ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು ನಿತ್ಯವೂ ಸಮಸ್ಯೆ ಎದುರಿಸುವಂತಾಗಿದೆ.

ಅಂಗನವಾಡಿ ಕೇಂದ್ರದ ಬಾಗಿಲು ಮುಂದೆಯೇ ಚರಂಡಿ ನೀರು ನಿಂತು ರಸ್ತೆ ಮೇಲೆ ಹರಿಯುತ್ತಿರುವುದರಿಂದ, ಕೇಂದ್ರಕ್ಕೆ ಬರುವ ಮಕ್ಕಳು ಅದೇ ಕೊಳಚೆ ನೀರನ್ನು ತುಳಿದುಕೊಂಡೇ ಒಳಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಚರಂಡಿ ನೀರು ನಿಂತಿರುವ ಪರಿಣಾಮ ಸುತ್ತಮುತ್ತ ದುರ್ವಾಸನೆ ಹರಡಿದ್ದು, ಅಂಗನವಾಡಿ ಕೇಂದ್ರದ ಮಕ್ಕಳು ಹಾಗೂ ಸಿಬ್ಬಂದಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೊಳಚೆ ನೀರಿನಿಂದ ಸೊಳ್ಳೆ ಹಾಗೂ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.

ಈ ಸಮಸ್ಯೆ ಕುರಿತು ನಗರಸಭೆಗೆ ಹಲವು ಬಾರಿ ಮನವಿ ಮಾಡಿದ್ದರೂ, ಸ್ವಚ್ಛತಾ ಸಿಬ್ಬಂದಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ. ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಪುಟಾಣಿ ಮಕ್ಕಳು ಓಡಾಡುವ ಸ್ಥಳದಲ್ಲೇ ಚರಂಡಿ ನೀರು ಹರಿಯುತ್ತಿರುವುದರಿಂದ, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಉಂಟಾಗುವ ಮುನ್ನ ನಗರಸಭೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಚರಂಡಿ ಸ್ವಚ್ಛಗೊಳಿಸಬೇಕು. ಅಲ್ಲದೆ, ಚರಂಡಿ ನೀರು ರಸ್ತೆಗೆ ಹರಿಯದಂತೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

42 minutes ago

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

21 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

22 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

1 day ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

2 days ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

2 days ago