ಕೋಲಾರ: ಸಮಾಜದಲ್ಲಿ ಅಂಗವಿಕಲರಿಗೆ ಹಾಗೂ ವಿಕಲಚೇತನರಿಗೆ ಎಪಿಡಿ ಬೆಂಗಳೂರು ಮತ್ತು ಫೆವಾರ್ಡ್ ಕೋಲಾರ ಜಿಲ್ಲಾ ಒಕ್ಕೂಟದಿಂದ ಅವಶ್ಯಕ ಮಾಹಿತಿ ಮತ್ತು ಸೌಲಭ್ಯಗಳನ್ನು ಒದಗಿಸಲು ಸಿದ್ದವಿದ್ದು ಇದರ ಸದುಪಯೋಗವನ್ನು ಪ್ರತಿಯೊಬ್ಬ ರಿಗೂ ಸಿಗುವಂತಾಗಬೇಕು ಎಂದು ಎಪಿಡಿ ಸಂಸ್ಥೆಯ ರಾಜ್ಯದ ವಲಯ ವ್ಯವಸ್ಥಾಪಕ ಶ್ರೀನಿವಾಸ್ ತಿಳಿಸಿದರು.
ನಗರದ ವಿದ್ಯಾಲಯ ಸಂಹೆ ಸಭಾಂಗಣದಲ್ಲಿ ಎಪಿಡಿ ಸಂಸ್ಥೆ ಬೆಂಗಳೂರು ಹಾಗೂ ಫೆವಾರ್ಡ್ ಜಿಲ್ಲಾ ಒಕ್ಕೂಟದಿಂದ ಶನಿವಾರ ಅಂಗವಿಕಲರ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರಿಗೆ ಒಂದು ದಿನದ ಕಾರ್ಯಾಗಾರದಲ್ಲಿ ಮಾಹಿತಿ ನೀಡಿ ಮಾತನಾಡಿದ ಅವರು ಈ ಸಂಸ್ಥೆಗಳ ಜೊತೆಯಲ್ಲಿ ಸರ್ಕಾರಿ, ಅರೆಸರ್ಕಾರಿ ಹಾಗೂ ಸಿಎಸ್ಆರ್ ಅನುದಾನದ ಮೂಲಕ ಅಂಗವಿಕಲರಿಗೆ ಹಾಗೂ ವಿಕಲಚೇತನರಿಗೆ ಸೌಲಭ್ಯಗಳನ್ನು ಒದಗಿಸಲು ಸಂಬಂಧಿಸಿದವರನ್ನು ಮುಂದಿನ ದಿನಗಳಲ್ಲಿ ಒತ್ತಾಯಿಸಬೇಕಾಗುತ್ತದೆ ಎಂದು ಕಾರ್ಯಾಗಾರದಲ್ಲಿ ಚರ್ಚೆ ನಡೆಸಿದರು.
ಅಂಗವಿಕಲರು ಮತ್ತು ವಿಕಲಚೇತನರಿಗೆ ಅನುಕೂಲವಾಗುವಂತೆ ಹೋಟೆಲ್, ಶಾಲಾ ಕಾಲೇಜುಗಳು, ರೈಲ್ವೆ, ಬಸ್ ನಿಲ್ದಾಣ, ಆಸ್ಪತ್ರೆ, ಪಾರ್ಕ್, ಶೌಚಾಲಯ ಸೇರಿದಂತೆ ಇತರೆ ಕಡೆಗಳಲ್ಲಿ ಅವರಿಗೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಸಮಾಜದ ಭಾಗವಾಗಿ ಗುರುಸಿಕೊಳ್ಳುವ ಮೂಲಕ ಮುಖ್ಯವಾಹಿನಿಗೆ ಬರಲು ಬೇಕಾದ ಸೌಲಭ್ಯಗಳನ್ನು ನೀಡುವಂತೆ ಒತ್ತಾಯಿಸಬೇಕು ಇವರ ಮಧ್ಯೆ ಕೆಲಸ ಮಾಡಲು ಸ್ವಯಂ ಸೇವಕರನ್ನು ಗುರುತಿಸಲು ಚರ್ಚಿಸಲಾಯಿತು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…