ಅಂಗನವಾಡಿ ಪಕ್ಕದಲ್ಲೇ ಕಸದ ರಾಶಿ: ಗಬ್ಬೆದ್ದು ನಾರುತ್ತಿರುವ ದೇವರಾಜನಗರ: ಕ್ಯಾರೆ ಎನ್ನದ ಜನಪ್ರತಿನಿಧಿಗಳು, ಅಧಿಕಾರಿಗಳು: ರೋಗರುಜಿನ ಭೀತಿಯಲ್ಲಿ ಮಕ್ಕಳು, ವಾರ್ಡ್ ನಿವಾಸಿಗಳು

ಸ್ವಚ್ಛ ನಗರಸಭೆ ಖ್ಯಾತಿಯ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ದೇವರಾಜನಗರ ವಾರ್ಡ್ ಕಸದ ರಾಶಿಗಳಿಂದ ಗಬ್ಬೆದು ನಾರುತ್ತಿದೆ.

ವಾರ್ಡ್ ನಲ್ಲಿರುವ ಅಂಗನವಾಡಿ ಪಕ್ಕದಲ್ಲಿ ಕಸದರಾಶಿ ಇದ್ದು, ಅಂಗನಾಡಿಗೆ ಬರುವ ಮಕ್ಕಳು ಮುಗು ಮುಚ್ಚಿಕೊಂಡು ಶಾಲೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ.

ಕಸದ ರಾಶಿ ಜೊತೆಗೆ ವಿದ್ಯುತ್ ಪರಿವರ್ತಕ ಕೂಡ ಅಂಗನವಾಡಿ ಪಕ್ಕದಲ್ಲೇ ಇದೆ. ಅದರ ಕೆಳಗೆ ಈ ಕಸದ ರಾಶಿ ಇದೆ. ಇದರಿಂದ ವಾರ್ಡ್ ನಿವಾಸಿಗಳು ಜೀವ ಭಯದಲ್ಲಿ ಓಡಾಡುತ್ತಿದ್ದಾರೆ.

ಕಸದ ರಾಶಿಯನ್ನು ಬಹು ದಿನಗಳಿಂದ ತೆರವುಗೊಳಿಸಿಲ್ಲವಾದ್ದರಿಂದ ತ್ಯಾಜ್ಯವು ಕೊಳೆತು ದುರ್ವಾಸನೆ ಬೀರುತ್ತಿದೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಾರ್ಡ್ ಸಂಪೂರ್ಣ ಕಸಮಯವಾಗಿದೆ. ನಗರಸಭೆ ಸ್ವಚ್ಛತಾ ಸಿಬ್ಬಂದಿ ಪ್ರತಿದಿನ ಸಮಯಕ್ಕೆ ಸರಿಯಾಗಿ ತಪ್ಪದೆ ಬಂದು ಕಸ ತೆಗದುಕೊಂಡು ಹೋದಲ್ಲಿ ಈ ಸಮಸ್ಯೆಯೇ ಇರುವುದಿಲ್ಲ. ಆದರೆ, ವಾರ್ಡ್‌ ಸದಸ್ಯರುಗಳು ಈ ಬಗ್ಗೆ ಗಮನ ಹರಿಸದೆ ಇರುವುದರಿಂದ ಕಸದ ಸಮಸ್ಯೆ ಬಿಗಡಾಯಿಸಿದೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೊಳ್ಳೆಗಳ ಕಾಟಕ್ಕೆ ಜನ ಹೈರಾಣು: ನಗರದಲ್ಲಿ ಎರಡು ದಿನದಿಂದ ಮಳೆಯಾಗುತ್ತಿದ್ದು, ಸೊಳ್ಳೆಗಳು ಹೆಚ್ಚಾಗಿವೆ. ಇದರಿಂದ ಸಾರ್ವಜನಿಕರು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸೊಳ್ಳೆ ನಿಯಂತ್ರಣ (ಫಾಗಿಂಗ್‌) ಯಂತ್ರವನ್ನು ಬಳಸದಿರುವುದರಿಂದ ಸೊಳ್ಳೆ ಮತ್ತು ನೊಣಗಳ ಕಾಟ ಹೆಚ್ಚಾಗಿದೆ. ವಾರ್ಡ್ ತುಂಬಾ ಕಸದ ರಾಶಿ ಬಿದ್ದಿದ್ದರೂ ಕೂಡಾ ನಗರಸಭೆ ಅಧಿಕಾರಿಗಳು, ವಾರ್ಡ್‌ ಸದಸ್ಯರು ತಮ್ಮ ವಾರ್ಡ್‌ಗಳತ್ತ ಸುಳಿದಿಲ್ಲ.

ಸಹಜವಾಗಿ ವಾರ್ಡ್ ನಿವಾಸಿಗಳು ನಗರಸಭೆ ಅಧಿಕಾರಿಗಳು, ವಾರ್ಡ್‌ ಸದಸ್ಯರ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ. ಚರಂಡಿಗಳಲ್ಲಿ ಕಟ್ಟಿಕೊಂಡಿರುವ ಕಸವನ್ನು ಸ್ವಚ್ಛಗೊಳಿಸುವಂತೆ, ಘನ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆ- ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ನಾಮಫಲಕ ಅನಾವರಣ ಮತ್ತು…

7 hours ago

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ: ಮದುವೆ ಫೋಟೋಸ್ ವೈರಲ್

ಫೆಬ್ರವರಿ 26ರ ಗುರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ…

17 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ: ನೂತನ‌ ಜಿಲ್ಲಾಧಿಕಾರಿ ಯಾರು ಗೊತ್ತಾ….?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್‌ ಆದೇಶಿಸಿದ್ದಾರೆ. ಎ.ಬಿ.…

18 hours ago

ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ ಸಂಪನ್ನ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ಶ್ರದ್ಧಾಭಕ್ತಿಯಿಂದ, ವಿಜೃಂಭಣೆಯಿಂದ ನೆರವೇರಿಸಲಾಯಿತು. ಪ್ರತಿವರ್ಷದಂತೆ ಈ…

23 hours ago

ಇಂದು ಇತಿಹಾಸ ಪ್ರಸಿದ್ಧ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ: ಮುಂಜಾನೆಯಿಂದಲೇ ಆರಂಭಗೊಂಡ ವಿಶೇಷ ಪೂಜೆ, ಪುನಸ್ಕಾರ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪ್ರತಿವರ್ಷದಂತೆ ಈ ವರ್ಷವು…

1 day ago

ಉಚಿತ ಯೋಜನೆಗಳ ಘೋಷಣೆಯ ಹಿಂದಿನ ವಾಸ್ತವಗಳು……

ಚುನಾವಣಾ ಹೊಸ್ತಿಲಿನಲ್ಲಿ ಕೆಲವು ರಾಜಕೀಯ ಪಕ್ಷಗಳ ಘೋಷಿಸುವ ಉಚಿತ ಯೋಜನೆಗಳ ಪರ ಮತ್ತು ವಿರೋಧವಾಗಿ ಚರ್ಚೆಗಳನ್ನು ಹುಟ್ಟು ಹಾಕಿದೆ. ಇದನ್ನು…

1 day ago