ಅಂಗನವಾಡಿ ಪಕ್ಕದಲ್ಲೇ ಕಸದ ರಾಶಿ: ಗಬ್ಬೆದ್ದು ನಾರುತ್ತಿರುವ ದೇವರಾಜನಗರ: ಕ್ಯಾರೆ ಎನ್ನದ ಜನಪ್ರತಿನಿಧಿಗಳು, ಅಧಿಕಾರಿಗಳು: ರೋಗರುಜಿನ ಭೀತಿಯಲ್ಲಿ ಮಕ್ಕಳು, ವಾರ್ಡ್ ನಿವಾಸಿಗಳು

ಸ್ವಚ್ಛ ನಗರಸಭೆ ಖ್ಯಾತಿಯ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ದೇವರಾಜನಗರ ವಾರ್ಡ್ ಕಸದ ರಾಶಿಗಳಿಂದ ಗಬ್ಬೆದು ನಾರುತ್ತಿದೆ.

ವಾರ್ಡ್ ನಲ್ಲಿರುವ ಅಂಗನವಾಡಿ ಪಕ್ಕದಲ್ಲಿ ಕಸದರಾಶಿ ಇದ್ದು, ಅಂಗನಾಡಿಗೆ ಬರುವ ಮಕ್ಕಳು ಮುಗು ಮುಚ್ಚಿಕೊಂಡು ಶಾಲೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ.

ಕಸದ ರಾಶಿ ಜೊತೆಗೆ ವಿದ್ಯುತ್ ಪರಿವರ್ತಕ ಕೂಡ ಅಂಗನವಾಡಿ ಪಕ್ಕದಲ್ಲೇ ಇದೆ. ಅದರ ಕೆಳಗೆ ಈ ಕಸದ ರಾಶಿ ಇದೆ. ಇದರಿಂದ ವಾರ್ಡ್ ನಿವಾಸಿಗಳು ಜೀವ ಭಯದಲ್ಲಿ ಓಡಾಡುತ್ತಿದ್ದಾರೆ.

ಕಸದ ರಾಶಿಯನ್ನು ಬಹು ದಿನಗಳಿಂದ ತೆರವುಗೊಳಿಸಿಲ್ಲವಾದ್ದರಿಂದ ತ್ಯಾಜ್ಯವು ಕೊಳೆತು ದುರ್ವಾಸನೆ ಬೀರುತ್ತಿದೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಾರ್ಡ್ ಸಂಪೂರ್ಣ ಕಸಮಯವಾಗಿದೆ. ನಗರಸಭೆ ಸ್ವಚ್ಛತಾ ಸಿಬ್ಬಂದಿ ಪ್ರತಿದಿನ ಸಮಯಕ್ಕೆ ಸರಿಯಾಗಿ ತಪ್ಪದೆ ಬಂದು ಕಸ ತೆಗದುಕೊಂಡು ಹೋದಲ್ಲಿ ಈ ಸಮಸ್ಯೆಯೇ ಇರುವುದಿಲ್ಲ. ಆದರೆ, ವಾರ್ಡ್‌ ಸದಸ್ಯರುಗಳು ಈ ಬಗ್ಗೆ ಗಮನ ಹರಿಸದೆ ಇರುವುದರಿಂದ ಕಸದ ಸಮಸ್ಯೆ ಬಿಗಡಾಯಿಸಿದೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೊಳ್ಳೆಗಳ ಕಾಟಕ್ಕೆ ಜನ ಹೈರಾಣು: ನಗರದಲ್ಲಿ ಎರಡು ದಿನದಿಂದ ಮಳೆಯಾಗುತ್ತಿದ್ದು, ಸೊಳ್ಳೆಗಳು ಹೆಚ್ಚಾಗಿವೆ. ಇದರಿಂದ ಸಾರ್ವಜನಿಕರು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸೊಳ್ಳೆ ನಿಯಂತ್ರಣ (ಫಾಗಿಂಗ್‌) ಯಂತ್ರವನ್ನು ಬಳಸದಿರುವುದರಿಂದ ಸೊಳ್ಳೆ ಮತ್ತು ನೊಣಗಳ ಕಾಟ ಹೆಚ್ಚಾಗಿದೆ. ವಾರ್ಡ್ ತುಂಬಾ ಕಸದ ರಾಶಿ ಬಿದ್ದಿದ್ದರೂ ಕೂಡಾ ನಗರಸಭೆ ಅಧಿಕಾರಿಗಳು, ವಾರ್ಡ್‌ ಸದಸ್ಯರು ತಮ್ಮ ವಾರ್ಡ್‌ಗಳತ್ತ ಸುಳಿದಿಲ್ಲ.

ಸಹಜವಾಗಿ ವಾರ್ಡ್ ನಿವಾಸಿಗಳು ನಗರಸಭೆ ಅಧಿಕಾರಿಗಳು, ವಾರ್ಡ್‌ ಸದಸ್ಯರ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ. ಚರಂಡಿಗಳಲ್ಲಿ ಕಟ್ಟಿಕೊಂಡಿರುವ ಕಸವನ್ನು ಸ್ವಚ್ಛಗೊಳಿಸುವಂತೆ, ಘನ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

11 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

12 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

14 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

15 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

20 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

23 hours ago