ಸ್ವಚ್ಛ ನಗರಸಭೆ ಖ್ಯಾತಿಯ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ದೇವರಾಜನಗರ ವಾರ್ಡ್ ಕಸದ ರಾಶಿಗಳಿಂದ ಗಬ್ಬೆದು ನಾರುತ್ತಿದೆ.
ವಾರ್ಡ್ ನಲ್ಲಿರುವ ಅಂಗನವಾಡಿ ಪಕ್ಕದಲ್ಲಿ ಕಸದರಾಶಿ ಇದ್ದು, ಅಂಗನಾಡಿಗೆ ಬರುವ ಮಕ್ಕಳು ಮುಗು ಮುಚ್ಚಿಕೊಂಡು ಶಾಲೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ.
ಕಸದ ರಾಶಿ ಜೊತೆಗೆ ವಿದ್ಯುತ್ ಪರಿವರ್ತಕ ಕೂಡ ಅಂಗನವಾಡಿ ಪಕ್ಕದಲ್ಲೇ ಇದೆ. ಅದರ ಕೆಳಗೆ ಈ ಕಸದ ರಾಶಿ ಇದೆ. ಇದರಿಂದ ವಾರ್ಡ್ ನಿವಾಸಿಗಳು ಜೀವ ಭಯದಲ್ಲಿ ಓಡಾಡುತ್ತಿದ್ದಾರೆ.
ಕಸದ ರಾಶಿಯನ್ನು ಬಹು ದಿನಗಳಿಂದ ತೆರವುಗೊಳಿಸಿಲ್ಲವಾದ್ದರಿಂದ ತ್ಯಾಜ್ಯವು ಕೊಳೆತು ದುರ್ವಾಸನೆ ಬೀರುತ್ತಿದೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ವಾರ್ಡ್ ಸಂಪೂರ್ಣ ಕಸಮಯವಾಗಿದೆ. ನಗರಸಭೆ ಸ್ವಚ್ಛತಾ ಸಿಬ್ಬಂದಿ ಪ್ರತಿದಿನ ಸಮಯಕ್ಕೆ ಸರಿಯಾಗಿ ತಪ್ಪದೆ ಬಂದು ಕಸ ತೆಗದುಕೊಂಡು ಹೋದಲ್ಲಿ ಈ ಸಮಸ್ಯೆಯೇ ಇರುವುದಿಲ್ಲ. ಆದರೆ, ವಾರ್ಡ್ ಸದಸ್ಯರುಗಳು ಈ ಬಗ್ಗೆ ಗಮನ ಹರಿಸದೆ ಇರುವುದರಿಂದ ಕಸದ ಸಮಸ್ಯೆ ಬಿಗಡಾಯಿಸಿದೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೊಳ್ಳೆಗಳ ಕಾಟಕ್ಕೆ ಜನ ಹೈರಾಣು: ನಗರದಲ್ಲಿ ಎರಡು ದಿನದಿಂದ ಮಳೆಯಾಗುತ್ತಿದ್ದು, ಸೊಳ್ಳೆಗಳು ಹೆಚ್ಚಾಗಿವೆ. ಇದರಿಂದ ಸಾರ್ವಜನಿಕರು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸೊಳ್ಳೆ ನಿಯಂತ್ರಣ (ಫಾಗಿಂಗ್) ಯಂತ್ರವನ್ನು ಬಳಸದಿರುವುದರಿಂದ ಸೊಳ್ಳೆ ಮತ್ತು ನೊಣಗಳ ಕಾಟ ಹೆಚ್ಚಾಗಿದೆ. ವಾರ್ಡ್ ತುಂಬಾ ಕಸದ ರಾಶಿ ಬಿದ್ದಿದ್ದರೂ ಕೂಡಾ ನಗರಸಭೆ ಅಧಿಕಾರಿಗಳು, ವಾರ್ಡ್ ಸದಸ್ಯರು ತಮ್ಮ ವಾರ್ಡ್ಗಳತ್ತ ಸುಳಿದಿಲ್ಲ.
ಸಹಜವಾಗಿ ವಾರ್ಡ್ ನಿವಾಸಿಗಳು ನಗರಸಭೆ ಅಧಿಕಾರಿಗಳು, ವಾರ್ಡ್ ಸದಸ್ಯರ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ. ಚರಂಡಿಗಳಲ್ಲಿ ಕಟ್ಟಿಕೊಂಡಿರುವ ಕಸವನ್ನು ಸ್ವಚ್ಛಗೊಳಿಸುವಂತೆ, ಘನ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ಆಗ್ರಹಿಸಿದ್ದಾರೆ.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…