ಅಂಗನವಾಡಿ ಜಾಗವನ್ನೇ ಗುಳುಂ ಮಾಡಲು ಪಿಡಿಒ ಯತ್ನ ಆರೋಪ: ಸರ್ಕಾರಿ ಜಾಗ ಉಳಿಸಲು ಜಿಟಿಜಿಟಿ ಮಳೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯನಿಂದ ಅಹೋರಾತ್ರಿ ಧರಣಿ: ಆರೋಪ ಕುರಿತ ತನಿಖೆ ನಡೆಸಲಾಗುವುದು: ಧರಣಿ ಕೈಬಿಡುವಂತೆ ಜಿ.ಪಂ ಸಿಇಒ ಮನವಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದಲ್ಲಿ ಬರುವ ಅತಿ ಶ್ರೀಮಂತ ಗ್ರಾಮ ಪಂಚಾಯ್ತಿ. ಆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇದೀಗ ಸರ್ಕಾರಿ ಅಂಗನವಾಡಿ ಜಾಗವನ್ನೇ ಗುಳುಂ ಮಾಡಲು ಪಿಡಿಒ ಪ್ರಯತ್ನ ಮಾಡಿದ್ದಾರೆ ಎಂದು ಅದೇ ಪಂಚಾಯ್ತಿ ಸದಸ್ಯರೊಬ್ಬರು ಆರೋಪ ಮಾಡಿ ಅಹೋರಾತ್ರಿ ಧರಣಿಗರ ಕುಳಿತಿದ್ದಾರೆ. ಪಿಡಿಓ ಅಮಾನತಿಗೆ ಆಗ್ರಹಿಸಿ ಬೀರಸಂದ್ರ ಜಿಲ್ಲಾಡಳಿತ ಭವನದ ಮುಂದೆ ಅಹೋರಾತ್ರಿ ಧರಣಿಯನ್ನ ಪಂಚಾಯ್ತಿ ಸದಸ್ಯ ನಡೆಸುತ್ತಿದ್ದಾರೆ.

ಜಿಲ್ಲಾಡಳಿತ ಕಚೇರಿ ಮುಂದೆ ಜಿಟಿಜಿಟಿ ಮಳೆಯನ್ನು ಲೆಕ್ಕಿಸದೆ ಪಂಚಾಯ್ತಿ ಸದಸ್ಯನ ಧರಣಿ ನಡೆಸುತ್ತಿದ್ದಾನೆ. ಪಂಚಾಯ್ತಿ ಸದಸ್ಯನ ಬೆಂಬಲಕ್ಕೆ ನಿಂತು ಪಿಡಿಒ ಅಮಾನತಿಗೆ ಆಗ್ರಹಿಸುತ್ತಿರೋ ಗ್ರಾಮಸ್ಥರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯ್ತಿಯಲ್ಲಿ ನಕಲಿ ಹಕ್ಕುಪತ್ರ ಸೃಷ್ಟಿ ಮಾಡಿ ಪಂಚಾಯ್ತಿ ಪಿಡಿಒ ಅಂಗನವಾಡಿ ಜಾಗವನ್ನ ಖಾಸಗಿ ವ್ಯಕ್ತಿಗಳಿಗೆ ಇ-ಖಾತಾ ಮಾಡಿಕೊಟ್ಟಿರುವ ಆರೋಪ ಕೇಳಿ ಬಂದಿದೆ. ಅಂದಹಾಗೆ ಪೂಜನಹಳ್ಳಿ ಗ್ರಾಮದಲ್ಲಿರುವ ಅಂಗನವಾಡಿ ಜಾಗವನ್ನ ಕನ್ನಮಂಗಲ ಗ್ರಾಮ ಪಂಚಾಯತಿ ಪಿಡಿಒ ಶ್ರೀನಿವಾಸ್ ನಕಲಿ ಹಕ್ಕುಪತ್ರದ ಅಡಿಯಲ್ಲಿ ಬೇರೆಯವರಿಗೆ ಇ-ಖಾತೆ ಮಾಡಿಕೊಡಲಾಗಿದೆ ಎಂದು ಗ್ರಾಮ ಪಂಚಾಯತಿ ಸದಸ್ಯ ಸೋಮಶೇಖರ್ ಆರೋಪಿಸಿದ್ದಾರೆ.

