ಸ್ವಚ್ಛ ನಗರಸಭೆ ಖ್ಯಾತಿಯ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ದೇವರಾಜನಗರ ವಾರ್ಡ್ ಕಸದ ರಾಶಿಗಳಿಂದ ಗಬ್ಬೆದು ನಾರುತ್ತಿದೆ.
ವಾರ್ಡ್ ನಲ್ಲಿರುವ ಅಂಗನವಾಡಿ ಪಕ್ಕದಲ್ಲಿ ಕಸದರಾಶಿ ಇದ್ದು, ಅಂಗನಾಡಿಗೆ ಬರುವ ಮಕ್ಕಳು ಮುಗು ಮುಚ್ಚಿಕೊಂಡು ಶಾಲೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ.
ಕಸದ ರಾಶಿ ಜೊತೆಗೆ ವಿದ್ಯುತ್ ಪರಿವರ್ತಕ ಕೂಡ ಅಂಗನವಾಡಿ ಪಕ್ಕದಲ್ಲೇ ಇದೆ. ಅದರ ಕೆಳಗೆ ಈ ಕಸದ ರಾಶಿ ಇದೆ. ಇದರಿಂದ ವಾರ್ಡ್ ನಿವಾಸಿಗಳು ಜೀವ ಭಯದಲ್ಲಿ ಓಡಾಡುತ್ತಿದ್ದಾರೆ.
ಕಸದ ರಾಶಿಯನ್ನು ಬಹು ದಿನಗಳಿಂದ ತೆರವುಗೊಳಿಸಿಲ್ಲವಾದ್ದರಿಂದ ತ್ಯಾಜ್ಯವು ಕೊಳೆತು ದುರ್ವಾಸನೆ ಬೀರುತ್ತಿದೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ವಾರ್ಡ್ ಸಂಪೂರ್ಣ ಕಸಮಯವಾಗಿದೆ. ನಗರಸಭೆ ಸ್ವಚ್ಛತಾ ಸಿಬ್ಬಂದಿ ಪ್ರತಿದಿನ ಸಮಯಕ್ಕೆ ಸರಿಯಾಗಿ ತಪ್ಪದೆ ಬಂದು ಕಸ ತೆಗದುಕೊಂಡು ಹೋದಲ್ಲಿ ಈ ಸಮಸ್ಯೆಯೇ ಇರುವುದಿಲ್ಲ. ಆದರೆ, ವಾರ್ಡ್ ಸದಸ್ಯರುಗಳು ಈ ಬಗ್ಗೆ ಗಮನ ಹರಿಸದೆ ಇರುವುದರಿಂದ ಕಸದ ಸಮಸ್ಯೆ ಬಿಗಡಾಯಿಸಿದೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೊಳ್ಳೆಗಳ ಕಾಟಕ್ಕೆ ಜನ ಹೈರಾಣು: ನಗರದಲ್ಲಿ ಎರಡು ದಿನದಿಂದ ಮಳೆಯಾಗುತ್ತಿದ್ದು, ಸೊಳ್ಳೆಗಳು ಹೆಚ್ಚಾಗಿವೆ. ಇದರಿಂದ ಸಾರ್ವಜನಿಕರು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸೊಳ್ಳೆ ನಿಯಂತ್ರಣ (ಫಾಗಿಂಗ್) ಯಂತ್ರವನ್ನು ಬಳಸದಿರುವುದರಿಂದ ಸೊಳ್ಳೆ ಮತ್ತು ನೊಣಗಳ ಕಾಟ ಹೆಚ್ಚಾಗಿದೆ. ವಾರ್ಡ್ ತುಂಬಾ ಕಸದ ರಾಶಿ ಬಿದ್ದಿದ್ದರೂ ಕೂಡಾ ನಗರಸಭೆ ಅಧಿಕಾರಿಗಳು, ವಾರ್ಡ್ ಸದಸ್ಯರು ತಮ್ಮ ವಾರ್ಡ್ಗಳತ್ತ ಸುಳಿದಿಲ್ಲ.
ಸಹಜವಾಗಿ ವಾರ್ಡ್ ನಿವಾಸಿಗಳು ನಗರಸಭೆ ಅಧಿಕಾರಿಗಳು, ವಾರ್ಡ್ ಸದಸ್ಯರ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ. ಚರಂಡಿಗಳಲ್ಲಿ ಕಟ್ಟಿಕೊಂಡಿರುವ ಕಸವನ್ನು ಸ್ವಚ್ಛಗೊಳಿಸುವಂತೆ, ಘನ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ಆಗ್ರಹಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…