರ್ತರು ಹಾಗೂ ಸಹಾಯಕಿಯರು ದುಡಿಯುತಿದ್ದಾರೆ. 11 ಕೋಟಿಯಷ್ಟು ಮಕ್ಕಳು ಅಂಗನವಾಡಿಯಲ್ಲಿದ್ದಾರೆ. ಇದರೊಂದಿಗೆ ಎಂಟು ಕೋಟಿ ಗರ್ಭಿಣಿಯರು ಹಾಗೂ ಬಾಣಂತಿಯರು ಸಹ ಅಂಗನವಾಡಿಯಿಂದ ವಿವಿಧ ಸೌಲಭ್ಯ ಪಡೆಯುತಿದ್ದಾರೆ. ಇಷ್ಟೆಲ್ಲಾ ಇದ್ದರೂ ಕೇಂದ್ರ ಮತ್ತು ರಾಜ್ಯ ಸರಕಾರ ಇವರಿಗೆ ಸೌಲಭ್ಯಗಳನ್ನು ನೀಡಲು ಹಿಂದೇಟು ಹಾಕುತ್ತಾ ಇದ್ದಾರೆ ಎಂದು ದೂರಿದರು.
ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, ನಮಗೆ ಸರಕಾರದ ವೇತನದ ಜೊತೆಗೆ ಗೌರವಧನವನ್ನು ನೀಡುತ್ತಿದೆ. ಎಲ್ಲಾ ಕೆಲಸಗಳನ್ನು ನಮ್ಮಿಂದ ಮಾಡಿ ಸಿಕೊಳ್ಳುವ ಸರಕಾರ, ಸರಕಾರಿ ನೌಕರರಾಗಿ ನಮ್ಮನ್ನು ಪರಿಗಣಿಸುತ್ತಿಲ್ಲ. ಇಲಾಖೇತರ ಕೆಲಸಗಳಾದ ಬಿಎಲ್ಓ ಸರ್ವೇ, ಐಸಿಡಿಎಸ್ ಯೋಜನೇತರ ಕೆಲಸಗಳಿಗೆಲ್ಲಾ ಅಂಗನವಾಡಿ ನೌಕರರನ್ನು ಬಳಸಿಕೊಳ್ಳಲಾಗುತ್ತಿದೆ. 49 ವರ್ಷಗಳಿಂದ ದುಡಿಯುತ್ತಿದ್ದೇವೆ ನೌಕರರಿಗೆ 31 ಸಾವಿರ ರೂ.ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳು ಹಾಗೂ ಕನಿಷ್ಠ 10 ಸಾವಿರ ರೂ.ಪಿಂಚಣೆ ನೀಡಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಖಜಾಂಚಿ ಲಕ್ಷ್ಮೀದೇವಮ್ಮ ಸೇರಿದಂತೆ ಕಾರ್ಯಕರ್ತರು, ಭಾಗವಹಿಸಿದ್ದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…