ಅಂಗನವಾಡಿ ಜಾಗವನ್ನ ಗುಳುಂ ಮಾಡಲು ಹೊರಟಿದ್ದ ಪಿಡಿಒರನ್ನ ಅಮಾನತಿಗೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ಅಂದಹಾಗೆ ಸರ್ಕಾರಿ ಅಂಗನವಾಡಿ ಮತ್ತು ಸರ್ಕಾರಿ ರಸ್ತೆ ಜೊತೆ ಜೊತೆಗೆ ಅಂಗನವಾಡಿ ಪಕ್ಕದಲ್ಲಿರುವ ಡೈರಿ ಕಟ್ಟಡ ಮತ್ತು ಒಂದು ಗೋಡೌನ್ ಸೇರಿ ಒಟ್ಟು ಒಂಭತ್ತು ಸಾವಿರ ಅಡಿಗಳಷ್ಟು ಜಾಗವನ್ನು ನಕಲಿ ಹಕ್ಕು ಪತ್ರದ ಆಧಾರದ ಮೇಲೆ ಇ-ಸ್ವತ್ತು ಮಾಡಲಾಗಿದೆಯಂತೆ. ಕೋಟ್ಯಾಂತರ ಮೌಲ್ಯದ ಜಾಗವನ್ನ ಪಿಡಿಒ ಖಾಸಗಿ ವ್ಯಕ್ತಿಗಳಿಗೆ ಮಾಡಿಕೊಟ್ಟು ಮತ್ತೆ ಖಾಸಗಿ ವ್ಯಕ್ತಿಗಳಿಂದ ದಾನಪತ್ರವಾಗಿ ಮತ್ತದೆ ಪಂಚಾಯ್ತಿಗೆ ಬರಿಸಿಕೊಳ್ಳುವ ಮೂಲಕ ಅದರಲ್ಲೂ ಗೋಲ್ ಮಾಲ್ ಮಾಡಿದ್ದು, ಅಕ್ರಮ ನಡೆಸಲು ಕಾರಣವಾದ ಪಿಡಿಒ ಶ್ರೀನಿವಾಸ್.ಟಿ ಸೇರಿದಂತೆ ಇತರೆ ಅಧಿಕಾರಿಗಳನ್ನು ಅಮಾನತ್ತು ಮಾಡಿ ವಿಶೇಷ ತಂಡ ರಚನೆ ಮಾಡಿ ತನಿಖೆ ನಡೆಸಬೇಕೆಂದು ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನುರಾಧ ಅವರು ಭೇಟಿ ನೀಡಿ, ಧರಣಿ ನಿರತ ಗ್ರಾ.ಪಂ ಸದಸ್ಯನ ಅಹವಾಲನ್ನು ಸ್ವೀಕರಿಸಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ದೂರು ಬಂದಿದೆ. ಅವರು ಮಾಡುತ್ತಿರುವ ಪ್ರತಿಭಟನೆ ನ್ಯಾಯುತವಾಗಿದಿಯೇ ಅಥವಾ ಇಲ್ಲವೋ ಎಂಬುದು ತನಿಖೆಯ ನಂತರ ತಿಳಿಯುತ್ತದೆ. ತನಿಖೆ ನಂತರ ಪಿಡಿಒ ಮತ್ತು ದೂರುದಾರರಿಗೆ ಇಬ್ಬರಿಗೂ ನೋಟಿಸ್ ನೀಡಲಾಗುತ್ತದೆ. ತನಿಖಾಧಿಕಾರಿ ಏನು ವರದಿ ನೀಡುತ್ತಾರೋ ಅದರ ಮೇಲೆ ತೀರ್ಮಾನ ತೆಗೆದುಕೊಳ್ಳುತ್ತದೆ. ಅವರ ಮುಖ್ಯ ಬೇಡಿಕೆ ಪಿಡಿಒ ವರ್ಗಾವಣೆ ಅಥವಾ ಅಮಾನತು ಮಾಡಬೇಕೆಂದು. ಇದು ನನ್ನ ವ್ಯಾಪ್ತಿಯಲ್ಲಿ ಇಲ್ಲ, ಈ ಕುರಿತು ಆಯುಕ್ತಾಲಯಕ್ಕೆ ವರದಿ ನೀಡುತ್ತೇನೆ. ಅಲ್ಲಿಂದ ಏನು ನಿರ್ದೇಶನ ಬರುತ್ತದೆ ಅದರ ಮೇಲೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಸರಕಾರದಿಂದ ಅವರ ಡೆಪಟೇಷನ್ ಆಗಿದೆ. ಹಾಗಾಗಿ ಅದನ್ನ ತೆಗೆದುಹಾಕಲು ನನ್ನ ವ್ಯಾಪ್ತಿಗೆ ಬರುವುದಿಲ್ಲ ಎಂದಿದ್ದಾರೆ.

ಆದರೆ, ನನಗೆ ನ್ಯಾಯ ಸಿಗುವವರೆಗೆ ನಾನು ಪ್ರತಿಭಟನೆಯಿಂದ ಹಿಂದೆ ಸರಿಯೋದಿಲ್ಲ ಎಂದು ಪಂಚಾಯತಿ ಸದಸ್ಯ ಪಟ್ಟು ಹಿಡಿದಿದ್ದಾರೆ.

ಒಟ್ಟಾರೆ ಅಂಗನವಾಡಿ ಸರ್ಕಾರಿ ಜಾಗವನ್ನೆ ಖಾಸಗಿಯವರಿಗೆ ಪಿಡಿಒ ಇ ಸ್ವತ್ತು ಮಾಡಿಕೊಟ್ಟಿರುವ ಆರೋಪ ಕೇಳಿ ಬಂದಿದ್ದು, ಇದರ ವಿರುದ್ದ ಪಂಚಾಯ್ತಿ ಸದಸ್ಯ ದಾಖಲೆಗಳ ಮೂಲಕ ಜಿಲ್ಲಾಡಳಿತ ಕಚೇರಿ ಮುಂದೆ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ಈ ಕೂಡಲೇ ಸಂಬಂಧಪಟ್ಟ ಜಿಲ್ಲಾಡಳಿತ ಈ ಬಗ್ಗೆ ತನಿಖೆಯನ್ನ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳತ್ತಾರೋ ಇಲ್ಲವೋ ಕಾದು ನೋಡಬೇಕಿದೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

1 hour ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

7 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

21 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

22 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

23 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

23 hours ago