Categories: ಕೋಲಾರ

ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪದಾರ್ಥಗಳ ಪೂರೈಕೆ ಆರೋಪ: ಪೊರೈಕೆ ಮಾಡುವವರ ವಿರುದ್ಧ ಕ್ರಮಕ್ಕೆ ಸಿದ್ಧ- ಎಂಎಲ್ಸಿ ಅನಿಲ್ ಕುಮಾರ್

ಕೋಲಾರ: ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡುತ್ತಿರುವ ಆಹಾರ ಪದಾರ್ಥಗಳು ಕಳಪೆಯಾಗಿರುವುದರ ಬಗ್ಗೆ ಗಮನಕ್ಕೆ ತಂದಿದ್ದು ಇಂತಹ ಆಹಾರ ಪದಾರ್ಥಗಳನ್ನು ಪೊರೈಕೆ ಮಾಡುವವರ ವಿರುದ್ಧ ಕ್ರಮಕೈಗೊಂಡು ಸರ್ಕಾರದೊಂದಿಗೆ ಚರ್ಚಿಸಿ ಉತ್ತಮ ಗುಣಮಟ್ಟದ ಆಹಾರ ಪೂರೈಕೆಗೆ ಅಧ್ಯತೆ ನೀಡಲಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್‌ ಫೋನ್, ಮೆಡಿಕಲ್ ಕಿಟ್, ಹಾಗೂ ಭಾಗ್ಯಲಕ್ಷ್ಮೀ ಯೋಜನೆಯ ಪಾಸ್ ಬುಕ್ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳನ್ನು ಗಮನಕ್ಕೆ ಬಂದಾಗ ಮಾತ್ರವೇ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೂ ಕೂಡಲೇ ಗಮನಕ್ಕೆ ತನ್ನಿ ಶಾಸಕರೊಂದಿಗೆ ನಾನು ಇದ್ದು ಸರಕಾರದ ಗಮನಕ್ಕೆ ತಂದು ಪರಿಹಾರ ಮಾಡತ್ತೇವೆ ಮಕ್ಕಳ ಭವಿಷ್ಯವನ್ನು ನಿರ್ಮಾಣ ಮಾಡುವ ಜೊತೆಗೆ ಹಾರೈಕೆ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದರು.

ಅಂಗನವಾಡಿ ಕಾರ್ಯಕರ್ತರು ಸರಕಾರದ ಪ್ರತಿಯೊಂದು ಯೋಜನೆಗಳನ್ನು ಜಾರಿ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ ನೀವು ಎಲ್ಲರೂ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಸಮಾಜಮುಖಿಯಾಗಿ ಕೆಲಸ ಮಾಡಬೇಕು. ದಿನನಿತ್ಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಾಜರಾತಿ, ಅವರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಣೆ, ಅಂಗನವಾಡಿಯಲ್ಲಿ ಮೂಲ ಸಮಸ್ಯೆಗಳ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತನ್ನಿ ಸರಕಾರವು ವಿತರಿಸಿದ ಸ್ಮಾಟ್ ಪೋನ್ ಮೂಲಕ ಅನೇಕ ಯೋಜನೆಗಳ ಸದುಪಯೋಗವನ್ನು ಪಡೆಯಬಹುದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ, ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಒದಗಿಸಲು ಈಗಾಗಲೇ ಕ್ರಮ ವಹಿಸಲಾಗಿದೆ ಅದರಂತೆಯೇ ಸುಮಾರು 2.50 ಕೋಟಿ ವೆಚ್ಚದಲ್ಲಿ ನಗರದಲ್ಲಿ ನಿವೇಶನಗಳನ್ನು ಖರೀದಿ ಮಾಡಲಾಗಿದೆ ಅಂಗನವಾಡಿ ಕೇಂದ್ರಗಳಿಗೆ ವಿಶೇಷ ಅನುದಾನವನ್ನು ಸಹ ತರಲಾಗುತ್ತದೆ ಸರಕಾರದಿಂದ ನೀಡುವ ಪ್ರತಿಯೊಂದು ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿಡಿಪಿಒ ವಿನೋದ್ ರಾಜ್, ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕ ವಿಶ್ವನಾಥ್, ವಿವಿಧ ಗ್ರಾಪಂ ಅಧ್ಯಕ್ಷರಾದ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಕೊಂಡರಾಜನಹಳ್ಳಿ ಮಂಜುನಾಥ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ನುಕ್ಕನಹಳ್ಳಿ ಶ್ರೀನಿವಾಸ್, ಅಫ್ಸರ್, ಮಲೇಷಿಯಾ ರಾಜಕುಮಾರ್, ಖಾದ್ರಿಪುರ ಬಾಬು, ಮುಂತಾದವರು ಇದ್ದರು.

Ramesh Babu

Journalist

Recent Posts

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

9 minutes ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

8 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

19 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago