ಸ್ವಚ್ಛ ನಗರಸಭೆ ಖ್ಯಾತಿಯ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ದೇವರಾಜನಗರ ವಾರ್ಡ್ ಕಸದ ರಾಶಿಗಳಿಂದ ಗಬ್ಬೆದು ನಾರುತ್ತಿದೆ.
ವಾರ್ಡ್ ನಲ್ಲಿರುವ ಅಂಗನವಾಡಿ ಪಕ್ಕದಲ್ಲಿ ಕಸದರಾಶಿ ಇದ್ದು, ಅಂಗನಾಡಿಗೆ ಬರುವ ಮಕ್ಕಳು ಮುಗು ಮುಚ್ಚಿಕೊಂಡು ಶಾಲೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ.
ಕಸದ ರಾಶಿ ಜೊತೆಗೆ ವಿದ್ಯುತ್ ಪರಿವರ್ತಕ ಕೂಡ ಅಂಗನವಾಡಿ ಪಕ್ಕದಲ್ಲೇ ಇದೆ. ಅದರ ಕೆಳಗೆ ಈ ಕಸದ ರಾಶಿ ಇದೆ. ಇದರಿಂದ ವಾರ್ಡ್ ನಿವಾಸಿಗಳು ಜೀವ ಭಯದಲ್ಲಿ ಓಡಾಡುತ್ತಿದ್ದಾರೆ.
ಕಸದ ರಾಶಿಯನ್ನು ಬಹು ದಿನಗಳಿಂದ ತೆರವುಗೊಳಿಸಿಲ್ಲವಾದ್ದರಿಂದ ತ್ಯಾಜ್ಯವು ಕೊಳೆತು ದುರ್ವಾಸನೆ ಬೀರುತ್ತಿದೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ವಾರ್ಡ್ ಸಂಪೂರ್ಣ ಕಸಮಯವಾಗಿದೆ. ನಗರಸಭೆ ಸ್ವಚ್ಛತಾ ಸಿಬ್ಬಂದಿ ಪ್ರತಿದಿನ ಸಮಯಕ್ಕೆ ಸರಿಯಾಗಿ ತಪ್ಪದೆ ಬಂದು ಕಸ ತೆಗದುಕೊಂಡು ಹೋದಲ್ಲಿ ಈ ಸಮಸ್ಯೆಯೇ ಇರುವುದಿಲ್ಲ. ಆದರೆ, ವಾರ್ಡ್ ಸದಸ್ಯರುಗಳು ಈ ಬಗ್ಗೆ ಗಮನ ಹರಿಸದೆ ಇರುವುದರಿಂದ ಕಸದ ಸಮಸ್ಯೆ ಬಿಗಡಾಯಿಸಿದೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೊಳ್ಳೆಗಳ ಕಾಟಕ್ಕೆ ಜನ ಹೈರಾಣು: ನಗರದಲ್ಲಿ ಎರಡು ದಿನದಿಂದ ಮಳೆಯಾಗುತ್ತಿದ್ದು, ಸೊಳ್ಳೆಗಳು ಹೆಚ್ಚಾಗಿವೆ. ಇದರಿಂದ ಸಾರ್ವಜನಿಕರು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸೊಳ್ಳೆ ನಿಯಂತ್ರಣ (ಫಾಗಿಂಗ್) ಯಂತ್ರವನ್ನು ಬಳಸದಿರುವುದರಿಂದ ಸೊಳ್ಳೆ ಮತ್ತು ನೊಣಗಳ ಕಾಟ ಹೆಚ್ಚಾಗಿದೆ. ವಾರ್ಡ್ ತುಂಬಾ ಕಸದ ರಾಶಿ ಬಿದ್ದಿದ್ದರೂ ಕೂಡಾ ನಗರಸಭೆ ಅಧಿಕಾರಿಗಳು, ವಾರ್ಡ್ ಸದಸ್ಯರು ತಮ್ಮ ವಾರ್ಡ್ಗಳತ್ತ ಸುಳಿದಿಲ್ಲ.
ಸಹಜವಾಗಿ ವಾರ್ಡ್ ನಿವಾಸಿಗಳು ನಗರಸಭೆ ಅಧಿಕಾರಿಗಳು, ವಾರ್ಡ್ ಸದಸ್ಯರ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ. ಚರಂಡಿಗಳಲ್ಲಿ ಕಟ್ಟಿಕೊಂಡಿರುವ ಕಸವನ್ನು ಸ್ವಚ್ಛಗೊಳಿಸುವಂತೆ, ಘನ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ಆಗ್ರಹಿಸಿದ್ದಾರೆ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…