ಕೋಲಾರ: ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡುತ್ತಿರುವ ಆಹಾರ ಪದಾರ್ಥಗಳು ಕಳಪೆಯಾಗಿರುವುದರ ಬಗ್ಗೆ ಗಮನಕ್ಕೆ ತಂದಿದ್ದು ಇಂತಹ ಆಹಾರ ಪದಾರ್ಥಗಳನ್ನು ಪೊರೈಕೆ ಮಾಡುವವರ ವಿರುದ್ಧ ಕ್ರಮಕೈಗೊಂಡು ಸರ್ಕಾರದೊಂದಿಗೆ ಚರ್ಚಿಸಿ ಉತ್ತಮ ಗುಣಮಟ್ಟದ ಆಹಾರ ಪೂರೈಕೆಗೆ ಅಧ್ಯತೆ ನೀಡಲಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು.
ನಗರದ ಕನ್ನಡ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್ ಫೋನ್, ಮೆಡಿಕಲ್ ಕಿಟ್, ಹಾಗೂ ಭಾಗ್ಯಲಕ್ಷ್ಮೀ ಯೋಜನೆಯ ಪಾಸ್ ಬುಕ್ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳನ್ನು ಗಮನಕ್ಕೆ ಬಂದಾಗ ಮಾತ್ರವೇ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೂ ಕೂಡಲೇ ಗಮನಕ್ಕೆ ತನ್ನಿ ಶಾಸಕರೊಂದಿಗೆ ನಾನು ಇದ್ದು ಸರಕಾರದ ಗಮನಕ್ಕೆ ತಂದು ಪರಿಹಾರ ಮಾಡತ್ತೇವೆ ಮಕ್ಕಳ ಭವಿಷ್ಯವನ್ನು ನಿರ್ಮಾಣ ಮಾಡುವ ಜೊತೆಗೆ ಹಾರೈಕೆ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದರು.
ಅಂಗನವಾಡಿ ಕಾರ್ಯಕರ್ತರು ಸರಕಾರದ ಪ್ರತಿಯೊಂದು ಯೋಜನೆಗಳನ್ನು ಜಾರಿ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ ನೀವು ಎಲ್ಲರೂ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಸಮಾಜಮುಖಿಯಾಗಿ ಕೆಲಸ ಮಾಡಬೇಕು. ದಿನನಿತ್ಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಾಜರಾತಿ, ಅವರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಣೆ, ಅಂಗನವಾಡಿಯಲ್ಲಿ ಮೂಲ ಸಮಸ್ಯೆಗಳ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತನ್ನಿ ಸರಕಾರವು ವಿತರಿಸಿದ ಸ್ಮಾಟ್ ಪೋನ್ ಮೂಲಕ ಅನೇಕ ಯೋಜನೆಗಳ ಸದುಪಯೋಗವನ್ನು ಪಡೆಯಬಹುದಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ, ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಒದಗಿಸಲು ಈಗಾಗಲೇ ಕ್ರಮ ವಹಿಸಲಾಗಿದೆ ಅದರಂತೆಯೇ ಸುಮಾರು 2.50 ಕೋಟಿ ವೆಚ್ಚದಲ್ಲಿ ನಗರದಲ್ಲಿ ನಿವೇಶನಗಳನ್ನು ಖರೀದಿ ಮಾಡಲಾಗಿದೆ ಅಂಗನವಾಡಿ ಕೇಂದ್ರಗಳಿಗೆ ವಿಶೇಷ ಅನುದಾನವನ್ನು ಸಹ ತರಲಾಗುತ್ತದೆ ಸರಕಾರದಿಂದ ನೀಡುವ ಪ್ರತಿಯೊಂದು ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿಡಿಪಿಒ ವಿನೋದ್ ರಾಜ್, ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕ ವಿಶ್ವನಾಥ್, ವಿವಿಧ ಗ್ರಾಪಂ ಅಧ್ಯಕ್ಷರಾದ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಕೊಂಡರಾಜನಹಳ್ಳಿ ಮಂಜುನಾಥ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ನುಕ್ಕನಹಳ್ಳಿ ಶ್ರೀನಿವಾಸ್, ಅಫ್ಸರ್, ಮಲೇಷಿಯಾ ರಾಜಕುಮಾರ್, ಖಾದ್ರಿಪುರ ಬಾಬು, ಮುಂತಾದವರು ಇದ್ದರು.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…