ಅಂಗನವಾಡಿ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ಇ-ಖಾತೆ ಮಾಡಿರುವ ಆರೋಪ: ಗ್ರಾ.ಪಂ ಸದಸ್ಯನ ಆರೋಪಕ್ಕೆ ಇನ್ನುಳಿದ ಸದಸ್ಯರ ತಿರುಗೇಟು

ದೇವನಹಳ್ಳಿ: ಅಂಗನವಾಡಿ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ಇ-ಖಾತೆ ಮಾಡಿಕೊಡಲಾಗಿದೆ‌ ಎಂಬ ಗ್ರಾಮ ಪಂಚಾಯಿತಿ ಸದಸ್ಯ ಕೆ.ಸೋಮಶೇಖರ್ ಅವರ ಆರೋಪಕ್ಕೆ ತಿರುಗೇಟು ನೀಡಿರುವ ಕನ್ನಮಂಗಲ ಗ್ರಾಮ ಪಂಚಾಯತಿಯ 25 ಸದಸ್ಯರು ಮಂಗಳವಾರ ದಾಖಲೆಗಳ ಸಮೇತ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎನ್ ಅನುರಾಧ ಅವರಿಗೆ ಸ್ಪಷ್ಟೀಕರಣ ಪತ್ರ ನೀಡಿದ್ದಾರೆ.

ಗ್ರಾಮ ಪಂಚಾಯತಿ ಸದಸ್ಯ ಕೆ.ಸೋಮಶೇಖರ್ ಅವರು ದುರುದ್ದೇಶದಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿಗೆ ಕೆಟ್ಟ ಹೆಸರು ತರುವ ಅವರ ಹುನ್ನಾರವನ್ನು ಸಹಿಸುವುದಿಲ್ಲ ಎಂದು ಸಿಇಒ ಅವರಿಗೆ ಸಲ್ಲಿಸಿರುವ ಸ್ಪಷ್ಟೀಕರಣ ಪತ್ರದಲ್ಲಿ ಉಳಿದೆಲ್ಲಾ ಗ್ರಾ.ಪಂ. ಸದಸ್ಯರು ತಿಳಿಸಿದ್ದಾರೆ.

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಲಕ್ಷ್ಮೀಕಾಂತ್ ಮಾತನಾಡಿ, ಸೋಮಶೇಖರ್ ಹೊರಿಸಿರುವ ಆರೋಪಗಳು ನಿರಾಧಾರವಾಗಿವೆ. ಈ ಬಗ್ಗೆ ಜಿ.ಪಂ. ಸಿಇಒ ಅವರಿಗೆ ದಾಖಲೆಗಳನ್ನು ಒದಗಿಸಿ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಹೇಳಿದರು.

ಪೂಜನಹಳ್ಳಿಯ ದೊಡ್ಡಮುನಿಯಪ್ಪ ಅವರ ಜಾಗಕ್ಕೆ ಮಂಡಲ ಪಂಚಾಯತಿ ಅವಧಿಯಿಂದಲೂ ಕಂದಾಯ ಕಟ್ಟಲಾಗಿದೆ. ಇದು ಪಂಚತಂತ್ರ ತಂತ್ರಾಂಶ ಹಾಗೂ ಡಿಮ್ಯಾಂಡ್ ರಿಜಿಸ್ಟರ್ ನಲ್ಲೂ ದಾಖಲಾಗಿದೆ.  ನ್ಯಾಯಾಲಯದ ಆದೇಶ, ಲೋಕಾಯುಕ್ತ ಸ್ಥಳ‌  ಮಹಜರಿನಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಅಂಗನವಾಡಿ ಜಾಗವನ್ನು ಗ್ರಾಮ ಪಂಚಾಯ್ತಿ ಸುಪರ್ದಿಗೆ ಪಡೆದು ಅದನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಹಸ್ತಾಂತರ ಮಾಡಿದ್ದೇವೆ. ಹೀಗಿರುವಾಗ ಸೋಮಶೇಖರ್ ಅವರ ಆರೋಪಗಳು ಸತ್ಯಕ್ಕೆ ದೂರುವಾದುದು ಎಂದರು.

ಅಂಗನವಾಡಿ ಸ್ಥಳವನ್ನು ಉಳಿಸುವಂತೆ ಕನ್ನಮಂಗಲ ಗ್ರಾಮ ಪಂಚಾಯತಿ ಸದಸ್ಯ ಸೋಮಶೇಖರ್ ಕೆ ಅವರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಹೋರಾತ್ರಿ ಧರಣಿ ಕುಳಿತಿರುವ ಹಿನ್ನೆಲೆಯಲ್ಲಿ ಗ್ರಾ.ಪಂ.ಸದಸ್ಯರು ಇಂದು ಸಿಇಒ ಅವರಿಗೆ ಸ್ಪಷ್ಟೀಕರಣ ಪತ್ರ ನೀಡಿದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

4 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

10 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago