Categories: ಕೋಲಾರ

ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪದಾರ್ಥಗಳ ಪೂರೈಕೆ ಆರೋಪ: ಪೊರೈಕೆ ಮಾಡುವವರ ವಿರುದ್ಧ ಕ್ರಮಕ್ಕೆ ಸಿದ್ಧ- ಎಂಎಲ್ಸಿ ಅನಿಲ್ ಕುಮಾರ್

ಕೋಲಾರ: ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡುತ್ತಿರುವ ಆಹಾರ ಪದಾರ್ಥಗಳು ಕಳಪೆಯಾಗಿರುವುದರ ಬಗ್ಗೆ ಗಮನಕ್ಕೆ ತಂದಿದ್ದು ಇಂತಹ ಆಹಾರ ಪದಾರ್ಥಗಳನ್ನು ಪೊರೈಕೆ ಮಾಡುವವರ ವಿರುದ್ಧ ಕ್ರಮಕೈಗೊಂಡು ಸರ್ಕಾರದೊಂದಿಗೆ ಚರ್ಚಿಸಿ ಉತ್ತಮ ಗುಣಮಟ್ಟದ ಆಹಾರ ಪೂರೈಕೆಗೆ ಅಧ್ಯತೆ ನೀಡಲಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್‌ ಫೋನ್, ಮೆಡಿಕಲ್ ಕಿಟ್, ಹಾಗೂ ಭಾಗ್ಯಲಕ್ಷ್ಮೀ ಯೋಜನೆಯ ಪಾಸ್ ಬುಕ್ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳನ್ನು ಗಮನಕ್ಕೆ ಬಂದಾಗ ಮಾತ್ರವೇ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೂ ಕೂಡಲೇ ಗಮನಕ್ಕೆ ತನ್ನಿ ಶಾಸಕರೊಂದಿಗೆ ನಾನು ಇದ್ದು ಸರಕಾರದ ಗಮನಕ್ಕೆ ತಂದು ಪರಿಹಾರ ಮಾಡತ್ತೇವೆ ಮಕ್ಕಳ ಭವಿಷ್ಯವನ್ನು ನಿರ್ಮಾಣ ಮಾಡುವ ಜೊತೆಗೆ ಹಾರೈಕೆ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದರು.

ಅಂಗನವಾಡಿ ಕಾರ್ಯಕರ್ತರು ಸರಕಾರದ ಪ್ರತಿಯೊಂದು ಯೋಜನೆಗಳನ್ನು ಜಾರಿ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ ನೀವು ಎಲ್ಲರೂ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಸಮಾಜಮುಖಿಯಾಗಿ ಕೆಲಸ ಮಾಡಬೇಕು. ದಿನನಿತ್ಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಾಜರಾತಿ, ಅವರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಣೆ, ಅಂಗನವಾಡಿಯಲ್ಲಿ ಮೂಲ ಸಮಸ್ಯೆಗಳ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತನ್ನಿ ಸರಕಾರವು ವಿತರಿಸಿದ ಸ್ಮಾಟ್ ಪೋನ್ ಮೂಲಕ ಅನೇಕ ಯೋಜನೆಗಳ ಸದುಪಯೋಗವನ್ನು ಪಡೆಯಬಹುದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ, ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಒದಗಿಸಲು ಈಗಾಗಲೇ ಕ್ರಮ ವಹಿಸಲಾಗಿದೆ ಅದರಂತೆಯೇ ಸುಮಾರು 2.50 ಕೋಟಿ ವೆಚ್ಚದಲ್ಲಿ ನಗರದಲ್ಲಿ ನಿವೇಶನಗಳನ್ನು ಖರೀದಿ ಮಾಡಲಾಗಿದೆ ಅಂಗನವಾಡಿ ಕೇಂದ್ರಗಳಿಗೆ ವಿಶೇಷ ಅನುದಾನವನ್ನು ಸಹ ತರಲಾಗುತ್ತದೆ ಸರಕಾರದಿಂದ ನೀಡುವ ಪ್ರತಿಯೊಂದು ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿಡಿಪಿಒ ವಿನೋದ್ ರಾಜ್, ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕ ವಿಶ್ವನಾಥ್, ವಿವಿಧ ಗ್ರಾಪಂ ಅಧ್ಯಕ್ಷರಾದ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಕೊಂಡರಾಜನಹಳ್ಳಿ ಮಂಜುನಾಥ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ನುಕ್ಕನಹಳ್ಳಿ ಶ್ರೀನಿವಾಸ್, ಅಫ್ಸರ್, ಮಲೇಷಿಯಾ ರಾಜಕುಮಾರ್, ಖಾದ್ರಿಪುರ ಬಾಬು, ಮುಂತಾದವರು ಇದ್ದರು.

Ramesh Babu

Journalist

Recent Posts

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

33 minutes ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

2 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

15 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

15 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

18 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

18 hours ago