ಅಂಗನವಾಡಿ ಪಕ್ಕದಲ್ಲೇ ಕಸದ ರಾಶಿ: ಗಬ್ಬೆದ್ದು ನಾರುತ್ತಿರುವ ದೇವರಾಜನಗರ: ಕ್ಯಾರೆ ಎನ್ನದ ಜನಪ್ರತಿನಿಧಿಗಳು, ಅಧಿಕಾರಿಗಳು: ರೋಗರುಜಿನ ಭೀತಿಯಲ್ಲಿ ಮಕ್ಕಳು, ವಾರ್ಡ್ ನಿವಾಸಿಗಳು

ಸ್ವಚ್ಛ ನಗರಸಭೆ ಖ್ಯಾತಿಯ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ದೇವರಾಜನಗರ ವಾರ್ಡ್ ಕಸದ ರಾಶಿಗಳಿಂದ ಗಬ್ಬೆದು ನಾರುತ್ತಿದೆ.

ವಾರ್ಡ್ ನಲ್ಲಿರುವ ಅಂಗನವಾಡಿ ಪಕ್ಕದಲ್ಲಿ ಕಸದರಾಶಿ ಇದ್ದು, ಅಂಗನಾಡಿಗೆ ಬರುವ ಮಕ್ಕಳು ಮುಗು ಮುಚ್ಚಿಕೊಂಡು ಶಾಲೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ.

ಕಸದ ರಾಶಿ ಜೊತೆಗೆ ವಿದ್ಯುತ್ ಪರಿವರ್ತಕ ಕೂಡ ಅಂಗನವಾಡಿ ಪಕ್ಕದಲ್ಲೇ ಇದೆ. ಅದರ ಕೆಳಗೆ ಈ ಕಸದ ರಾಶಿ ಇದೆ. ಇದರಿಂದ ವಾರ್ಡ್ ನಿವಾಸಿಗಳು ಜೀವ ಭಯದಲ್ಲಿ ಓಡಾಡುತ್ತಿದ್ದಾರೆ.

ಕಸದ ರಾಶಿಯನ್ನು ಬಹು ದಿನಗಳಿಂದ ತೆರವುಗೊಳಿಸಿಲ್ಲವಾದ್ದರಿಂದ ತ್ಯಾಜ್ಯವು ಕೊಳೆತು ದುರ್ವಾಸನೆ ಬೀರುತ್ತಿದೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಾರ್ಡ್ ಸಂಪೂರ್ಣ ಕಸಮಯವಾಗಿದೆ. ನಗರಸಭೆ ಸ್ವಚ್ಛತಾ ಸಿಬ್ಬಂದಿ ಪ್ರತಿದಿನ ಸಮಯಕ್ಕೆ ಸರಿಯಾಗಿ ತಪ್ಪದೆ ಬಂದು ಕಸ ತೆಗದುಕೊಂಡು ಹೋದಲ್ಲಿ ಈ ಸಮಸ್ಯೆಯೇ ಇರುವುದಿಲ್ಲ. ಆದರೆ, ವಾರ್ಡ್‌ ಸದಸ್ಯರುಗಳು ಈ ಬಗ್ಗೆ ಗಮನ ಹರಿಸದೆ ಇರುವುದರಿಂದ ಕಸದ ಸಮಸ್ಯೆ ಬಿಗಡಾಯಿಸಿದೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೊಳ್ಳೆಗಳ ಕಾಟಕ್ಕೆ ಜನ ಹೈರಾಣು: ನಗರದಲ್ಲಿ ಎರಡು ದಿನದಿಂದ ಮಳೆಯಾಗುತ್ತಿದ್ದು, ಸೊಳ್ಳೆಗಳು ಹೆಚ್ಚಾಗಿವೆ. ಇದರಿಂದ ಸಾರ್ವಜನಿಕರು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸೊಳ್ಳೆ ನಿಯಂತ್ರಣ (ಫಾಗಿಂಗ್‌) ಯಂತ್ರವನ್ನು ಬಳಸದಿರುವುದರಿಂದ ಸೊಳ್ಳೆ ಮತ್ತು ನೊಣಗಳ ಕಾಟ ಹೆಚ್ಚಾಗಿದೆ. ವಾರ್ಡ್ ತುಂಬಾ ಕಸದ ರಾಶಿ ಬಿದ್ದಿದ್ದರೂ ಕೂಡಾ ನಗರಸಭೆ ಅಧಿಕಾರಿಗಳು, ವಾರ್ಡ್‌ ಸದಸ್ಯರು ತಮ್ಮ ವಾರ್ಡ್‌ಗಳತ್ತ ಸುಳಿದಿಲ್ಲ.

ಸಹಜವಾಗಿ ವಾರ್ಡ್ ನಿವಾಸಿಗಳು ನಗರಸಭೆ ಅಧಿಕಾರಿಗಳು, ವಾರ್ಡ್‌ ಸದಸ್ಯರ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ. ಚರಂಡಿಗಳಲ್ಲಿ ಕಟ್ಟಿಕೊಂಡಿರುವ ಕಸವನ್ನು ಸ್ವಚ್ಛಗೊಳಿಸುವಂತೆ, ಘನ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

4 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

4 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

15 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

15 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

17 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

20 hours ago