Categories: ಕೋಲಾರ

ಅಂಗನವಾಡಿ ನೌಕರರ ಅಹೋರಾತ್ರಿ ಧರಣಿ ಅಂತ್ಯ: ಬೇಡಿಕೆಗಳ ಈಡೇರಿಕೆಗೆ 15 ದಿನಗಳ ಕಾಲಾವಕಾಶ: ಸ್ಪಂದಿಸದಿದ್ದರೆ ಬೆಂಗಳೂರು ಚಲೋಗೆ ನಿರ್ಧಾರ

ಕೋಲಾರ: ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘ (ಸಿಐಟಿಯು) ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹವು ಬುಧವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾರಾಯಣಸ್ವಾಮಿ ಅವರಿಗೆ ಮನವಿ ಸಲ್ಲಿಸಿ ಧರಣಿಯನ್ನು ಮುಕ್ತಾಯಗೊಳಿಸಿದರು,

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅಂಜಲಮ್ಮ ಮಾತನಾಡಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ ೫೦ ವರ್ಷಗಳು ಸಮೀಪಿಸುತ್ತಿದೆ. ಪಾಲನೆ, ಪೋಷಣೆ, ಶಿಕ್ಷಣ ಸಂವಿಧಾನ ಬದ್ಧ ಕರ್ತವ್ಯಗಳಿವೆ. 2013ರ ಆಹಾರ ಭದ್ರತಾಕಾಯ್ದೆ, 2009ರ ಕಡ್ಡಾಯ ಶಿಕ್ಷಣ ಕಾಯ್ದೆಯ ಕರ್ತವ್ಯಗಳನ್ನು ಶಾಸನಬದ್ಧವಾಗಿ ಸ್ಥಾಪಿಸಲ್ಪಟ್ಟ ಅಂಗನವಾಡಿ ಕೇಂದ್ರಗಳ ಮುಖಾಂತರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಜಾರಿ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ಮತ್ತು ಗುಜರಾತ್ ಹೈಕೋರ್ಟ್ ಗಳು ಅವರನ್ನು 3 ಮತ್ತು 4 ಗ್ರೇಡ್‌ನ ನೌಕರರನ್ನಾಗಿ ಪರಿಗಣಿಸಲು ಜಂಟಿ ನಿಯಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಬೇಕೆಂದು ನಿಯಮ ಇದ್ದರೂ ಜಾರಿ ಮಾಡಿಲ್ಲ ಎಂದು ಆರೋಪಿಸಿದರು

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕಲ್ಪನಾ ಮಾತನಾಡಿ ಕೇಂದ್ರ ಸರ್ಕಾರವು ತನ್ನ ಮೂಲ ಜವಾಬ್ದಾರಿಯಿಂದ ನುಣಿಚಿಕೊಂಡು ಬಜೆಟ್ ಅನುದಾನಗಳನ್ನು ನಿರಂತರವಾಗಿ ಕಡತ ಮಾಡಿ ಅಂಗನವಾಡಿ ಮಕ್ಕಳಿಗೆ ಕೊಡುವ ಪೌಷ್ಠಿಕ ಆಹಾರದ ಘಟಕ ವೆಚ್ಚ ೨೦೧೮ರಿಂದ ಹೆಚ್ಚಳ ಮಾಡಿಲ್ಲ ಅದರಿಂದ ಗುಣಮಟ್ಟದ ಆಹಾರ ಪದಾರ್ಥಗಳನ್ನು ಕೊಡುವುದರಲ್ಲಿ ವೈಫಲ್ಯತೆ ಎದ್ದು ಕಾಣುತ್ತಿದೆ. ಅಂಗನವಾಡಿ ನೌಕರರ ವೇತನವನ್ನು ಕೂಡಾ ಹೆಚ್ಚಳ ಮಾಡದೇ ಹೊಸ ಆಕರ್ಷಕ ಘೋಷಣೆಗಳಿಗೆ ಮಾತ್ರವೇ ಸೀಮಿತವಾಗುತ್ತಿದೆ ಎಂದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಲಹೀನಗೊಳಿಸಲು ಶಿಕ್ಷಣ ಇಲಾಖೆ 4 ವರ್ಷದ ಮೇಲ್ಪಟ್ಟ ಮಕ್ಕಳನ್ನು ಸ್ಥಳಾಂತರಿಸಲು ಬೇರೆ ಬೇರೆ ಸ್ವರೂಪಗಳಲ್ಲಿ ಪ್ರಯತ್ನಿಸುತ್ತಿದೆ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಆಭಿವೃದ್ಧಿ ಇಲಾಖೆ ತಡೆ ಹಾಕಿ ಅಂಗನವಾಡಿ ಕೇಂದ್ರಗಳನ್ನು ಪೂರ್ವ ಪ್ರಾರ್ಥಮಿಕ ಶಿಕ್ಷಣ ಕೇಂದ್ರಗಳಾಗಿ ಪರಿವರ್ತಿಸಲು ತೀರ್ಮಾನಿಸಿದೆ ಆದರೆ ಇದಕ್ಕೆ ಬೇಕಾದಂತಹ ಹಣಕಾಸನ್ನು ಬಿಡುಗಡೆ ಮಾಡಿಲ್ಲ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಾಗ ತನ್ನ ಪ್ರಚಾರದಲ್ಲಿ ಹೇಳಿದಂತೆ ೩೫೦೦ ರೂ ಮತ್ತು ೧೭೫೦ ರೂ.ವೇತನ ಹೆಚ್ಚಿಸಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು

ಸಂಘಟನೆಯ ಮುಖಂಡರು ಮಾತನಾಡಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಕೇಂದ್ರಗಳ ಬಾಡಿಗೆ ಹಣ ಪ್ರತಿ ತಿಂಗಳ ತೆಗೆಯಬೇಕು. ಗ್ಯಾಸ್ ಸಿಲಿಂಡರ್ ಹಣ ಖಾತೆಗೆ ಹಾಕುವ ಬದಲು ನೇರವಾಗಿ ಸಿಲಿಂಡರ್‌ಗಳು ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಬೇಕು. ಮೊಟ್ಟೆ ಹಣ ಬೆಲೆ ಏರಿಕೆ ಅನುಸಾರವಾಗಿ ಬಿಲ್ ಜಮಾ ಮಾಡಬೇಕು. ಅಂಗನವಾಡಿ ಕೇಂದ್ರಗಳಿಗೆ ಪ್ರತಿ ತಿಂಗಳ ಸರಿಯಾಗಿ ಹಾಲಿನ ಪೌಡರ್ ಬರುವಂತೆ ಮಾಡಬೇಕು. ಅಂಗನವಾಡಿ ಕಾರ್ಯಕರ್ತರಿಗೆ ಬಿ ಎಲ್ ಓ ಕೆಲಸದಿಂದ ಕೈಬಿಡಬೇಕು ಶಾಲಾ ಪೂರ್ವ ಶಿಕ್ಷಣ ನೆಡೆಸಲು ತೊಂದರೆ ಆಗುತ್ತದೆ.ಮಿನಿ ಅಂಗನವಾಡಿ ಕಾರ್ಯಕರ್ತರಿಗೆ ಇರುವ ಆದೇಶ ಕೊಡಬೇಕು. ಅಂಗನವಾಡಿ ನೌಕರರಿಗೆ ಗೌರವಧನ ಪ್ರತಿ ತಿಂಗಳಾಗಬೇಕು ಹಾಗೂ ಗೌರವಧನ ಪಡೆಯುವ ಬ್ಯಾಂಕುಗಳಲ್ಲಿ ಸಾಲ ಪಡೆಯುವ ಅನುವು ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರ ಟಿಎ ಮತ್ತು ಡಿಎ ಬೆಲೆ ಏರಿಕೆ ಅನುಸಾರವಾಗಿ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ, ಜೆಎಂಎಸ್ ಮುಖಂಡರಾದ ವಿ.ಗೀತಾ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು ನೇತೃತ್ವವನ್ನು ಸಂಘಟನೆಯ ಜಿಲ್ಲಾ ಖಜಾಂಚಿ ಸುಜಾತ, ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳಾ, ಖಜಾಂಚಿ ಲಕ್ಷ್ಮೀದೇವಿ, ಮುಖಂಡರಾದ ಮಮತ, ಪುಷ್ಪಾವತಿ, ವಸಂತ, ಇಂದ್ರಾಣಿ, ಶಶಿಕಲಾ, ಅಮುದಾ, ರತ್ನಮ್ಮ ಸೇರಿದಂತೆ ನೌಕರರು ವಹಿಸಿದ್ದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

1 day ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

4 days ago