ಕೋಲಾರ: ಸಮಾಜದಲ್ಲಿ ಅಂಗವಿಕಲರಿಗೆ ಹಾಗೂ ವಿಕಲಚೇತನರಿಗೆ ಎಪಿಡಿ ಬೆಂಗಳೂರು ಮತ್ತು ಫೆವಾರ್ಡ್ ಕೋಲಾರ ಜಿಲ್ಲಾ ಒಕ್ಕೂಟದಿಂದ ಅವಶ್ಯಕ ಮಾಹಿತಿ ಮತ್ತು ಸೌಲಭ್ಯಗಳನ್ನು ಒದಗಿಸಲು ಸಿದ್ದವಿದ್ದು ಇದರ ಸದುಪಯೋಗವನ್ನು ಪ್ರತಿಯೊಬ್ಬ ರಿಗೂ ಸಿಗುವಂತಾಗಬೇಕು ಎಂದು ಎಪಿಡಿ ಸಂಸ್ಥೆಯ ರಾಜ್ಯದ ವಲಯ ವ್ಯವಸ್ಥಾಪಕ ಶ್ರೀನಿವಾಸ್ ತಿಳಿಸಿದರು.
ನಗರದ ವಿದ್ಯಾಲಯ ಸಂಹೆ ಸಭಾಂಗಣದಲ್ಲಿ ಎಪಿಡಿ ಸಂಸ್ಥೆ ಬೆಂಗಳೂರು ಹಾಗೂ ಫೆವಾರ್ಡ್ ಜಿಲ್ಲಾ ಒಕ್ಕೂಟದಿಂದ ಶನಿವಾರ ಅಂಗವಿಕಲರ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರಿಗೆ ಒಂದು ದಿನದ ಕಾರ್ಯಾಗಾರದಲ್ಲಿ ಮಾಹಿತಿ ನೀಡಿ ಮಾತನಾಡಿದ ಅವರು ಈ ಸಂಸ್ಥೆಗಳ ಜೊತೆಯಲ್ಲಿ ಸರ್ಕಾರಿ, ಅರೆಸರ್ಕಾರಿ ಹಾಗೂ ಸಿಎಸ್ಆರ್ ಅನುದಾನದ ಮೂಲಕ ಅಂಗವಿಕಲರಿಗೆ ಹಾಗೂ ವಿಕಲಚೇತನರಿಗೆ ಸೌಲಭ್ಯಗಳನ್ನು ಒದಗಿಸಲು ಸಂಬಂಧಿಸಿದವರನ್ನು ಮುಂದಿನ ದಿನಗಳಲ್ಲಿ ಒತ್ತಾಯಿಸಬೇಕಾಗುತ್ತದೆ ಎಂದು ಕಾರ್ಯಾಗಾರದಲ್ಲಿ ಚರ್ಚೆ ನಡೆಸಿದರು.
ಅಂಗವಿಕಲರು ಮತ್ತು ವಿಕಲಚೇತನರಿಗೆ ಅನುಕೂಲವಾಗುವಂತೆ ಹೋಟೆಲ್, ಶಾಲಾ ಕಾಲೇಜುಗಳು, ರೈಲ್ವೆ, ಬಸ್ ನಿಲ್ದಾಣ, ಆಸ್ಪತ್ರೆ, ಪಾರ್ಕ್, ಶೌಚಾಲಯ ಸೇರಿದಂತೆ ಇತರೆ ಕಡೆಗಳಲ್ಲಿ ಅವರಿಗೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಸಮಾಜದ ಭಾಗವಾಗಿ ಗುರುಸಿಕೊಳ್ಳುವ ಮೂಲಕ ಮುಖ್ಯವಾಹಿನಿಗೆ ಬರಲು ಬೇಕಾದ ಸೌಲಭ್ಯಗಳನ್ನು ನೀಡುವಂತೆ ಒತ್ತಾಯಿಸಬೇಕು ಇವರ ಮಧ್ಯೆ ಕೆಲಸ ಮಾಡಲು ಸ್ವಯಂ ಸೇವಕರನ್ನು ಗುರುತಿಸಲು ಚರ್ಚಿಸಲಾಯಿತು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…