Categories: ಕೋಲಾರ

ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪದಾರ್ಥಗಳ ಪೂರೈಕೆ ಆರೋಪ: ಪೊರೈಕೆ ಮಾಡುವವರ ವಿರುದ್ಧ ಕ್ರಮಕ್ಕೆ ಸಿದ್ಧ- ಎಂಎಲ್ಸಿ ಅನಿಲ್ ಕುಮಾರ್

ಕೋಲಾರ: ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡುತ್ತಿರುವ ಆಹಾರ ಪದಾರ್ಥಗಳು ಕಳಪೆಯಾಗಿರುವುದರ ಬಗ್ಗೆ ಗಮನಕ್ಕೆ ತಂದಿದ್ದು ಇಂತಹ ಆಹಾರ ಪದಾರ್ಥಗಳನ್ನು ಪೊರೈಕೆ ಮಾಡುವವರ ವಿರುದ್ಧ ಕ್ರಮಕೈಗೊಂಡು ಸರ್ಕಾರದೊಂದಿಗೆ ಚರ್ಚಿಸಿ ಉತ್ತಮ ಗುಣಮಟ್ಟದ ಆಹಾರ ಪೂರೈಕೆಗೆ ಅಧ್ಯತೆ ನೀಡಲಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್‌ ಫೋನ್, ಮೆಡಿಕಲ್ ಕಿಟ್, ಹಾಗೂ ಭಾಗ್ಯಲಕ್ಷ್ಮೀ ಯೋಜನೆಯ ಪಾಸ್ ಬುಕ್ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳನ್ನು ಗಮನಕ್ಕೆ ಬಂದಾಗ ಮಾತ್ರವೇ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೂ ಕೂಡಲೇ ಗಮನಕ್ಕೆ ತನ್ನಿ ಶಾಸಕರೊಂದಿಗೆ ನಾನು ಇದ್ದು ಸರಕಾರದ ಗಮನಕ್ಕೆ ತಂದು ಪರಿಹಾರ ಮಾಡತ್ತೇವೆ ಮಕ್ಕಳ ಭವಿಷ್ಯವನ್ನು ನಿರ್ಮಾಣ ಮಾಡುವ ಜೊತೆಗೆ ಹಾರೈಕೆ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದರು.

ಅಂಗನವಾಡಿ ಕಾರ್ಯಕರ್ತರು ಸರಕಾರದ ಪ್ರತಿಯೊಂದು ಯೋಜನೆಗಳನ್ನು ಜಾರಿ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ ನೀವು ಎಲ್ಲರೂ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಸಮಾಜಮುಖಿಯಾಗಿ ಕೆಲಸ ಮಾಡಬೇಕು. ದಿನನಿತ್ಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಾಜರಾತಿ, ಅವರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಣೆ, ಅಂಗನವಾಡಿಯಲ್ಲಿ ಮೂಲ ಸಮಸ್ಯೆಗಳ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತನ್ನಿ ಸರಕಾರವು ವಿತರಿಸಿದ ಸ್ಮಾಟ್ ಪೋನ್ ಮೂಲಕ ಅನೇಕ ಯೋಜನೆಗಳ ಸದುಪಯೋಗವನ್ನು ಪಡೆಯಬಹುದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ, ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಒದಗಿಸಲು ಈಗಾಗಲೇ ಕ್ರಮ ವಹಿಸಲಾಗಿದೆ ಅದರಂತೆಯೇ ಸುಮಾರು 2.50 ಕೋಟಿ ವೆಚ್ಚದಲ್ಲಿ ನಗರದಲ್ಲಿ ನಿವೇಶನಗಳನ್ನು ಖರೀದಿ ಮಾಡಲಾಗಿದೆ ಅಂಗನವಾಡಿ ಕೇಂದ್ರಗಳಿಗೆ ವಿಶೇಷ ಅನುದಾನವನ್ನು ಸಹ ತರಲಾಗುತ್ತದೆ ಸರಕಾರದಿಂದ ನೀಡುವ ಪ್ರತಿಯೊಂದು ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿಡಿಪಿಒ ವಿನೋದ್ ರಾಜ್, ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕ ವಿಶ್ವನಾಥ್, ವಿವಿಧ ಗ್ರಾಪಂ ಅಧ್ಯಕ್ಷರಾದ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಕೊಂಡರಾಜನಹಳ್ಳಿ ಮಂಜುನಾಥ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ನುಕ್ಕನಹಳ್ಳಿ ಶ್ರೀನಿವಾಸ್, ಅಫ್ಸರ್, ಮಲೇಷಿಯಾ ರಾಜಕುಮಾರ್, ಖಾದ್ರಿಪುರ ಬಾಬು, ಮುಂತಾದವರು ಇದ್ದರು.

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

3 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

4 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

5 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

5 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

9 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

16 hours ago