Categories: ಕೋಲಾರ

ಅಂಗನವಾಡಿ ಕಾರ್ಯಕರ್ತೆರ ಬೇಡಿಕೆಗಳ ಈಡೇರಿಕೆಗಾಗಿ ಜ.23 ರಂದು ಸಂಸದರ ಕಚೇರಿ ಮುಂದೆ ಧರಣಿ

ಕೋಲಾರ: ಅಂಗನವಾಡಿ ಕಾರ್ಯಕರ್ತರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜ.23 ರಂದು ಮಂಗಳವಾರ ಕೋಲಾರ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ಅವರ ನಗರದಲ್ಲಿರುವ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಿದ್ದು ಇದರ ಭಾಗವಾಗಿ ಅಂಗನವಾಡಿ ಕಾರ್ಯಕರ್ತರು ತಾಲೂಕಿನಲ್ಲಿ ಗ್ರಾಪಂ ಹಾಗೂ ಹೋಬಳಿ ಕೇಂದ್ರಗಳಲ್ಲಿ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ನೌಕರರ ತಾಲೂಕು ಅಧ್ಯಕ್ಷೆ ಕಲ್ಪನಾ ಮಾತನಾಡಿ, ದೇಶಾದ್ಯಂತ ಎಲ್ಲಾ ಸಂಸದರ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಯಲಿದೆ. ಕರ್ನಾಟಕದಲ್ಲೂ ಎಲ್ಲಾ 28 ಸಂಸದರ ಕಚೇರಿ ಎದುರು ಧರಣಿ ನಡೆಸಲಿದ್ದೇವೆ. ಜ.23ರಂದು ಬೆಳಗ್ಗೆ 10ಗಂಟೆಯಿಂದ 24ರ ಮುಂಜಾನೆ 5 ಗಂಟೆಯವರೆಗೆ ನಿರಂತರ ಧರಣಿ ನಡೆಯಲಿದೆ. ಒಂದು ದಿನ ಎಲ್ಲಾ ಅಂಗನವಾಡಿಗಳನ್ನು ಮುಚ್ಚಿ ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು

ಅಂಗನವಾಡಿ ನೌಕರರು ಕಳೆದ 49 ವರ್ಷಗಳಿಂದ ಸರಕಾರಿ ನೌಕರರಾಗಿ ದುಡಿಯುತಿದ್ದರೂ ಕನಿಷ್ಠ ವೇತನ, ಪಿಎಫ್, ಇಎಸ್‌ಐ ಸೇರಿದಂತೆ ಯಾವುದೇ ಸೌಲಭ್ಯಗಳಿಲ್ಲದೇ ಈಗಲೂ ದುಡಿಯುತಿದ್ದಾರೆ. ನಿವೃತ್ತಿ ನಂತರದ ಪಿಂಚಣಿಯೂ ಅವರಿಗೆ ಸಹ ಸಿಗುತ್ತಿಲ್ಲ. ದೇಶದಲ್ಲಿ 14 ಲಕ್ಷ ಅಂಗನವಾಡಿಗಳಿದ್ದು, ಇವುಗಳಲ್ಲಿ 28 ಲಕ್ಷ ಕಾರ್ಯಕರ್ತರು ಹಾಗೂ ಸಹಾಯಕಿಯರು ದುಡಿಯುತಿದ್ದಾರೆ. 11 ಕೋಟಿಯಷ್ಟು ಮಕ್ಕಳು ಅಂಗನವಾಡಿಯಲ್ಲಿದ್ದಾರೆ. ಇದರೊಂದಿಗೆ ಎಂಟು ಕೋಟಿ ಗರ್ಭಿಣಿಯರು ಹಾಗೂ ಬಾಣಂತಿಯರು ಸಹ ಅಂಗನವಾಡಿಯಿಂದ ವಿವಿಧ ಸೌಲಭ್ಯ ಪಡೆಯುತಿದ್ದಾರೆ. ಇಷ್ಟೆಲ್ಲಾ ಇದ್ದರೂ ಕೇಂದ್ರ ಮತ್ತು ರಾಜ್ಯ ಸರಕಾರ ಇವರಿಗೆ ಸೌಲಭ್ಯಗಳನ್ನು ನೀಡಲು ಹಿಂದೇಟು ಹಾಕುತ್ತಾ ಇದ್ದಾರೆ ಎಂದು ದೂರಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, ನಮಗೆ ಸರಕಾರದ ವೇತನದ ಜೊತೆಗೆ ಗೌರವಧನವನ್ನು ನೀಡುತ್ತಿದೆ. ಎಲ್ಲಾ ಕೆಲಸಗಳನ್ನು ನಮ್ಮಿಂದ ಮಾಡಿ ಸಿಕೊಳ್ಳುವ ಸರಕಾರ, ಸರಕಾರಿ ನೌಕರರಾಗಿ ನಮ್ಮನ್ನು ಪರಿಗಣಿಸುತ್ತಿಲ್ಲ. ಇಲಾಖೇತರ ಕೆಲಸಗಳಾದ ಬಿಎಲ್‌ಓ ಸರ್ವೇ, ಐಸಿಡಿಎಸ್ ಯೋಜನೇತರ ಕೆಲಸಗಳಿಗೆಲ್ಲಾ ಅಂಗನವಾಡಿ ನೌಕರರನ್ನು ಬಳಸಿಕೊಳ್ಳಲಾಗುತ್ತಿದೆ. 49 ವರ್ಷಗಳಿಂದ ದುಡಿಯುತ್ತಿದ್ದೇವೆ ನೌಕರರಿಗೆ 31 ಸಾವಿರ ರೂ.ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳು ಹಾಗೂ ಕನಿಷ್ಠ 10 ಸಾವಿರ ರೂ.ಪಿಂಚಣೆ ನೀಡಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಖಜಾಂಚಿ ಲಕ್ಷ್ಮೀದೇವಮ್ಮ ಸೇರಿದಂತೆ ಕಾರ್ಯಕರ್ತರು, ಭಾಗವಹಿಸಿದ್ದರು.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

10 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

15 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

16 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

18 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

21 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago