ಅಂಗನವಾಡಿ ಪಕ್ಕದಲ್ಲೇ ಕಸದ ರಾಶಿ: ಗಬ್ಬೆದ್ದು ನಾರುತ್ತಿರುವ ದೇವರಾಜನಗರ: ಕ್ಯಾರೆ ಎನ್ನದ ಜನಪ್ರತಿನಿಧಿಗಳು, ಅಧಿಕಾರಿಗಳು: ರೋಗರುಜಿನ ಭೀತಿಯಲ್ಲಿ ಮಕ್ಕಳು, ವಾರ್ಡ್ ನಿವಾಸಿಗಳು

ಸ್ವಚ್ಛ ನಗರಸಭೆ ಖ್ಯಾತಿಯ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ದೇವರಾಜನಗರ ವಾರ್ಡ್ ಕಸದ ರಾಶಿಗಳಿಂದ ಗಬ್ಬೆದು ನಾರುತ್ತಿದೆ.

ವಾರ್ಡ್ ನಲ್ಲಿರುವ ಅಂಗನವಾಡಿ ಪಕ್ಕದಲ್ಲಿ ಕಸದರಾಶಿ ಇದ್ದು, ಅಂಗನಾಡಿಗೆ ಬರುವ ಮಕ್ಕಳು ಮುಗು ಮುಚ್ಚಿಕೊಂಡು ಶಾಲೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ.

ಕಸದ ರಾಶಿ ಜೊತೆಗೆ ವಿದ್ಯುತ್ ಪರಿವರ್ತಕ ಕೂಡ ಅಂಗನವಾಡಿ ಪಕ್ಕದಲ್ಲೇ ಇದೆ. ಅದರ ಕೆಳಗೆ ಈ ಕಸದ ರಾಶಿ ಇದೆ. ಇದರಿಂದ ವಾರ್ಡ್ ನಿವಾಸಿಗಳು ಜೀವ ಭಯದಲ್ಲಿ ಓಡಾಡುತ್ತಿದ್ದಾರೆ.

ಕಸದ ರಾಶಿಯನ್ನು ಬಹು ದಿನಗಳಿಂದ ತೆರವುಗೊಳಿಸಿಲ್ಲವಾದ್ದರಿಂದ ತ್ಯಾಜ್ಯವು ಕೊಳೆತು ದುರ್ವಾಸನೆ ಬೀರುತ್ತಿದೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಾರ್ಡ್ ಸಂಪೂರ್ಣ ಕಸಮಯವಾಗಿದೆ. ನಗರಸಭೆ ಸ್ವಚ್ಛತಾ ಸಿಬ್ಬಂದಿ ಪ್ರತಿದಿನ ಸಮಯಕ್ಕೆ ಸರಿಯಾಗಿ ತಪ್ಪದೆ ಬಂದು ಕಸ ತೆಗದುಕೊಂಡು ಹೋದಲ್ಲಿ ಈ ಸಮಸ್ಯೆಯೇ ಇರುವುದಿಲ್ಲ. ಆದರೆ, ವಾರ್ಡ್‌ ಸದಸ್ಯರುಗಳು ಈ ಬಗ್ಗೆ ಗಮನ ಹರಿಸದೆ ಇರುವುದರಿಂದ ಕಸದ ಸಮಸ್ಯೆ ಬಿಗಡಾಯಿಸಿದೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೊಳ್ಳೆಗಳ ಕಾಟಕ್ಕೆ ಜನ ಹೈರಾಣು: ನಗರದಲ್ಲಿ ಎರಡು ದಿನದಿಂದ ಮಳೆಯಾಗುತ್ತಿದ್ದು, ಸೊಳ್ಳೆಗಳು ಹೆಚ್ಚಾಗಿವೆ. ಇದರಿಂದ ಸಾರ್ವಜನಿಕರು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸೊಳ್ಳೆ ನಿಯಂತ್ರಣ (ಫಾಗಿಂಗ್‌) ಯಂತ್ರವನ್ನು ಬಳಸದಿರುವುದರಿಂದ ಸೊಳ್ಳೆ ಮತ್ತು ನೊಣಗಳ ಕಾಟ ಹೆಚ್ಚಾಗಿದೆ. ವಾರ್ಡ್ ತುಂಬಾ ಕಸದ ರಾಶಿ ಬಿದ್ದಿದ್ದರೂ ಕೂಡಾ ನಗರಸಭೆ ಅಧಿಕಾರಿಗಳು, ವಾರ್ಡ್‌ ಸದಸ್ಯರು ತಮ್ಮ ವಾರ್ಡ್‌ಗಳತ್ತ ಸುಳಿದಿಲ್ಲ.

ಸಹಜವಾಗಿ ವಾರ್ಡ್ ನಿವಾಸಿಗಳು ನಗರಸಭೆ ಅಧಿಕಾರಿಗಳು, ವಾರ್ಡ್‌ ಸದಸ್ಯರ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ. ಚರಂಡಿಗಳಲ್ಲಿ ಕಟ್ಟಿಕೊಂಡಿರುವ ಕಸವನ್ನು ಸ್ವಚ್ಛಗೊಳಿಸುವಂತೆ, ಘನ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

10 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

11 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

19 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago