ಮನೆಯಲ್ಲಿ ಆಟವಾಡಿಕೊಂಡು ಕಾಲಕಳೆಯುತ್ತಿದ್ದ ಮಕ್ಕಳನ್ನು ಪೋಷಕರು ಅಂಗನವಾಡಿ ಕೇಂದ್ರಕ್ಕೆ ತಂದು ಬಿಡುತ್ತಾರೆ. ಆದರೆ, ಇಲ್ಲಿ ಮಕ್ಕಳಿಗೆ ಯಾವುದೇ ತರಹದ ಅನುಕೂಲಗಳು ಇಲ್ಲದೆ, ಪುಟ್ಟ ಕಂದಮ್ಮಗಳು ಅಂಗನವಾಡಿ ಕೇಂದ್ರದಲ್ಲಿ ಒಬ್ಬರಮೇಲೊಬ್ಬರು ಕುಳಿತುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅದು ಎಲ್ಲಿ ಎಂತೀರಾ… ಈ ಸ್ಟೋರಿ ಓದಿ…..
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಗೊಂಡನಹಳ್ಳಿ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರ ಬರುವ ಮಕ್ಕಳು ರೋಗದ ಭೀತಿ ಎದುರಿಸುವಂತಾಗಿದೆ. ಅಂಗನವಾಡಿಯಲ್ಲಿ ಸೂಕ್ತ ಮೂಲ ಸೌಕರ್ಯಗಳು ಇಲ್ಲದೇ ಅವ್ಯವಸ್ಥೆ ಆಗರವಾಗಿದೆ. ಕೇಂದ್ರಕ್ಕೆ ಬರುವ ಮಕ್ಕಳಿಗೆ ಇದೊಂದು ಜೈಲಿನ ಕೋಣೆಯಂತೆ ಭಾಸವಾಗುತ್ತಿದೆ. ಏಕೆಂದರೆ ಆ ಕೇಂದ್ರವು ಮಕ್ಕಳಿಗೆ ಉಸಿರುಗಟ್ಟಿಸುವ ವಾತಾವರಣದ, ಹಂದಿಗೂಡಿನಂತಿರುವ ಬಾಡಿಗೆ ಮನೆಯೊಂದರಲ್ಲಿ ಬಾಡಿಗೆ ಸಲ್ಲಿಸುತ್ತಾ ಮಕ್ಕಳಿಗೆ ಪಾಠ ಪ್ರವಚನ ಮಾಡಲಾಗುತ್ತಿದೆ.
ಹಂದಿಗೂಡಿನಂತಿರುವ ಬಾಡಿಗೆ ಮನೆಯೊಂದರಲ್ಲಿ ಸುಮಾರು 30ಮಕ್ಕಳು ಒಬ್ಬರಮೇಲೊಬ್ಬರು ಕುಳಿತುಕೊಂಡು ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿ ಕಳೆದ ನಾಲ್ಕೈದು ವರ್ಷಗಳಿಂದೆ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಮಾಡಲು ತೀರ್ಮಾಸಿ ಶಾಲಾ ಆವರಣದಲ್ಲಿ ಪಾಯ ಹಾಕಿ ಕಟ್ಟಡ ನಿರ್ಮಾಣ ಮಾಡಿ ಅನುದಾನ ಕೊರತೆ ಇದೆ ಎಂದು ಹೇಳಿ ಕಾಮಗಾರಿಯನ್ನು ಪೂರ್ಣಗೊಳಿಸದೇ ಅರೆಬರೆ ಕೆಲಸ ಮಾಡಿ ಹಾಗೇ ಬಿಡಲಾಗಿದೆ.
ಇನ್ನೂ ಬಾಡಿಗೆ ಕಟ್ಟಡಕ್ಕೆ ಪ್ರತಿ ತಿಂಗಳ ಎರಡು ಸಾವಿರ ಹಣವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಖರ್ಚು ಮಾಡಲಾಗುತ್ತಿದೆ. ಅದೇ ಹಣವನ್ನು ಯಾವುದಾದರೂ ಬೇರೆ ಕಟ್ಟಡಕ್ಕೆ ಶಿಫ್ಟ್ ಮಾಡಿ ಖರ್ಚು ಮಾಡಲಿ ಎಂದು ಪೋಷಕರ ಅಭಿಪ್ರಾಯ.
ದನದ ಕೊಟ್ಟಿಗೆಯಂತಿರುವ ಮನೆಯನ್ನು ಬಾಡಿಗೆಗೆ ಪಡೆದು ಮಕ್ಕಳಿಗೆ ವಿದ್ಯಾಭಾಸ್ಯ ಮಾಡಲಾಗುತ್ತಿದೆ. ಮಕ್ಕಳು ಇಲ್ಲಿ ಕುಳಿತುಕೊಳ್ಳಲು, ವಿಶ್ರಾಂತಿ ಪಡೆಯಲು, ಊಟ ಮಾಡಲು ಸೂಕ್ತ ಜಾಗವಿಲ್ಲ. ಒಬ್ಬರಮೇಲೊಬ್ಬರು ಕುಳಿತುಕೊಂಡು ಪಾಠ ಕೇಳುವ ಪರಿಸ್ಥಿತಿ ಇದೆ. ಮಕ್ಕಳಿಗೆ ಏನಾದರು ಆರೋಗ್ಯದಲ್ಲಿ ಸಮಸ್ಯೆ ಉಂಟಾದರೆ ಯಾರು ಹೊಣೆ ಎಂದು ಆಕ್ರೋಶವ್ಯಕ್ತಪಡಿಸಿದರು.
ಒಟ್ಟಾರೆ ಸರಕಾರ ಮಕ್ಕಳನ್ನು ಸರಕಾರಿ ಶಾಲೆಗಳತ್ತ ಮುಖ ಮಾಡಲು ಸಾಕಷ್ಟು ಸವಲತ್ತುಗಳನ್ನು ನೀಡುತ್ತಿದ್ದರೆ, ಕೆಲವು ಅಧಿಕಾರಿಗಳು ನಿರ್ಲಕ್ಷ್ಯದಿಂದ ಬಂದ ಮಕ್ಕಳು ಕೂಡ ಈಗ ಖಾಸಗಿ ಶಾಲೆಗಳತ್ತ ಮುಖಮಾಡುವಂತಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಪ್ರಕೃತಿಯ ವಾತವರಣ ಸೃಷ್ಟಿಸಿ ಮಕ್ಕಳಿಗೆ ವಿದ್ಯಾದಾನ ಮಾಡಲು ಅಂಗನವಾಡಿ ಕೇಂದ್ರಗಳನ್ನು ನಿರ್ಮಾಣ ಮಾಡಬೇಕಾಗಿದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಮಕ್ಕಳಿಗೆ ಸುಸರ್ಜಿತವಾದ ಕಟ್ಟಡವನ್ನು ನಿರ್ಮಾಣ ಮಾಡಿ ಮಕ್ಕಳ ಕಲಿಕೆಗೆ, ವಿಶ್ರಾಂತಿಗೆ ಅನುವು ಮಾಡಿಕೊಡ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ.
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…
ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…