ಅಂಗನವಾಡಿ ಪಕ್ಕದಲ್ಲೇ ಕಸದ ರಾಶಿ: ಗಬ್ಬೆದ್ದು ನಾರುತ್ತಿರುವ ದೇವರಾಜನಗರ: ಕ್ಯಾರೆ ಎನ್ನದ ಜನಪ್ರತಿನಿಧಿಗಳು, ಅಧಿಕಾರಿಗಳು: ರೋಗರುಜಿನ ಭೀತಿಯಲ್ಲಿ ಮಕ್ಕಳು, ವಾರ್ಡ್ ನಿವಾಸಿಗಳು

ಸ್ವಚ್ಛ ನಗರಸಭೆ ಖ್ಯಾತಿಯ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ದೇವರಾಜನಗರ ವಾರ್ಡ್ ಕಸದ ರಾಶಿಗಳಿಂದ ಗಬ್ಬೆದು ನಾರುತ್ತಿದೆ.

ವಾರ್ಡ್ ನಲ್ಲಿರುವ ಅಂಗನವಾಡಿ ಪಕ್ಕದಲ್ಲಿ ಕಸದರಾಶಿ ಇದ್ದು, ಅಂಗನಾಡಿಗೆ ಬರುವ ಮಕ್ಕಳು ಮುಗು ಮುಚ್ಚಿಕೊಂಡು ಶಾಲೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ.

ಕಸದ ರಾಶಿ ಜೊತೆಗೆ ವಿದ್ಯುತ್ ಪರಿವರ್ತಕ ಕೂಡ ಅಂಗನವಾಡಿ ಪಕ್ಕದಲ್ಲೇ ಇದೆ. ಅದರ ಕೆಳಗೆ ಈ ಕಸದ ರಾಶಿ ಇದೆ. ಇದರಿಂದ ವಾರ್ಡ್ ನಿವಾಸಿಗಳು ಜೀವ ಭಯದಲ್ಲಿ ಓಡಾಡುತ್ತಿದ್ದಾರೆ.

ಕಸದ ರಾಶಿಯನ್ನು ಬಹು ದಿನಗಳಿಂದ ತೆರವುಗೊಳಿಸಿಲ್ಲವಾದ್ದರಿಂದ ತ್ಯಾಜ್ಯವು ಕೊಳೆತು ದುರ್ವಾಸನೆ ಬೀರುತ್ತಿದೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಾರ್ಡ್ ಸಂಪೂರ್ಣ ಕಸಮಯವಾಗಿದೆ. ನಗರಸಭೆ ಸ್ವಚ್ಛತಾ ಸಿಬ್ಬಂದಿ ಪ್ರತಿದಿನ ಸಮಯಕ್ಕೆ ಸರಿಯಾಗಿ ತಪ್ಪದೆ ಬಂದು ಕಸ ತೆಗದುಕೊಂಡು ಹೋದಲ್ಲಿ ಈ ಸಮಸ್ಯೆಯೇ ಇರುವುದಿಲ್ಲ. ಆದರೆ, ವಾರ್ಡ್‌ ಸದಸ್ಯರುಗಳು ಈ ಬಗ್ಗೆ ಗಮನ ಹರಿಸದೆ ಇರುವುದರಿಂದ ಕಸದ ಸಮಸ್ಯೆ ಬಿಗಡಾಯಿಸಿದೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೊಳ್ಳೆಗಳ ಕಾಟಕ್ಕೆ ಜನ ಹೈರಾಣು: ನಗರದಲ್ಲಿ ಎರಡು ದಿನದಿಂದ ಮಳೆಯಾಗುತ್ತಿದ್ದು, ಸೊಳ್ಳೆಗಳು ಹೆಚ್ಚಾಗಿವೆ. ಇದರಿಂದ ಸಾರ್ವಜನಿಕರು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸೊಳ್ಳೆ ನಿಯಂತ್ರಣ (ಫಾಗಿಂಗ್‌) ಯಂತ್ರವನ್ನು ಬಳಸದಿರುವುದರಿಂದ ಸೊಳ್ಳೆ ಮತ್ತು ನೊಣಗಳ ಕಾಟ ಹೆಚ್ಚಾಗಿದೆ. ವಾರ್ಡ್ ತುಂಬಾ ಕಸದ ರಾಶಿ ಬಿದ್ದಿದ್ದರೂ ಕೂಡಾ ನಗರಸಭೆ ಅಧಿಕಾರಿಗಳು, ವಾರ್ಡ್‌ ಸದಸ್ಯರು ತಮ್ಮ ವಾರ್ಡ್‌ಗಳತ್ತ ಸುಳಿದಿಲ್ಲ.

ಸಹಜವಾಗಿ ವಾರ್ಡ್ ನಿವಾಸಿಗಳು ನಗರಸಭೆ ಅಧಿಕಾರಿಗಳು, ವಾರ್ಡ್‌ ಸದಸ್ಯರ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ. ಚರಂಡಿಗಳಲ್ಲಿ ಕಟ್ಟಿಕೊಂಡಿರುವ ಕಸವನ್ನು ಸ್ವಚ್ಛಗೊಳಿಸುವಂತೆ, ಘನ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ಆಗ್ರಹಿಸಿದ್ದಾರೆ.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

2 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

3 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

4 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

8 hours ago