Categories: ಕೋಲಾರ

ಅಂಗನವಾಡಿ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಸಂಸದರ ಕಚೇರಿ ಮುಂದೆ ಬೃಹತ್ ಧರಣಿ

ಕೋಲಾರ: ಕೇಂದ್ರ ಸರಕಾರವು ಮುಂಬರುವ ಫೆಬ್ರವರಿ ಬಜೆಟ್ ನಲ್ಲಿ ಅಂಗನವಾಡಿ ನೌಕರರ ಐಸಿಡಿಎಸ್ ಯೋಜನೆಯ ಅನುದಾನ ಹೆಚ್ಚಳ, ಕನಿಷ್ಠ ವೇತನ ಜಾರಿ ಸೇರಿದಂತೆ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಟ್ಟು ಜನಪರ ನೀತಿಗಳಿಗಾಗಿ ಅಗ್ರಹಿಸಿ, ದುಡಿಯುವ ವರ್ಗದ ಹಕ್ಕನ್ನು ಸಂರಕ್ಷಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಅಂಗನವಾಡಿ ನೌಕರರ ಸಂಘದ ವತಿಯಿಂದ ಮಂಗಳವಾರ ನಗರದ ಸಂಸದರ ಕಚೇರಿ ಮುಂದೆ ಧರಣಿ ನಡೆಸಿದರು.

ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಸಂಸದ ಎಸ್.ಮುನಿಸ್ವಾಮಿ ಅವರ ಕಚೇರಿಯವರಗೆ ಕಾಲ್ನಡಿಗೆಯಲ್ಲಿ ಆಗಮಿಸಿದ ಅಂಗನವಾಡಿ ನೌಕರರು, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹಾಗೂ ರಾಜ್ಯ ಮತ್ತು ಕೇಂದ್ರ ಸರಕಾರ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಅಂಗನವಾಡಿ ನೌಕರರ ಜಿಲ್ಲಾ ಅಧ್ಯಕ್ಷೆ ಅಂಜಲಮ್ಮ ಮಾತನಾಡಿ, ಕಳೆದ 10 ವರ್ಷಗಳ ಹಿಂದೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಬಂದ ನಂತರ ದೇಶದ ಕಾರ್ಮಿಕ ವರ್ಗವು ತೀವ್ರ ಸಂಕಷ್ಟದಲ್ಲಿದ್ದು, ಬದುಕು ಸಾಗಿಸಲು ಸಹ ಹರಸಾಹಸಪಡುವಂತಾಗಿದೆ. ದೇಶವನ್ನಾಳುವ ಸರಕಾರವು ನಿರಂತರವಾಗಿ ಕಾರ್ಪೊರೇಟ್ ಸಂಸ್ಥೆಗಳ ಪರವಾದ ನೀತಿಗಳನ್ನು ಜಾರಿಗೊಳಿಸುತ್ತಿದೆ. ದೇಶದ ಪ್ರಮುಖ ಕಾರ್ಮಿಕ ಕಾನೂನುಗಳನ್ನು ಸಂಹಿತೆಯನ್ನಾಗಿ ರೂಪಿಸಲು ಹೊರಟಿದ್ದು, ಮತ್ತೆ ಕಾರ್ಮಿಕರನ್ನು ಗುಲಾಮರನ್ನಾಗಿ ದುಡಿಸುವ ಷಡ್ಯಂತ್ರ ಅಡಗಿದೆ. ಕನಿಷ್ಟ ಕೂಲಿ, ಸಾಮಾಜಿಕ ಭದ್ರತೆ ಇಲ್ಲದೆ ಅಸಂಘಟಿತ ಕ್ಷೇತ್ರದ ಕಾರ್ಮಿಕರು ಅತ್ಯಂತ ನಿಕೃಷ್ಟವಾಗಿ ಬದುಕುವಂತಾಗಿದೆ. ಕೇಂದ್ರ ಸರಕಾರದ ಯೋಜನೆಯಡಿಯಲ್ಲಿ ದುಡಿಯುವ ಸ್ಕೀಂ ನೌಕರರಾದ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರು ತಮ್ಮ ಅಸ್ತಿತ್ವಕ್ಕಾಗಿ ಹೆಣಗಾಡುವಂತಾಗಿದೆ ಎಂದು ಸರಕಾರದ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಸಾರ್ವಜನಿಕ ಉದ್ದಿಮೆಗಳನ್ನು ಕಾರ್ಪೊರೇಟ್ ಕಂಪನಿಗಳ ಕೈಗೊಪ್ಪಿಸಿ ದೇಶದ ಆರ್ಥಿಕತೆಯನ್ನೇ ದಿವಾಳಿಯೆಬ್ಬಿಸಿದೆ. ಇಂತಹ ಸಂದರ್ಭದಲ್ಲಿ ದೇಶದ ಜನತೆಯ ಬದುಕನ್ನು ಸಂರಕ್ಷಿಸಲು ಕಾರ್ಮಿಕ ವರ್ಗ ಒಂದಾಗಿ ಸಮರಧೀರ ಹೋರಾಟದತ್ತ ಮುನ್ನಡೆಯಲು ಸಂಸದರ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಸ್ಪಂದಿಸದೇ ಹೋದರೆ ಮುಂದಿನ ಚುನಾವಣೆಯಲ್ಲಿ ರಾಜಕಾರಣವನ್ನು ಅಂಗನವಾಡಿ ನೌಕರರು ನಿರ್ಧರಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕಲ್ಪನಾ ಮಾತನಾಡಿ, ಶ್ರಮಿಕ ವರ್ಗವು ದೇಶದ ಶಕ್ತಿ ಎಂಬುದನ್ನು ತೋರಿಸಬೇಕಾಗಿದೆ ಬಿಸಿಯೂಟ, ಅಂಗನವಾಡಿ, ಆಶಾ ಕಾರ್ಯಕರ್ತೆಯರಂಥಹ ಶ್ರಮಿಕ ವರ್ಗದ ಹಿತರಕ್ಷಣೆಯನ್ನು ಸರಕಾರವೇ ನಿರ್ಲಕ್ಷಿಸಲಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳ ಅನುದಾನ, ವೇತನ ಹೆಚ್ಚಿಸುತ್ತಿಲ್ಲ. ಕೊರೊನಾ, ಲಾಕ್‌ಡೌನ್‌ ಸಂದರ್ಭದಲ್ಲಿ ಪ್ರಾಣ ಪಣಕ್ಕಿಟ್ಟು ಸೇವೆ ಸಲ್ಲಿಸಿದ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮೃತರಾದರೆ ಪರಿಹಾರ ನೀಡುವುದಾಗಿ ಹೇಳಿದ್ದ ಸರಕಾರದ ಭರವಸೆ ಇಂದಿಗೂ ಈಡೇರಿಲ್ಲ. ಕೂಡಲೇ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರಿಗೆ ಕನಿಷ್ಟ ಕೂಲಿ 31 ಸಾವಿರ ನೀಡಬೇಕು, ನಿವೃತ್ತಿ ವೇತನ, ಮಾಸಿಕ ಪಿಂಚಣಿ ನಿಗದಿಪಡಿಸಬೇಕು. ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಭರವಸೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, ಸರಕಾರವು ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ ಮಾಡಬೇಕು. ಆಹಾರ, ಆರೋಗ್ಯ, ಶಿಕ್ಷಣಕ್ಕಾಗಿ ಇರುವ ಯೋಜನೆಗಳಾದ ಐಸಿಡಿಎಸ್, ಎಂಡಿಎಂ, ಎನ್‌ಹೆಚ್‌ಎಂ, ಐಸಿಪಿಎಸ್, ಎಸ್ಎಸ್ಎ ನರೇಗಾ ಯೋಜನೆಗಳಲ್ಲಿ ದುಡಿಯುತ್ತಿರುವ ಸಿಬ್ಬಂದಿ ಸೇರಿದಂತೆ 1 ಕೋಟಿ ನೌಕರರಿಗೆ ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳನ್ನು ಕೊಟ್ಟು ನೌಕರರೆಂದು ಪರಿಗಣಿಸಬೇಕು, ವರ್ಷದೊಳಗಿನ ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಸಾರ್ವತ್ರಿಕವಾಗಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿಯೇ ನೀಡಲು ಕಾನೂನು ರಚಿಸಬೇಕು. ಎನ್.ಇ.ಪಿ ನಿಲ್ಲಿಸಬೇಕು, ಈ ಯೋಜನೆಗಳಲ್ಲಿ ದುಡಿಯುವ ಗುತ್ತಿಗೆ, ಒಳಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಿ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ ಮಾಡಬೇಕು. ಇವರನ್ನು ಖಾಯಂ ಮಾಡಲು ವಿಶೇಷ ಕಾನೂನು ರಚಿಸಬೇಕು, 49 ವರ್ಷಗಳಿಂದ ದುಡಿಯುತ್ತಿರುವ ಅಂಗನವಾಡಿ ನೌಕರರು, 21 ವರ್ಷಗಳಿಂದ ದುಡಿಯುವ ಬಿಸಿಯೂಟ ನೌಕರರಿಗೆ ಆಶಾ ಮತ್ತು ಇತರೆ ಸಿಬ್ಬಂದಿಗೆ 31 ಸಾವಿರ ಕನಿಷ್ಠ ವೇತನ ಜಾರಿ ಮಾಡಬೇಕು. ನಿವೃತ್ತಿ ಸೌಲಭ್ಯಗಳನ್ನು ಮಾಸಿಕ ಕನಿಷ್ಠ ಹತ್ತು ಸಾವಿರ ಪಿಂಚಣಿ ಕಲ್ಪಿಸಬೇಕು, ಬಿಸಿಯೂಟ ನೌಕರರಿಗೆ ಪರಿಹಾರ ನೀಡದೇ ನಿವೃತ್ತಿ ಮಾಡಬಾರದು, ಎಂದು ಒತ್ತಾಯಿಸಿದರು.

ಧರಣಿಯ ನೇತೃತ್ವವನ್ನು ಸಿಐಟಿಯು ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಎಂ.ವಿಜಯಕೃಷ್ಣ, ಭೀಮರಾಜ್, ಆಶಾ, ಎಚ್.ಬಿ ಕೃಷ್ಣಪ್ಪ, ಕೇಶವರಾವ್, ಜೆಎಂಎಸ್ ವಿ.ಗೀತಾ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಖಜಾಂಚಿ ಸುಜಾತ, ತಾಲೂಕು ಖಜಾಂಚಿ ಲಕ್ಷ್ಮೀದೇವಮ್ಮ, ವಿವಿಧ ತಾಲೂಕುಗಳ ಮುಖಂಡರಾದ ಮಮತಾ, ಪುಷ್ಪಲತಾ, ಹೇಮಾಲತ, ವಸಂತ, ಜಯಲಕ್ಷ್ಮಿ, ರತ್ನಮ್ಮ, ಅಮುದಾ, ನಾಗಮಣಿ, ಇಂದ್ರಾಣಿ, ಶಶಿಕಲಾ ಮುಂತಾದವರು ವಹಿಸಿದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

6 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago