ಅಂಗನವಾಡಿ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ಇ-ಖಾತೆ ಮಾಡಿರುವ ಆರೋಪ: ಗ್ರಾ.ಪಂ ಸದಸ್ಯನ ಆರೋಪಕ್ಕೆ ಇನ್ನುಳಿದ ಸದಸ್ಯರ ತಿರುಗೇಟು

ದೇವನಹಳ್ಳಿ: ಅಂಗನವಾಡಿ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ಇ-ಖಾತೆ ಮಾಡಿಕೊಡಲಾಗಿದೆ‌ ಎಂಬ ಗ್ರಾಮ ಪಂಚಾಯಿತಿ ಸದಸ್ಯ ಕೆ.ಸೋಮಶೇಖರ್ ಅವರ ಆರೋಪಕ್ಕೆ ತಿರುಗೇಟು ನೀಡಿರುವ ಕನ್ನಮಂಗಲ ಗ್ರಾಮ ಪಂಚಾಯತಿಯ 25 ಸದಸ್ಯರು ಮಂಗಳವಾರ ದಾಖಲೆಗಳ ಸಮೇತ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎನ್ ಅನುರಾಧ ಅವರಿಗೆ ಸ್ಪಷ್ಟೀಕರಣ ಪತ್ರ ನೀಡಿದ್ದಾರೆ.

ಗ್ರಾಮ ಪಂಚಾಯತಿ ಸದಸ್ಯ ಕೆ.ಸೋಮಶೇಖರ್ ಅವರು ದುರುದ್ದೇಶದಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿಗೆ ಕೆಟ್ಟ ಹೆಸರು ತರುವ ಅವರ ಹುನ್ನಾರವನ್ನು ಸಹಿಸುವುದಿಲ್ಲ ಎಂದು ಸಿಇಒ ಅವರಿಗೆ ಸಲ್ಲಿಸಿರುವ ಸ್ಪಷ್ಟೀಕರಣ ಪತ್ರದಲ್ಲಿ ಉಳಿದೆಲ್ಲಾ ಗ್ರಾ.ಪಂ. ಸದಸ್ಯರು ತಿಳಿಸಿದ್ದಾರೆ.

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಲಕ್ಷ್ಮೀಕಾಂತ್ ಮಾತನಾಡಿ, ಸೋಮಶೇಖರ್ ಹೊರಿಸಿರುವ ಆರೋಪಗಳು ನಿರಾಧಾರವಾಗಿವೆ. ಈ ಬಗ್ಗೆ ಜಿ.ಪಂ. ಸಿಇಒ ಅವರಿಗೆ ದಾಖಲೆಗಳನ್ನು ಒದಗಿಸಿ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಹೇಳಿದರು.

ಪೂಜನಹಳ್ಳಿಯ ದೊಡ್ಡಮುನಿಯಪ್ಪ ಅವರ ಜಾಗಕ್ಕೆ ಮಂಡಲ ಪಂಚಾಯತಿ ಅವಧಿಯಿಂದಲೂ ಕಂದಾಯ ಕಟ್ಟಲಾಗಿದೆ. ಇದು ಪಂಚತಂತ್ರ ತಂತ್ರಾಂಶ ಹಾಗೂ ಡಿಮ್ಯಾಂಡ್ ರಿಜಿಸ್ಟರ್ ನಲ್ಲೂ ದಾಖಲಾಗಿದೆ.  ನ್ಯಾಯಾಲಯದ ಆದೇಶ, ಲೋಕಾಯುಕ್ತ ಸ್ಥಳ‌  ಮಹಜರಿನಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಅಂಗನವಾಡಿ ಜಾಗವನ್ನು ಗ್ರಾಮ ಪಂಚಾಯ್ತಿ ಸುಪರ್ದಿಗೆ ಪಡೆದು ಅದನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಹಸ್ತಾಂತರ ಮಾಡಿದ್ದೇವೆ. ಹೀಗಿರುವಾಗ ಸೋಮಶೇಖರ್ ಅವರ ಆರೋಪಗಳು ಸತ್ಯಕ್ಕೆ ದೂರುವಾದುದು ಎಂದರು.

ಅಂಗನವಾಡಿ ಸ್ಥಳವನ್ನು ಉಳಿಸುವಂತೆ ಕನ್ನಮಂಗಲ ಗ್ರಾಮ ಪಂಚಾಯತಿ ಸದಸ್ಯ ಸೋಮಶೇಖರ್ ಕೆ ಅವರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಹೋರಾತ್ರಿ ಧರಣಿ ಕುಳಿತಿರುವ ಹಿನ್ನೆಲೆಯಲ್ಲಿ ಗ್ರಾ.ಪಂ.ಸದಸ್ಯರು ಇಂದು ಸಿಇಒ ಅವರಿಗೆ ಸ್ಪಷ್ಟೀಕರಣ ಪತ್ರ ನೀಡಿದರು.

Ramesh Babu

Journalist

Recent Posts

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

39 seconds ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

4 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

8 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

13 hours ago