ದೇವನಹಳ್ಳಿ: ಅಂಗನವಾಡಿ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ಇ-ಖಾತೆ ಮಾಡಿಕೊಡಲಾಗಿದೆ ಎಂಬ ಗ್ರಾಮ ಪಂಚಾಯಿತಿ ಸದಸ್ಯ ಕೆ.ಸೋಮಶೇಖರ್ ಅವರ ಆರೋಪಕ್ಕೆ ತಿರುಗೇಟು ನೀಡಿರುವ ಕನ್ನಮಂಗಲ ಗ್ರಾಮ ಪಂಚಾಯತಿಯ 25 ಸದಸ್ಯರು ಮಂಗಳವಾರ ದಾಖಲೆಗಳ ಸಮೇತ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎನ್ ಅನುರಾಧ ಅವರಿಗೆ ಸ್ಪಷ್ಟೀಕರಣ ಪತ್ರ ನೀಡಿದ್ದಾರೆ.
ಗ್ರಾಮ ಪಂಚಾಯತಿ ಸದಸ್ಯ ಕೆ.ಸೋಮಶೇಖರ್ ಅವರು ದುರುದ್ದೇಶದಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿಗೆ ಕೆಟ್ಟ ಹೆಸರು ತರುವ ಅವರ ಹುನ್ನಾರವನ್ನು ಸಹಿಸುವುದಿಲ್ಲ ಎಂದು ಸಿಇಒ ಅವರಿಗೆ ಸಲ್ಲಿಸಿರುವ ಸ್ಪಷ್ಟೀಕರಣ ಪತ್ರದಲ್ಲಿ ಉಳಿದೆಲ್ಲಾ ಗ್ರಾ.ಪಂ. ಸದಸ್ಯರು ತಿಳಿಸಿದ್ದಾರೆ.
ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಲಕ್ಷ್ಮೀಕಾಂತ್ ಮಾತನಾಡಿ, ಸೋಮಶೇಖರ್ ಹೊರಿಸಿರುವ ಆರೋಪಗಳು ನಿರಾಧಾರವಾಗಿವೆ. ಈ ಬಗ್ಗೆ ಜಿ.ಪಂ. ಸಿಇಒ ಅವರಿಗೆ ದಾಖಲೆಗಳನ್ನು ಒದಗಿಸಿ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಹೇಳಿದರು.
ಪೂಜನಹಳ್ಳಿಯ ದೊಡ್ಡಮುನಿಯಪ್ಪ ಅವರ ಜಾಗಕ್ಕೆ ಮಂಡಲ ಪಂಚಾಯತಿ ಅವಧಿಯಿಂದಲೂ ಕಂದಾಯ ಕಟ್ಟಲಾಗಿದೆ. ಇದು ಪಂಚತಂತ್ರ ತಂತ್ರಾಂಶ ಹಾಗೂ ಡಿಮ್ಯಾಂಡ್ ರಿಜಿಸ್ಟರ್ ನಲ್ಲೂ ದಾಖಲಾಗಿದೆ. ನ್ಯಾಯಾಲಯದ ಆದೇಶ, ಲೋಕಾಯುಕ್ತ ಸ್ಥಳ ಮಹಜರಿನಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಈಗಾಗಲೇ ಅಂಗನವಾಡಿ ಜಾಗವನ್ನು ಗ್ರಾಮ ಪಂಚಾಯ್ತಿ ಸುಪರ್ದಿಗೆ ಪಡೆದು ಅದನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಹಸ್ತಾಂತರ ಮಾಡಿದ್ದೇವೆ. ಹೀಗಿರುವಾಗ ಸೋಮಶೇಖರ್ ಅವರ ಆರೋಪಗಳು ಸತ್ಯಕ್ಕೆ ದೂರುವಾದುದು ಎಂದರು.
ಅಂಗನವಾಡಿ ಸ್ಥಳವನ್ನು ಉಳಿಸುವಂತೆ ಕನ್ನಮಂಗಲ ಗ್ರಾಮ ಪಂಚಾಯತಿ ಸದಸ್ಯ ಸೋಮಶೇಖರ್ ಕೆ ಅವರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಹೋರಾತ್ರಿ ಧರಣಿ ಕುಳಿತಿರುವ ಹಿನ್ನೆಲೆಯಲ್ಲಿ ಗ್ರಾ.ಪಂ.ಸದಸ್ಯರು ಇಂದು ಸಿಇಒ ಅವರಿಗೆ ಸ್ಪಷ್ಟೀಕರಣ ಪತ್ರ ನೀಡಿದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…