ಅಂಗನವಾಡಿ ಜಾಗವನ್ನೇ ಗುಳುಂ ಮಾಡಲು ಪಿಡಿಒ ಯತ್ನ ಆರೋಪ: ಸರ್ಕಾರಿ ಜಾಗ ಉಳಿಸಲು ಜಿಟಿಜಿಟಿ ಮಳೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯನಿಂದ ಅಹೋರಾತ್ರಿ ಧರಣಿ: ಆರೋಪ ಕುರಿತ ತನಿಖೆ ನಡೆಸಲಾಗುವುದು: ಧರಣಿ ಕೈಬಿಡುವಂತೆ ಜಿ.ಪಂ ಸಿಇಒ ಮನವಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದಲ್ಲಿ ಬರುವ ಅತಿ ಶ್ರೀಮಂತ ಗ್ರಾಮ ಪಂಚಾಯ್ತಿ. ಆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇದೀಗ ಸರ್ಕಾರಿ ಅಂಗನವಾಡಿ ಜಾಗವನ್ನೇ ಗುಳುಂ ಮಾಡಲು ಪಿಡಿಒ ಪ್ರಯತ್ನ ಮಾಡಿದ್ದಾರೆ ಎಂದು ಅದೇ ಪಂಚಾಯ್ತಿ ಸದಸ್ಯರೊಬ್ಬರು ಆರೋಪ ಮಾಡಿ ಅಹೋರಾತ್ರಿ ಧರಣಿಗರ ಕುಳಿತಿದ್ದಾರೆ. ಪಿಡಿಓ ಅಮಾನತಿಗೆ ಆಗ್ರಹಿಸಿ ಬೀರಸಂದ್ರ ಜಿಲ್ಲಾಡಳಿತ ಭವನದ ಮುಂದೆ ಅಹೋರಾತ್ರಿ ಧರಣಿಯನ್ನ ಪಂಚಾಯ್ತಿ ಸದಸ್ಯ ನಡೆಸುತ್ತಿದ್ದಾರೆ.

ಜಿಲ್ಲಾಡಳಿತ ಕಚೇರಿ ಮುಂದೆ ಜಿಟಿಜಿಟಿ ಮಳೆಯನ್ನು ಲೆಕ್ಕಿಸದೆ ಪಂಚಾಯ್ತಿ ಸದಸ್ಯನ ಧರಣಿ ನಡೆಸುತ್ತಿದ್ದಾನೆ. ಪಂಚಾಯ್ತಿ ಸದಸ್ಯನ ಬೆಂಬಲಕ್ಕೆ ನಿಂತು ಪಿಡಿಒ ಅಮಾನತಿಗೆ ಆಗ್ರಹಿಸುತ್ತಿರೋ ಗ್ರಾಮಸ್ಥರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯ್ತಿಯಲ್ಲಿ ನಕಲಿ ಹಕ್ಕುಪತ್ರ ಸೃಷ್ಟಿ ಮಾಡಿ ಪಂಚಾಯ್ತಿ ಪಿಡಿಒ ಅಂಗನವಾಡಿ ಜಾಗವನ್ನ ಖಾಸಗಿ ವ್ಯಕ್ತಿಗಳಿಗೆ ಇ-ಖಾತಾ ಮಾಡಿಕೊಟ್ಟಿರುವ ಆರೋಪ ಕೇಳಿ ಬಂದಿದೆ. ಅಂದಹಾಗೆ ಪೂಜನಹಳ್ಳಿ ಗ್ರಾಮದಲ್ಲಿರುವ ಅಂಗನವಾಡಿ ಜಾಗವನ್ನ ಕನ್ನಮಂಗಲ ಗ್ರಾಮ ಪಂಚಾಯತಿ ಪಿಡಿಒ ಶ್ರೀನಿವಾಸ್ ನಕಲಿ ಹಕ್ಕುಪತ್ರದ ಅಡಿಯಲ್ಲಿ ಬೇರೆಯವರಿಗೆ ಇ-ಖಾತೆ ಮಾಡಿಕೊಡಲಾಗಿದೆ ಎಂದು ಗ್ರಾಮ ಪಂಚಾಯತಿ ಸದಸ್ಯ ಸೋಮಶೇಖರ್ ಆರೋಪಿಸಿದ್ದಾರೆ.

