Categories: ಕೋಲಾರ

ಅಂಗನವಾಡಿ ಕಾರ್ಯಕರ್ತೆರ ಬೇಡಿಕೆಗಳ ಈಡೇರಿಕೆಗಾಗಿ ಜ.23 ರಂದು ಸಂಸದರ ಕಚೇರಿ ಮುಂದೆ ಧರಣಿ

ಕೋಲಾರ: ಅಂಗನವಾಡಿ ಕಾರ್ಯಕರ್ತರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜ.23 ರಂದು ಮಂಗಳವಾರ ಕೋಲಾರ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ಅವರ ನಗರದಲ್ಲಿರುವ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಿದ್ದು ಇದರ ಭಾಗವಾಗಿ ಅಂಗನವಾಡಿ ಕಾರ್ಯಕರ್ತರು ತಾಲೂಕಿನಲ್ಲಿ ಗ್ರಾಪಂ ಹಾಗೂ ಹೋಬಳಿ ಕೇಂದ್ರಗಳಲ್ಲಿ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ನೌಕರರ ತಾಲೂಕು ಅಧ್ಯಕ್ಷೆ ಕಲ್ಪನಾ ಮಾತನಾಡಿ, ದೇಶಾದ್ಯಂತ ಎಲ್ಲಾ ಸಂಸದರ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಯಲಿದೆ. ಕರ್ನಾಟಕದಲ್ಲೂ ಎಲ್ಲಾ 28 ಸಂಸದರ ಕಚೇರಿ ಎದುರು ಧರಣಿ ನಡೆಸಲಿದ್ದೇವೆ. ಜ.23ರಂದು ಬೆಳಗ್ಗೆ 10ಗಂಟೆಯಿಂದ 24ರ ಮುಂಜಾನೆ 5 ಗಂಟೆಯವರೆಗೆ ನಿರಂತರ ಧರಣಿ ನಡೆಯಲಿದೆ. ಒಂದು ದಿನ ಎಲ್ಲಾ ಅಂಗನವಾಡಿಗಳನ್ನು ಮುಚ್ಚಿ ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು

ಅಂಗನವಾಡಿ ನೌಕರರು ಕಳೆದ 49 ವರ್ಷಗಳಿಂದ ಸರಕಾರಿ ನೌಕರರಾಗಿ ದುಡಿಯುತಿದ್ದರೂ ಕನಿಷ್ಠ ವೇತನ, ಪಿಎಫ್, ಇಎಸ್‌ಐ ಸೇರಿದಂತೆ ಯಾವುದೇ ಸೌಲಭ್ಯಗಳಿಲ್ಲದೇ ಈಗಲೂ ದುಡಿಯುತಿದ್ದಾರೆ. ನಿವೃತ್ತಿ ನಂತರದ ಪಿಂಚಣಿಯೂ ಅವರಿಗೆ ಸಹ ಸಿಗುತ್ತಿಲ್ಲ. ದೇಶದಲ್ಲಿ 14 ಲಕ್ಷ ಅಂಗನವಾಡಿಗಳಿದ್ದು, ಇವುಗಳಲ್ಲಿ 28 ಲಕ್ಷ ಕಾರ್ಯಕರ್ತರು ಹಾಗೂ ಸಹಾಯಕಿಯರು ದುಡಿಯುತಿದ್ದಾರೆ. 11 ಕೋಟಿಯಷ್ಟು ಮಕ್ಕಳು ಅಂಗನವಾಡಿಯಲ್ಲಿದ್ದಾರೆ. ಇದರೊಂದಿಗೆ ಎಂಟು ಕೋಟಿ ಗರ್ಭಿಣಿಯರು ಹಾಗೂ ಬಾಣಂತಿಯರು ಸಹ ಅಂಗನವಾಡಿಯಿಂದ ವಿವಿಧ ಸೌಲಭ್ಯ ಪಡೆಯುತಿದ್ದಾರೆ. ಇಷ್ಟೆಲ್ಲಾ ಇದ್ದರೂ ಕೇಂದ್ರ ಮತ್ತು ರಾಜ್ಯ ಸರಕಾರ ಇವರಿಗೆ ಸೌಲಭ್ಯಗಳನ್ನು ನೀಡಲು ಹಿಂದೇಟು ಹಾಕುತ್ತಾ ಇದ್ದಾರೆ ಎಂದು ದೂರಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, ನಮಗೆ ಸರಕಾರದ ವೇತನದ ಜೊತೆಗೆ ಗೌರವಧನವನ್ನು ನೀಡುತ್ತಿದೆ. ಎಲ್ಲಾ ಕೆಲಸಗಳನ್ನು ನಮ್ಮಿಂದ ಮಾಡಿ ಸಿಕೊಳ್ಳುವ ಸರಕಾರ, ಸರಕಾರಿ ನೌಕರರಾಗಿ ನಮ್ಮನ್ನು ಪರಿಗಣಿಸುತ್ತಿಲ್ಲ. ಇಲಾಖೇತರ ಕೆಲಸಗಳಾದ ಬಿಎಲ್‌ಓ ಸರ್ವೇ, ಐಸಿಡಿಎಸ್ ಯೋಜನೇತರ ಕೆಲಸಗಳಿಗೆಲ್ಲಾ ಅಂಗನವಾಡಿ ನೌಕರರನ್ನು ಬಳಸಿಕೊಳ್ಳಲಾಗುತ್ತಿದೆ. 49 ವರ್ಷಗಳಿಂದ ದುಡಿಯುತ್ತಿದ್ದೇವೆ ನೌಕರರಿಗೆ 31 ಸಾವಿರ ರೂ.ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳು ಹಾಗೂ ಕನಿಷ್ಠ 10 ಸಾವಿರ ರೂ.ಪಿಂಚಣೆ ನೀಡಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಖಜಾಂಚಿ ಲಕ್ಷ್ಮೀದೇವಮ್ಮ ಸೇರಿದಂತೆ ಕಾರ್ಯಕರ್ತರು, ಭಾಗವಹಿಸಿದ್ದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

4 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

4 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

6 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

10 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

16 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago