ಕೋಲಾರ: ಸಮಾಜದಲ್ಲಿ ಅಂಗವಿಕಲರಿಗೆ ಹಾಗೂ ವಿಕಲಚೇತನರಿಗೆ ಎಪಿಡಿ ಬೆಂಗಳೂರು ಮತ್ತು ಫೆವಾರ್ಡ್ ಕೋಲಾರ ಜಿಲ್ಲಾ ಒಕ್ಕೂಟದಿಂದ ಅವಶ್ಯಕ ಮಾಹಿತಿ ಮತ್ತು ಸೌಲಭ್ಯಗಳನ್ನು ಒದಗಿಸಲು ಸಿದ್ದವಿದ್ದು ಇದರ ಸದುಪಯೋಗವನ್ನು ಪ್ರತಿಯೊಬ್ಬ ರಿಗೂ ಸಿಗುವಂತಾಗಬೇಕು ಎಂದು ಎಪಿಡಿ ಸಂಸ್ಥೆಯ ರಾಜ್ಯದ ವಲಯ ವ್ಯವಸ್ಥಾಪಕ ಶ್ರೀನಿವಾಸ್ ತಿಳಿಸಿದರು.
ನಗರದ ವಿದ್ಯಾಲಯ ಸಂಹೆ ಸಭಾಂಗಣದಲ್ಲಿ ಎಪಿಡಿ ಸಂಸ್ಥೆ ಬೆಂಗಳೂರು ಹಾಗೂ ಫೆವಾರ್ಡ್ ಜಿಲ್ಲಾ ಒಕ್ಕೂಟದಿಂದ ಶನಿವಾರ ಅಂಗವಿಕಲರ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರಿಗೆ ಒಂದು ದಿನದ ಕಾರ್ಯಾಗಾರದಲ್ಲಿ ಮಾಹಿತಿ ನೀಡಿ ಮಾತನಾಡಿದ ಅವರು ಈ ಸಂಸ್ಥೆಗಳ ಜೊತೆಯಲ್ಲಿ ಸರ್ಕಾರಿ, ಅರೆಸರ್ಕಾರಿ ಹಾಗೂ ಸಿಎಸ್ಆರ್ ಅನುದಾನದ ಮೂಲಕ ಅಂಗವಿಕಲರಿಗೆ ಹಾಗೂ ವಿಕಲಚೇತನರಿಗೆ ಸೌಲಭ್ಯಗಳನ್ನು ಒದಗಿಸಲು ಸಂಬಂಧಿಸಿದವರನ್ನು ಮುಂದಿನ ದಿನಗಳಲ್ಲಿ ಒತ್ತಾಯಿಸಬೇಕಾಗುತ್ತದೆ ಎಂದು ಕಾರ್ಯಾಗಾರದಲ್ಲಿ ಚರ್ಚೆ ನಡೆಸಿದರು.
ಅಂಗವಿಕಲರು ಮತ್ತು ವಿಕಲಚೇತನರಿಗೆ ಅನುಕೂಲವಾಗುವಂತೆ ಹೋಟೆಲ್, ಶಾಲಾ ಕಾಲೇಜುಗಳು, ರೈಲ್ವೆ, ಬಸ್ ನಿಲ್ದಾಣ, ಆಸ್ಪತ್ರೆ, ಪಾರ್ಕ್, ಶೌಚಾಲಯ ಸೇರಿದಂತೆ ಇತರೆ ಕಡೆಗಳಲ್ಲಿ ಅವರಿಗೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಸಮಾಜದ ಭಾಗವಾಗಿ ಗುರುಸಿಕೊಳ್ಳುವ ಮೂಲಕ ಮುಖ್ಯವಾಹಿನಿಗೆ ಬರಲು ಬೇಕಾದ ಸೌಲಭ್ಯಗಳನ್ನು ನೀಡುವಂತೆ ಒತ್ತಾಯಿಸಬೇಕು ಇವರ ಮಧ್ಯೆ ಕೆಲಸ ಮಾಡಲು ಸ್ವಯಂ ಸೇವಕರನ್ನು ಗುರುತಿಸಲು ಚರ್ಚಿಸಲಾಯಿತು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…