Categories: ಕೋಲಾರ

ಅಂಗನವಾಡಿ ಕಾರ್ಯಕರ್ತೆರ ಬೇಡಿಕೆಗಳ ಈಡೇರಿಕೆಗಾಗಿ ಜ.23 ರಂದು ಸಂಸದರ ಕಚೇರಿ ಮುಂದೆ ಧರಣಿ

ಕೋಲಾರ: ಅಂಗನವಾಡಿ ಕಾರ್ಯಕರ್ತರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜ.23 ರಂದು ಮಂಗಳವಾರ ಕೋಲಾರ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ಅವರ ನಗರದಲ್ಲಿರುವ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಿದ್ದು ಇದರ ಭಾಗವಾಗಿ ಅಂಗನವಾಡಿ ಕಾರ್ಯಕರ್ತರು ತಾಲೂಕಿನಲ್ಲಿ ಗ್ರಾಪಂ ಹಾಗೂ ಹೋಬಳಿ ಕೇಂದ್ರಗಳಲ್ಲಿ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ನೌಕರರ ತಾಲೂಕು ಅಧ್ಯಕ್ಷೆ ಕಲ್ಪನಾ ಮಾತನಾಡಿ, ದೇಶಾದ್ಯಂತ ಎಲ್ಲಾ ಸಂಸದರ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಯಲಿದೆ. ಕರ್ನಾಟಕದಲ್ಲೂ ಎಲ್ಲಾ 28 ಸಂಸದರ ಕಚೇರಿ ಎದುರು ಧರಣಿ ನಡೆಸಲಿದ್ದೇವೆ. ಜ.23ರಂದು ಬೆಳಗ್ಗೆ 10ಗಂಟೆಯಿಂದ 24ರ ಮುಂಜಾನೆ 5 ಗಂಟೆಯವರೆಗೆ ನಿರಂತರ ಧರಣಿ ನಡೆಯಲಿದೆ. ಒಂದು ದಿನ ಎಲ್ಲಾ ಅಂಗನವಾಡಿಗಳನ್ನು ಮುಚ್ಚಿ ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು

ಅಂಗನವಾಡಿ ನೌಕರರು ಕಳೆದ 49 ವರ್ಷಗಳಿಂದ ಸರಕಾರಿ ನೌಕರರಾಗಿ ದುಡಿಯುತಿದ್ದರೂ ಕನಿಷ್ಠ ವೇತನ, ಪಿಎಫ್, ಇಎಸ್‌ಐ ಸೇರಿದಂತೆ ಯಾವುದೇ ಸೌಲಭ್ಯಗಳಿಲ್ಲದೇ ಈಗಲೂ ದುಡಿಯುತಿದ್ದಾರೆ. ನಿವೃತ್ತಿ ನಂತರದ ಪಿಂಚಣಿಯೂ ಅವರಿಗೆ ಸಹ ಸಿಗುತ್ತಿಲ್ಲ. ದೇಶದಲ್ಲಿ 14 ಲಕ್ಷ ಅಂಗನವಾಡಿಗಳಿದ್ದು, ಇವುಗಳಲ್ಲಿ 28 ಲಕ್ಷ ಕಾರ್ಯಕರ್ತರು ಹಾಗೂ ಸಹಾಯಕಿಯರು ದುಡಿಯುತಿದ್ದಾರೆ. 11 ಕೋಟಿಯಷ್ಟು ಮಕ್ಕಳು ಅಂಗನವಾಡಿಯಲ್ಲಿದ್ದಾರೆ. ಇದರೊಂದಿಗೆ ಎಂಟು ಕೋಟಿ ಗರ್ಭಿಣಿಯರು ಹಾಗೂ ಬಾಣಂತಿಯರು ಸಹ ಅಂಗನವಾಡಿಯಿಂದ ವಿವಿಧ ಸೌಲಭ್ಯ ಪಡೆಯುತಿದ್ದಾರೆ. ಇಷ್ಟೆಲ್ಲಾ ಇದ್ದರೂ ಕೇಂದ್ರ ಮತ್ತು ರಾಜ್ಯ ಸರಕಾರ ಇವರಿಗೆ ಸೌಲಭ್ಯಗಳನ್ನು ನೀಡಲು ಹಿಂದೇಟು ಹಾಕುತ್ತಾ ಇದ್ದಾರೆ ಎಂದು ದೂರಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, ನಮಗೆ ಸರಕಾರದ ವೇತನದ ಜೊತೆಗೆ ಗೌರವಧನವನ್ನು ನೀಡುತ್ತಿದೆ. ಎಲ್ಲಾ ಕೆಲಸಗಳನ್ನು ನಮ್ಮಿಂದ ಮಾಡಿ ಸಿಕೊಳ್ಳುವ ಸರಕಾರ, ಸರಕಾರಿ ನೌಕರರಾಗಿ ನಮ್ಮನ್ನು ಪರಿಗಣಿಸುತ್ತಿಲ್ಲ. ಇಲಾಖೇತರ ಕೆಲಸಗಳಾದ ಬಿಎಲ್‌ಓ ಸರ್ವೇ, ಐಸಿಡಿಎಸ್ ಯೋಜನೇತರ ಕೆಲಸಗಳಿಗೆಲ್ಲಾ ಅಂಗನವಾಡಿ ನೌಕರರನ್ನು ಬಳಸಿಕೊಳ್ಳಲಾಗುತ್ತಿದೆ. 49 ವರ್ಷಗಳಿಂದ ದುಡಿಯುತ್ತಿದ್ದೇವೆ ನೌಕರರಿಗೆ 31 ಸಾವಿರ ರೂ.ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳು ಹಾಗೂ ಕನಿಷ್ಠ 10 ಸಾವಿರ ರೂ.ಪಿಂಚಣೆ ನೀಡಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಖಜಾಂಚಿ ಲಕ್ಷ್ಮೀದೇವಮ್ಮ ಸೇರಿದಂತೆ ಕಾರ್ಯಕರ್ತರು, ಭಾಗವಹಿಸಿದ್ದರು.

Ramesh Babu

Journalist

Recent Posts

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ರಾಜಾರೋಷವಾಗಿ ಕಳವು ಮಾಡಿಕೊಂಡು ಹೋಗಿರುವ ಘಟನೆ…

1 minute ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

14 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

15 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

15 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

16 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

19 hours ago