Categories: ಕೋಲಾರ

ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪದಾರ್ಥಗಳ ಪೂರೈಕೆ ಆರೋಪ: ಪೊರೈಕೆ ಮಾಡುವವರ ವಿರುದ್ಧ ಕ್ರಮಕ್ಕೆ ಸಿದ್ಧ- ಎಂಎಲ್ಸಿ ಅನಿಲ್ ಕುಮಾರ್

ಕೋಲಾರ: ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡುತ್ತಿರುವ ಆಹಾರ ಪದಾರ್ಥಗಳು ಕಳಪೆಯಾಗಿರುವುದರ ಬಗ್ಗೆ ಗಮನಕ್ಕೆ ತಂದಿದ್ದು ಇಂತಹ ಆಹಾರ ಪದಾರ್ಥಗಳನ್ನು ಪೊರೈಕೆ ಮಾಡುವವರ ವಿರುದ್ಧ ಕ್ರಮಕೈಗೊಂಡು ಸರ್ಕಾರದೊಂದಿಗೆ ಚರ್ಚಿಸಿ ಉತ್ತಮ ಗುಣಮಟ್ಟದ ಆಹಾರ ಪೂರೈಕೆಗೆ ಅಧ್ಯತೆ ನೀಡಲಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್‌ ಫೋನ್, ಮೆಡಿಕಲ್ ಕಿಟ್, ಹಾಗೂ ಭಾಗ್ಯಲಕ್ಷ್ಮೀ ಯೋಜನೆಯ ಪಾಸ್ ಬುಕ್ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳನ್ನು ಗಮನಕ್ಕೆ ಬಂದಾಗ ಮಾತ್ರವೇ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೂ ಕೂಡಲೇ ಗಮನಕ್ಕೆ ತನ್ನಿ ಶಾಸಕರೊಂದಿಗೆ ನಾನು ಇದ್ದು ಸರಕಾರದ ಗಮನಕ್ಕೆ ತಂದು ಪರಿಹಾರ ಮಾಡತ್ತೇವೆ ಮಕ್ಕಳ ಭವಿಷ್ಯವನ್ನು ನಿರ್ಮಾಣ ಮಾಡುವ ಜೊತೆಗೆ ಹಾರೈಕೆ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದರು.

ಅಂಗನವಾಡಿ ಕಾರ್ಯಕರ್ತರು ಸರಕಾರದ ಪ್ರತಿಯೊಂದು ಯೋಜನೆಗಳನ್ನು ಜಾರಿ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ ನೀವು ಎಲ್ಲರೂ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಸಮಾಜಮುಖಿಯಾಗಿ ಕೆಲಸ ಮಾಡಬೇಕು. ದಿನನಿತ್ಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಾಜರಾತಿ, ಅವರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಣೆ, ಅಂಗನವಾಡಿಯಲ್ಲಿ ಮೂಲ ಸಮಸ್ಯೆಗಳ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತನ್ನಿ ಸರಕಾರವು ವಿತರಿಸಿದ ಸ್ಮಾಟ್ ಪೋನ್ ಮೂಲಕ ಅನೇಕ ಯೋಜನೆಗಳ ಸದುಪಯೋಗವನ್ನು ಪಡೆಯಬಹುದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ, ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಒದಗಿಸಲು ಈಗಾಗಲೇ ಕ್ರಮ ವಹಿಸಲಾಗಿದೆ ಅದರಂತೆಯೇ ಸುಮಾರು 2.50 ಕೋಟಿ ವೆಚ್ಚದಲ್ಲಿ ನಗರದಲ್ಲಿ ನಿವೇಶನಗಳನ್ನು ಖರೀದಿ ಮಾಡಲಾಗಿದೆ ಅಂಗನವಾಡಿ ಕೇಂದ್ರಗಳಿಗೆ ವಿಶೇಷ ಅನುದಾನವನ್ನು ಸಹ ತರಲಾಗುತ್ತದೆ ಸರಕಾರದಿಂದ ನೀಡುವ ಪ್ರತಿಯೊಂದು ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿಡಿಪಿಒ ವಿನೋದ್ ರಾಜ್, ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕ ವಿಶ್ವನಾಥ್, ವಿವಿಧ ಗ್ರಾಪಂ ಅಧ್ಯಕ್ಷರಾದ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಕೊಂಡರಾಜನಹಳ್ಳಿ ಮಂಜುನಾಥ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ನುಕ್ಕನಹಳ್ಳಿ ಶ್ರೀನಿವಾಸ್, ಅಫ್ಸರ್, ಮಲೇಷಿಯಾ ರಾಜಕುಮಾರ್, ಖಾದ್ರಿಪುರ ಬಾಬು, ಮುಂತಾದವರು ಇದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 hour ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

3 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

3 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

8 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

9 hours ago