Categories: ಕೋಲಾರ

ಅಂಗನವಾಡಿ ಕಾರ್ಯಕರ್ತೆರ ಬೇಡಿಕೆಗಳ ಈಡೇರಿಕೆಗಾಗಿ ಜ.23 ರಂದು ಸಂಸದರ ಕಚೇರಿ ಮುಂದೆ ಧರಣಿ

ಕೋಲಾರ: ಅಂಗನವಾಡಿ ಕಾರ್ಯಕರ್ತರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜ.23 ರಂದು ಮಂಗಳವಾರ ಕೋಲಾರ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ಅವರ ನಗರದಲ್ಲಿರುವ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಿದ್ದು ಇದರ ಭಾಗವಾಗಿ ಅಂಗನವಾಡಿ ಕಾರ್ಯಕರ್ತರು ತಾಲೂಕಿನಲ್ಲಿ ಗ್ರಾಪಂ ಹಾಗೂ ಹೋಬಳಿ ಕೇಂದ್ರಗಳಲ್ಲಿ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ನೌಕರರ ತಾಲೂಕು ಅಧ್ಯಕ್ಷೆ ಕಲ್ಪನಾ ಮಾತನಾಡಿ, ದೇಶಾದ್ಯಂತ ಎಲ್ಲಾ ಸಂಸದರ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಯಲಿದೆ. ಕರ್ನಾಟಕದಲ್ಲೂ ಎಲ್ಲಾ 28 ಸಂಸದರ ಕಚೇರಿ ಎದುರು ಧರಣಿ ನಡೆಸಲಿದ್ದೇವೆ. ಜ.23ರಂದು ಬೆಳಗ್ಗೆ 10ಗಂಟೆಯಿಂದ 24ರ ಮುಂಜಾನೆ 5 ಗಂಟೆಯವರೆಗೆ ನಿರಂತರ ಧರಣಿ ನಡೆಯಲಿದೆ. ಒಂದು ದಿನ ಎಲ್ಲಾ ಅಂಗನವಾಡಿಗಳನ್ನು ಮುಚ್ಚಿ ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು

ಅಂಗನವಾಡಿ ನೌಕರರು ಕಳೆದ 49 ವರ್ಷಗಳಿಂದ ಸರಕಾರಿ ನೌಕರರಾಗಿ ದುಡಿಯುತಿದ್ದರೂ ಕನಿಷ್ಠ ವೇತನ, ಪಿಎಫ್, ಇಎಸ್‌ಐ ಸೇರಿದಂತೆ ಯಾವುದೇ ಸೌಲಭ್ಯಗಳಿಲ್ಲದೇ ಈಗಲೂ ದುಡಿಯುತಿದ್ದಾರೆ. ನಿವೃತ್ತಿ ನಂತರದ ಪಿಂಚಣಿಯೂ ಅವರಿಗೆ ಸಹ ಸಿಗುತ್ತಿಲ್ಲ. ದೇಶದಲ್ಲಿ 14 ಲಕ್ಷ ಅಂಗನವಾಡಿಗಳಿದ್ದು, ಇವುಗಳಲ್ಲಿ 28 ಲಕ್ಷ ಕಾರ್ಯಕರ್ತರು ಹಾಗೂ ಸಹಾಯಕಿಯರು ದುಡಿಯುತಿದ್ದಾರೆ. 11 ಕೋಟಿಯಷ್ಟು ಮಕ್ಕಳು ಅಂಗನವಾಡಿಯಲ್ಲಿದ್ದಾರೆ. ಇದರೊಂದಿಗೆ ಎಂಟು ಕೋಟಿ ಗರ್ಭಿಣಿಯರು ಹಾಗೂ ಬಾಣಂತಿಯರು ಸಹ ಅಂಗನವಾಡಿಯಿಂದ ವಿವಿಧ ಸೌಲಭ್ಯ ಪಡೆಯುತಿದ್ದಾರೆ. ಇಷ್ಟೆಲ್ಲಾ ಇದ್ದರೂ ಕೇಂದ್ರ ಮತ್ತು ರಾಜ್ಯ ಸರಕಾರ ಇವರಿಗೆ ಸೌಲಭ್ಯಗಳನ್ನು ನೀಡಲು ಹಿಂದೇಟು ಹಾಕುತ್ತಾ ಇದ್ದಾರೆ ಎಂದು ದೂರಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, ನಮಗೆ ಸರಕಾರದ ವೇತನದ ಜೊತೆಗೆ ಗೌರವಧನವನ್ನು ನೀಡುತ್ತಿದೆ. ಎಲ್ಲಾ ಕೆಲಸಗಳನ್ನು ನಮ್ಮಿಂದ ಮಾಡಿ ಸಿಕೊಳ್ಳುವ ಸರಕಾರ, ಸರಕಾರಿ ನೌಕರರಾಗಿ ನಮ್ಮನ್ನು ಪರಿಗಣಿಸುತ್ತಿಲ್ಲ. ಇಲಾಖೇತರ ಕೆಲಸಗಳಾದ ಬಿಎಲ್‌ಓ ಸರ್ವೇ, ಐಸಿಡಿಎಸ್ ಯೋಜನೇತರ ಕೆಲಸಗಳಿಗೆಲ್ಲಾ ಅಂಗನವಾಡಿ ನೌಕರರನ್ನು ಬಳಸಿಕೊಳ್ಳಲಾಗುತ್ತಿದೆ. 49 ವರ್ಷಗಳಿಂದ ದುಡಿಯುತ್ತಿದ್ದೇವೆ ನೌಕರರಿಗೆ 31 ಸಾವಿರ ರೂ.ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳು ಹಾಗೂ ಕನಿಷ್ಠ 10 ಸಾವಿರ ರೂ.ಪಿಂಚಣೆ ನೀಡಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಖಜಾಂಚಿ ಲಕ್ಷ್ಮೀದೇವಮ್ಮ ಸೇರಿದಂತೆ ಕಾರ್ಯಕರ್ತರು, ಭಾಗವಹಿಸಿದ್ದರು.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

3 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

10 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

22 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago