Categories: ಕೋಲಾರ

ಅಂಗನವಾಡಿ ನೌಕರರ ಅಹೋರಾತ್ರಿ ಧರಣಿ ಅಂತ್ಯ: ಬೇಡಿಕೆಗಳ ಈಡೇರಿಕೆಗೆ 15 ದಿನಗಳ ಕಾಲಾವಕಾಶ: ಸ್ಪಂದಿಸದಿದ್ದರೆ ಬೆಂಗಳೂರು ಚಲೋಗೆ ನಿರ್ಧಾರ

ಕೋಲಾರ: ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘ (ಸಿಐಟಿಯು) ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹವು ಬುಧವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾರಾಯಣಸ್ವಾಮಿ ಅವರಿಗೆ ಮನವಿ ಸಲ್ಲಿಸಿ ಧರಣಿಯನ್ನು ಮುಕ್ತಾಯಗೊಳಿಸಿದರು,

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅಂಜಲಮ್ಮ ಮಾತನಾಡಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ ೫೦ ವರ್ಷಗಳು ಸಮೀಪಿಸುತ್ತಿದೆ. ಪಾಲನೆ, ಪೋಷಣೆ, ಶಿಕ್ಷಣ ಸಂವಿಧಾನ ಬದ್ಧ ಕರ್ತವ್ಯಗಳಿವೆ. 2013ರ ಆಹಾರ ಭದ್ರತಾಕಾಯ್ದೆ, 2009ರ ಕಡ್ಡಾಯ ಶಿಕ್ಷಣ ಕಾಯ್ದೆಯ ಕರ್ತವ್ಯಗಳನ್ನು ಶಾಸನಬದ್ಧವಾಗಿ ಸ್ಥಾಪಿಸಲ್ಪಟ್ಟ ಅಂಗನವಾಡಿ ಕೇಂದ್ರಗಳ ಮುಖಾಂತರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಜಾರಿ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ಮತ್ತು ಗುಜರಾತ್ ಹೈಕೋರ್ಟ್ ಗಳು ಅವರನ್ನು 3 ಮತ್ತು 4 ಗ್ರೇಡ್‌ನ ನೌಕರರನ್ನಾಗಿ ಪರಿಗಣಿಸಲು ಜಂಟಿ ನಿಯಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಬೇಕೆಂದು ನಿಯಮ ಇದ್ದರೂ ಜಾರಿ ಮಾಡಿಲ್ಲ ಎಂದು ಆರೋಪಿಸಿದರು

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕಲ್ಪನಾ ಮಾತನಾಡಿ ಕೇಂದ್ರ ಸರ್ಕಾರವು ತನ್ನ ಮೂಲ ಜವಾಬ್ದಾರಿಯಿಂದ ನುಣಿಚಿಕೊಂಡು ಬಜೆಟ್ ಅನುದಾನಗಳನ್ನು ನಿರಂತರವಾಗಿ ಕಡತ ಮಾಡಿ ಅಂಗನವಾಡಿ ಮಕ್ಕಳಿಗೆ ಕೊಡುವ ಪೌಷ್ಠಿಕ ಆಹಾರದ ಘಟಕ ವೆಚ್ಚ ೨೦೧೮ರಿಂದ ಹೆಚ್ಚಳ ಮಾಡಿಲ್ಲ ಅದರಿಂದ ಗುಣಮಟ್ಟದ ಆಹಾರ ಪದಾರ್ಥಗಳನ್ನು ಕೊಡುವುದರಲ್ಲಿ ವೈಫಲ್ಯತೆ ಎದ್ದು ಕಾಣುತ್ತಿದೆ. ಅಂಗನವಾಡಿ ನೌಕರರ ವೇತನವನ್ನು ಕೂಡಾ ಹೆಚ್ಚಳ ಮಾಡದೇ ಹೊಸ ಆಕರ್ಷಕ ಘೋಷಣೆಗಳಿಗೆ ಮಾತ್ರವೇ ಸೀಮಿತವಾಗುತ್ತಿದೆ ಎಂದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಲಹೀನಗೊಳಿಸಲು ಶಿಕ್ಷಣ ಇಲಾಖೆ 4 ವರ್ಷದ ಮೇಲ್ಪಟ್ಟ ಮಕ್ಕಳನ್ನು ಸ್ಥಳಾಂತರಿಸಲು ಬೇರೆ ಬೇರೆ ಸ್ವರೂಪಗಳಲ್ಲಿ ಪ್ರಯತ್ನಿಸುತ್ತಿದೆ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಆಭಿವೃದ್ಧಿ ಇಲಾಖೆ ತಡೆ ಹಾಕಿ ಅಂಗನವಾಡಿ ಕೇಂದ್ರಗಳನ್ನು ಪೂರ್ವ ಪ್ರಾರ್ಥಮಿಕ ಶಿಕ್ಷಣ ಕೇಂದ್ರಗಳಾಗಿ ಪರಿವರ್ತಿಸಲು ತೀರ್ಮಾನಿಸಿದೆ ಆದರೆ ಇದಕ್ಕೆ ಬೇಕಾದಂತಹ ಹಣಕಾಸನ್ನು ಬಿಡುಗಡೆ ಮಾಡಿಲ್ಲ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಾಗ ತನ್ನ ಪ್ರಚಾರದಲ್ಲಿ ಹೇಳಿದಂತೆ ೩೫೦೦ ರೂ ಮತ್ತು ೧೭೫೦ ರೂ.ವೇತನ ಹೆಚ್ಚಿಸಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು

ಸಂಘಟನೆಯ ಮುಖಂಡರು ಮಾತನಾಡಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಕೇಂದ್ರಗಳ ಬಾಡಿಗೆ ಹಣ ಪ್ರತಿ ತಿಂಗಳ ತೆಗೆಯಬೇಕು. ಗ್ಯಾಸ್ ಸಿಲಿಂಡರ್ ಹಣ ಖಾತೆಗೆ ಹಾಕುವ ಬದಲು ನೇರವಾಗಿ ಸಿಲಿಂಡರ್‌ಗಳು ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಬೇಕು. ಮೊಟ್ಟೆ ಹಣ ಬೆಲೆ ಏರಿಕೆ ಅನುಸಾರವಾಗಿ ಬಿಲ್ ಜಮಾ ಮಾಡಬೇಕು. ಅಂಗನವಾಡಿ ಕೇಂದ್ರಗಳಿಗೆ ಪ್ರತಿ ತಿಂಗಳ ಸರಿಯಾಗಿ ಹಾಲಿನ ಪೌಡರ್ ಬರುವಂತೆ ಮಾಡಬೇಕು. ಅಂಗನವಾಡಿ ಕಾರ್ಯಕರ್ತರಿಗೆ ಬಿ ಎಲ್ ಓ ಕೆಲಸದಿಂದ ಕೈಬಿಡಬೇಕು ಶಾಲಾ ಪೂರ್ವ ಶಿಕ್ಷಣ ನೆಡೆಸಲು ತೊಂದರೆ ಆಗುತ್ತದೆ.ಮಿನಿ ಅಂಗನವಾಡಿ ಕಾರ್ಯಕರ್ತರಿಗೆ ಇರುವ ಆದೇಶ ಕೊಡಬೇಕು. ಅಂಗನವಾಡಿ ನೌಕರರಿಗೆ ಗೌರವಧನ ಪ್ರತಿ ತಿಂಗಳಾಗಬೇಕು ಹಾಗೂ ಗೌರವಧನ ಪಡೆಯುವ ಬ್ಯಾಂಕುಗಳಲ್ಲಿ ಸಾಲ ಪಡೆಯುವ ಅನುವು ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರ ಟಿಎ ಮತ್ತು ಡಿಎ ಬೆಲೆ ಏರಿಕೆ ಅನುಸಾರವಾಗಿ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ, ಜೆಎಂಎಸ್ ಮುಖಂಡರಾದ ವಿ.ಗೀತಾ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು ನೇತೃತ್ವವನ್ನು ಸಂಘಟನೆಯ ಜಿಲ್ಲಾ ಖಜಾಂಚಿ ಸುಜಾತ, ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳಾ, ಖಜಾಂಚಿ ಲಕ್ಷ್ಮೀದೇವಿ, ಮುಖಂಡರಾದ ಮಮತ, ಪುಷ್ಪಾವತಿ, ವಸಂತ, ಇಂದ್ರಾಣಿ, ಶಶಿಕಲಾ, ಅಮುದಾ, ರತ್ನಮ್ಮ ಸೇರಿದಂತೆ ನೌಕರರು ವಹಿಸಿದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

26 minutes ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

15 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago