ದೇವನಹಳ್ಳಿ: ಅಂಗನವಾಡಿ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ಇ-ಖಾತೆ ಮಾಡಿಕೊಡಲಾಗಿದೆ ಎಂಬ ಗ್ರಾಮ ಪಂಚಾಯಿತಿ ಸದಸ್ಯ ಕೆ.ಸೋಮಶೇಖರ್ ಅವರ ಆರೋಪಕ್ಕೆ ತಿರುಗೇಟು ನೀಡಿರುವ ಕನ್ನಮಂಗಲ ಗ್ರಾಮ ಪಂಚಾಯತಿಯ 25 ಸದಸ್ಯರು ಮಂಗಳವಾರ ದಾಖಲೆಗಳ ಸಮೇತ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎನ್ ಅನುರಾಧ ಅವರಿಗೆ ಸ್ಪಷ್ಟೀಕರಣ ಪತ್ರ ನೀಡಿದ್ದಾರೆ.
ಗ್ರಾಮ ಪಂಚಾಯತಿ ಸದಸ್ಯ ಕೆ.ಸೋಮಶೇಖರ್ ಅವರು ದುರುದ್ದೇಶದಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿಗೆ ಕೆಟ್ಟ ಹೆಸರು ತರುವ ಅವರ ಹುನ್ನಾರವನ್ನು ಸಹಿಸುವುದಿಲ್ಲ ಎಂದು ಸಿಇಒ ಅವರಿಗೆ ಸಲ್ಲಿಸಿರುವ ಸ್ಪಷ್ಟೀಕರಣ ಪತ್ರದಲ್ಲಿ ಉಳಿದೆಲ್ಲಾ ಗ್ರಾ.ಪಂ. ಸದಸ್ಯರು ತಿಳಿಸಿದ್ದಾರೆ.
ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಲಕ್ಷ್ಮೀಕಾಂತ್ ಮಾತನಾಡಿ, ಸೋಮಶೇಖರ್ ಹೊರಿಸಿರುವ ಆರೋಪಗಳು ನಿರಾಧಾರವಾಗಿವೆ. ಈ ಬಗ್ಗೆ ಜಿ.ಪಂ. ಸಿಇಒ ಅವರಿಗೆ ದಾಖಲೆಗಳನ್ನು ಒದಗಿಸಿ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಹೇಳಿದರು.
ಪೂಜನಹಳ್ಳಿಯ ದೊಡ್ಡಮುನಿಯಪ್ಪ ಅವರ ಜಾಗಕ್ಕೆ ಮಂಡಲ ಪಂಚಾಯತಿ ಅವಧಿಯಿಂದಲೂ ಕಂದಾಯ ಕಟ್ಟಲಾಗಿದೆ. ಇದು ಪಂಚತಂತ್ರ ತಂತ್ರಾಂಶ ಹಾಗೂ ಡಿಮ್ಯಾಂಡ್ ರಿಜಿಸ್ಟರ್ ನಲ್ಲೂ ದಾಖಲಾಗಿದೆ. ನ್ಯಾಯಾಲಯದ ಆದೇಶ, ಲೋಕಾಯುಕ್ತ ಸ್ಥಳ ಮಹಜರಿನಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಈಗಾಗಲೇ ಅಂಗನವಾಡಿ ಜಾಗವನ್ನು ಗ್ರಾಮ ಪಂಚಾಯ್ತಿ ಸುಪರ್ದಿಗೆ ಪಡೆದು ಅದನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಹಸ್ತಾಂತರ ಮಾಡಿದ್ದೇವೆ. ಹೀಗಿರುವಾಗ ಸೋಮಶೇಖರ್ ಅವರ ಆರೋಪಗಳು ಸತ್ಯಕ್ಕೆ ದೂರುವಾದುದು ಎಂದರು.
ಅಂಗನವಾಡಿ ಸ್ಥಳವನ್ನು ಉಳಿಸುವಂತೆ ಕನ್ನಮಂಗಲ ಗ್ರಾಮ ಪಂಚಾಯತಿ ಸದಸ್ಯ ಸೋಮಶೇಖರ್ ಕೆ ಅವರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಹೋರಾತ್ರಿ ಧರಣಿ ಕುಳಿತಿರುವ ಹಿನ್ನೆಲೆಯಲ್ಲಿ ಗ್ರಾ.ಪಂ.ಸದಸ್ಯರು ಇಂದು ಸಿಇಒ ಅವರಿಗೆ ಸ್ಪಷ್ಟೀಕರಣ ಪತ್ರ ನೀಡಿದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…