Categories: ಕೋಲಾರ

ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪದಾರ್ಥಗಳ ಪೂರೈಕೆ ಆರೋಪ: ಪೊರೈಕೆ ಮಾಡುವವರ ವಿರುದ್ಧ ಕ್ರಮಕ್ಕೆ ಸಿದ್ಧ- ಎಂಎಲ್ಸಿ ಅನಿಲ್ ಕುಮಾರ್

ಕೋಲಾರ: ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡುತ್ತಿರುವ ಆಹಾರ ಪದಾರ್ಥಗಳು ಕಳಪೆಯಾಗಿರುವುದರ ಬಗ್ಗೆ ಗಮನಕ್ಕೆ ತಂದಿದ್ದು ಇಂತಹ ಆಹಾರ ಪದಾರ್ಥಗಳನ್ನು ಪೊರೈಕೆ ಮಾಡುವವರ ವಿರುದ್ಧ ಕ್ರಮಕೈಗೊಂಡು ಸರ್ಕಾರದೊಂದಿಗೆ ಚರ್ಚಿಸಿ ಉತ್ತಮ ಗುಣಮಟ್ಟದ ಆಹಾರ ಪೂರೈಕೆಗೆ ಅಧ್ಯತೆ ನೀಡಲಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್‌ ಫೋನ್, ಮೆಡಿಕಲ್ ಕಿಟ್, ಹಾಗೂ ಭಾಗ್ಯಲಕ್ಷ್ಮೀ ಯೋಜನೆಯ ಪಾಸ್ ಬುಕ್ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳನ್ನು ಗಮನಕ್ಕೆ ಬಂದಾಗ ಮಾತ್ರವೇ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೂ ಕೂಡಲೇ ಗಮನಕ್ಕೆ ತನ್ನಿ ಶಾಸಕರೊಂದಿಗೆ ನಾನು ಇದ್ದು ಸರಕಾರದ ಗಮನಕ್ಕೆ ತಂದು ಪರಿಹಾರ ಮಾಡತ್ತೇವೆ ಮಕ್ಕಳ ಭವಿಷ್ಯವನ್ನು ನಿರ್ಮಾಣ ಮಾಡುವ ಜೊತೆಗೆ ಹಾರೈಕೆ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದರು.

ಅಂಗನವಾಡಿ ಕಾರ್ಯಕರ್ತರು ಸರಕಾರದ ಪ್ರತಿಯೊಂದು ಯೋಜನೆಗಳನ್ನು ಜಾರಿ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ ನೀವು ಎಲ್ಲರೂ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಸಮಾಜಮುಖಿಯಾಗಿ ಕೆಲಸ ಮಾಡಬೇಕು. ದಿನನಿತ್ಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಾಜರಾತಿ, ಅವರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಣೆ, ಅಂಗನವಾಡಿಯಲ್ಲಿ ಮೂಲ ಸಮಸ್ಯೆಗಳ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತನ್ನಿ ಸರಕಾರವು ವಿತರಿಸಿದ ಸ್ಮಾಟ್ ಪೋನ್ ಮೂಲಕ ಅನೇಕ ಯೋಜನೆಗಳ ಸದುಪಯೋಗವನ್ನು ಪಡೆಯಬಹುದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ, ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಒದಗಿಸಲು ಈಗಾಗಲೇ ಕ್ರಮ ವಹಿಸಲಾಗಿದೆ ಅದರಂತೆಯೇ ಸುಮಾರು 2.50 ಕೋಟಿ ವೆಚ್ಚದಲ್ಲಿ ನಗರದಲ್ಲಿ ನಿವೇಶನಗಳನ್ನು ಖರೀದಿ ಮಾಡಲಾಗಿದೆ ಅಂಗನವಾಡಿ ಕೇಂದ್ರಗಳಿಗೆ ವಿಶೇಷ ಅನುದಾನವನ್ನು ಸಹ ತರಲಾಗುತ್ತದೆ ಸರಕಾರದಿಂದ ನೀಡುವ ಪ್ರತಿಯೊಂದು ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿಡಿಪಿಒ ವಿನೋದ್ ರಾಜ್, ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕ ವಿಶ್ವನಾಥ್, ವಿವಿಧ ಗ್ರಾಪಂ ಅಧ್ಯಕ್ಷರಾದ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಕೊಂಡರಾಜನಹಳ್ಳಿ ಮಂಜುನಾಥ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ನುಕ್ಕನಹಳ್ಳಿ ಶ್ರೀನಿವಾಸ್, ಅಫ್ಸರ್, ಮಲೇಷಿಯಾ ರಾಜಕುಮಾರ್, ಖಾದ್ರಿಪುರ ಬಾಬು, ಮುಂತಾದವರು ಇದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

10 minutes ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago