Categories: ಕೋಲಾರ

ಅಂಗವಿಕಲರಿಗೆ ಸರ್ಕಾರ ಮತ್ತು ಸ್ವಯಂ ಸೇವಾ ಸಂಘಗಳಿಂದ ಸಿಗುವ ಸೌಲಭ್ಯಗಳು ಸದುಪಯೋಗವಾಗಬೇಕು-ಶ್ರೀನಿವಾಸ್

ಕೋಲಾರ: ಸಮಾಜದಲ್ಲಿ ಅಂಗವಿಕಲರಿಗೆ ಹಾಗೂ ವಿಕಲಚೇತನರಿಗೆ ಎಪಿಡಿ ಬೆಂಗಳೂರು ಮತ್ತು ಫೆವಾರ್ಡ್ ಕೋಲಾರ ಜಿಲ್ಲಾ ಒಕ್ಕೂಟದಿಂದ ಅವಶ್ಯಕ ಮಾಹಿತಿ ಮತ್ತು ಸೌಲಭ್ಯಗಳನ್ನು ಒದಗಿಸಲು ಸಿದ್ದವಿದ್ದು ಇದರ ಸದುಪಯೋಗವನ್ನು ಪ್ರತಿಯೊಬ್ಬ ರಿಗೂ ಸಿಗುವಂತಾಗಬೇಕು ಎಂದು ಎಪಿಡಿ ಸಂಸ್ಥೆಯ ರಾಜ್ಯದ ವಲಯ ವ್ಯವಸ್ಥಾಪಕ ಶ್ರೀನಿವಾಸ್ ತಿಳಿಸಿದರು.

ನಗರದ ವಿದ್ಯಾಲಯ ಸಂಹೆ ಸಭಾಂಗಣದಲ್ಲಿ ಎಪಿಡಿ ಸಂಸ್ಥೆ ಬೆಂಗಳೂರು ಹಾಗೂ ಫೆವಾರ್ಡ್ ಜಿಲ್ಲಾ ಒಕ್ಕೂಟದಿಂದ ಶನಿವಾರ ಅಂಗವಿಕಲರ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರಿಗೆ ಒಂದು ದಿನದ ಕಾರ್ಯಾಗಾರದಲ್ಲಿ ಮಾಹಿತಿ‌ ನೀಡಿ ಮಾತನಾಡಿದ ಅವರು ಈ ಸಂಸ್ಥೆಗಳ ಜೊತೆಯಲ್ಲಿ ಸರ್ಕಾರಿ, ಅರೆಸರ್ಕಾರಿ ಹಾಗೂ ಸಿಎಸ್ಆರ್ ಅನುದಾನದ ಮೂಲಕ ಅಂಗವಿಕಲರಿಗೆ ಹಾಗೂ ವಿಕಲಚೇತನರಿಗೆ ಸೌಲಭ್ಯಗಳನ್ನು ಒದಗಿಸಲು ಸಂಬಂಧಿಸಿದವರನ್ನು ಮುಂದಿನ ದಿನಗಳಲ್ಲಿ ಒತ್ತಾಯಿಸಬೇಕಾಗುತ್ತದೆ ಎಂದು ಕಾರ್ಯಾಗಾರದಲ್ಲಿ ಚರ್ಚೆ ನಡೆಸಿದರು.

ಅಂಗವಿಕಲರು ಮತ್ತು ವಿಕಲಚೇತನರಿಗೆ ಅನುಕೂಲವಾಗುವಂತೆ ಹೋಟೆಲ್, ಶಾಲಾ ಕಾಲೇಜುಗಳು, ರೈಲ್ವೆ, ಬಸ್ ನಿಲ್ದಾಣ, ಆಸ್ಪತ್ರೆ, ಪಾರ್ಕ್, ಶೌಚಾಲಯ ಸೇರಿದಂತೆ ಇತರೆ ಕಡೆಗಳಲ್ಲಿ ಅವರಿಗೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಸಮಾಜದ ಭಾಗವಾಗಿ ಗುರುಸಿಕೊಳ್ಳುವ ಮೂಲಕ ಮುಖ್ಯವಾಹಿನಿಗೆ ಬರಲು ಬೇಕಾದ ಸೌಲಭ್ಯಗಳನ್ನು ನೀಡುವಂತೆ ಒತ್ತಾಯಿಸಬೇಕು ಇವರ ಮಧ್ಯೆ ಕೆಲಸ ಮಾಡಲು ಸ್ವಯಂ ಸೇವಕರನ್ನು ಗುರುತಿಸಲು ಚರ್ಚಿಸಲಾಯಿತು.

ಕಾರ್ಯಾಗಾರದಲ್ಲಿ ಫೆವಾರ್ಡ್ ಕರ್ನಾಟಕ ರಾಜ್ಯ ಸಂಪನ್ಮೂಲಗಳ ಮ್ಯಾಫಿಂಗ್ ಸಂಯೋಜಕರಾದ ರಿನೀಟಾ, ಜಿಲ್ಲಾ ಒಕ್ಕೂಟದ ಅಧ್ಯಕ್ಷ ಫೋಕಸ್ ಅ‌.ನಾ ಹರೀಶ್, ಕಾರ್ಯದರ್ಶಿ ರತ್ನ ನಾಗರಾಜ್, ಎಪಿಡಿ ಸಂಸ್ಥೆಯ ಜಿಲ್ಲಾ ಸಂಯೋಜಕಿ ಗಿರಿಜಾ, ವಿವಿಧ ಸೇವಾ ಸಂಸ್ಥೆಗಳ ಮುಖ್ಯಸ್ಥರಾದ ಮಾಲೂರು ಸುಬ್ರಮಣಿ ಮುಳಬಾಗಿಲು ಕೃಷ್ಣಮೂರ್ತಿ, ಮಂಜುಳಾರೆಡ್ಡಿ, ಮುನಿರಾಜು, ಮಾಲೂರು ಸುಬ್ರಮಣಿ, ಕೆಜಿಎಫ್ ಸುಬ್ರಮಣಿ ಮುಂತಾದವರು ಇದ್ದರು

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

5 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

5 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

8 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

9 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

13 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

17 hours ago