ಅಂಗನವಾಡಿ ಜಾಗವನ್ನ ಗುಳುಂ ಮಾಡಲು ಹೊರಟಿದ್ದ ಪಿಡಿಒರನ್ನ ಅಮಾನತಿಗೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ಅಂದಹಾಗೆ ಸರ್ಕಾರಿ ಅಂಗನವಾಡಿ ಮತ್ತು ಸರ್ಕಾರಿ ರಸ್ತೆ ಜೊತೆ ಜೊತೆಗೆ ಅಂಗನವಾಡಿ ಪಕ್ಕದಲ್ಲಿರುವ ಡೈರಿ ಕಟ್ಟಡ ಮತ್ತು ಒಂದು ಗೋಡೌನ್ ಸೇರಿ ಒಟ್ಟು ಒಂಭತ್ತು ಸಾವಿರ ಅಡಿಗಳಷ್ಟು ಜಾಗವನ್ನು ನಕಲಿ ಹಕ್ಕು ಪತ್ರದ ಆಧಾರದ ಮೇಲೆ ಇ-ಸ್ವತ್ತು ಮಾಡಲಾಗಿದೆಯಂತೆ. ಕೋಟ್ಯಾಂತರ ಮೌಲ್ಯದ ಜಾಗವನ್ನ ಪಿಡಿಒ ಖಾಸಗಿ ವ್ಯಕ್ತಿಗಳಿಗೆ ಮಾಡಿಕೊಟ್ಟು ಮತ್ತೆ ಖಾಸಗಿ ವ್ಯಕ್ತಿಗಳಿಂದ ದಾನಪತ್ರವಾಗಿ ಮತ್ತದೆ ಪಂಚಾಯ್ತಿಗೆ ಬರಿಸಿಕೊಳ್ಳುವ ಮೂಲಕ ಅದರಲ್ಲೂ ಗೋಲ್ ಮಾಲ್ ಮಾಡಿದ್ದು, ಅಕ್ರಮ ನಡೆಸಲು ಕಾರಣವಾದ ಪಿಡಿಒ ಶ್ರೀನಿವಾಸ್.ಟಿ ಸೇರಿದಂತೆ ಇತರೆ ಅಧಿಕಾರಿಗಳನ್ನು ಅಮಾನತ್ತು ಮಾಡಿ ವಿಶೇಷ ತಂಡ ರಚನೆ ಮಾಡಿ ತನಿಖೆ ನಡೆಸಬೇಕೆಂದು ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನುರಾಧ ಅವರು ಭೇಟಿ ನೀಡಿ, ಧರಣಿ ನಿರತ ಗ್ರಾ.ಪಂ ಸದಸ್ಯನ ಅಹವಾಲನ್ನು ಸ್ವೀಕರಿಸಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ದೂರು ಬಂದಿದೆ. ಅವರು ಮಾಡುತ್ತಿರುವ ಪ್ರತಿಭಟನೆ ನ್ಯಾಯುತವಾಗಿದಿಯೇ ಅಥವಾ ಇಲ್ಲವೋ ಎಂಬುದು ತನಿಖೆಯ ನಂತರ ತಿಳಿಯುತ್ತದೆ. ತನಿಖೆ ನಂತರ ಪಿಡಿಒ ಮತ್ತು ದೂರುದಾರರಿಗೆ ಇಬ್ಬರಿಗೂ ನೋಟಿಸ್ ನೀಡಲಾಗುತ್ತದೆ. ತನಿಖಾಧಿಕಾರಿ ಏನು ವರದಿ ನೀಡುತ್ತಾರೋ ಅದರ ಮೇಲೆ ತೀರ್ಮಾನ ತೆಗೆದುಕೊಳ್ಳುತ್ತದೆ. ಅವರ ಮುಖ್ಯ ಬೇಡಿಕೆ ಪಿಡಿಒ ವರ್ಗಾವಣೆ ಅಥವಾ ಅಮಾನತು ಮಾಡಬೇಕೆಂದು. ಇದು ನನ್ನ ವ್ಯಾಪ್ತಿಯಲ್ಲಿ ಇಲ್ಲ, ಈ ಕುರಿತು ಆಯುಕ್ತಾಲಯಕ್ಕೆ ವರದಿ ನೀಡುತ್ತೇನೆ. ಅಲ್ಲಿಂದ ಏನು ನಿರ್ದೇಶನ ಬರುತ್ತದೆ ಅದರ ಮೇಲೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಸರಕಾರದಿಂದ ಅವರ ಡೆಪಟೇಷನ್ ಆಗಿದೆ. ಹಾಗಾಗಿ ಅದನ್ನ ತೆಗೆದುಹಾಕಲು ನನ್ನ ವ್ಯಾಪ್ತಿಗೆ ಬರುವುದಿಲ್ಲ ಎಂದಿದ್ದಾರೆ.

ಆದರೆ, ನನಗೆ ನ್ಯಾಯ ಸಿಗುವವರೆಗೆ ನಾನು ಪ್ರತಿಭಟನೆಯಿಂದ ಹಿಂದೆ ಸರಿಯೋದಿಲ್ಲ ಎಂದು ಪಂಚಾಯತಿ ಸದಸ್ಯ ಪಟ್ಟು ಹಿಡಿದಿದ್ದಾರೆ.

ಒಟ್ಟಾರೆ ಅಂಗನವಾಡಿ ಸರ್ಕಾರಿ ಜಾಗವನ್ನೆ ಖಾಸಗಿಯವರಿಗೆ ಪಿಡಿಒ ಇ ಸ್ವತ್ತು ಮಾಡಿಕೊಟ್ಟಿರುವ ಆರೋಪ ಕೇಳಿ ಬಂದಿದ್ದು, ಇದರ ವಿರುದ್ದ ಪಂಚಾಯ್ತಿ ಸದಸ್ಯ ದಾಖಲೆಗಳ ಮೂಲಕ ಜಿಲ್ಲಾಡಳಿತ ಕಚೇರಿ ಮುಂದೆ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ಈ ಕೂಡಲೇ ಸಂಬಂಧಪಟ್ಟ ಜಿಲ್ಲಾಡಳಿತ ಈ ಬಗ್ಗೆ ತನಿಖೆಯನ್ನ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳತ್ತಾರೋ ಇಲ್ಲವೋ ಕಾದು ನೋಡಬೇಕಿದೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

55 minutes ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 hour ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

5 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

13 hours ago