Categories: ಕೋಲಾರ

ಅಂಗವಿಕಲರಿಗೆ ಸರ್ಕಾರ ಮತ್ತು ಸ್ವಯಂ ಸೇವಾ ಸಂಘಗಳಿಂದ ಸಿಗುವ ಸೌಲಭ್ಯಗಳು ಸದುಪಯೋಗವಾಗಬೇಕು-ಶ್ರೀನಿವಾಸ್

ಕೋಲಾರ: ಸಮಾಜದಲ್ಲಿ ಅಂಗವಿಕಲರಿಗೆ ಹಾಗೂ ವಿಕಲಚೇತನರಿಗೆ ಎಪಿಡಿ ಬೆಂಗಳೂರು ಮತ್ತು ಫೆವಾರ್ಡ್ ಕೋಲಾರ ಜಿಲ್ಲಾ ಒಕ್ಕೂಟದಿಂದ ಅವಶ್ಯಕ ಮಾಹಿತಿ ಮತ್ತು ಸೌಲಭ್ಯಗಳನ್ನು ಒದಗಿಸಲು ಸಿದ್ದವಿದ್ದು ಇದರ ಸದುಪಯೋಗವನ್ನು ಪ್ರತಿಯೊಬ್ಬ ರಿಗೂ ಸಿಗುವಂತಾಗಬೇಕು ಎಂದು ಎಪಿಡಿ ಸಂಸ್ಥೆಯ ರಾಜ್ಯದ ವಲಯ ವ್ಯವಸ್ಥಾಪಕ ಶ್ರೀನಿವಾಸ್ ತಿಳಿಸಿದರು.

ನಗರದ ವಿದ್ಯಾಲಯ ಸಂಹೆ ಸಭಾಂಗಣದಲ್ಲಿ ಎಪಿಡಿ ಸಂಸ್ಥೆ ಬೆಂಗಳೂರು ಹಾಗೂ ಫೆವಾರ್ಡ್ ಜಿಲ್ಲಾ ಒಕ್ಕೂಟದಿಂದ ಶನಿವಾರ ಅಂಗವಿಕಲರ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರಿಗೆ ಒಂದು ದಿನದ ಕಾರ್ಯಾಗಾರದಲ್ಲಿ ಮಾಹಿತಿ‌ ನೀಡಿ ಮಾತನಾಡಿದ ಅವರು ಈ ಸಂಸ್ಥೆಗಳ ಜೊತೆಯಲ್ಲಿ ಸರ್ಕಾರಿ, ಅರೆಸರ್ಕಾರಿ ಹಾಗೂ ಸಿಎಸ್ಆರ್ ಅನುದಾನದ ಮೂಲಕ ಅಂಗವಿಕಲರಿಗೆ ಹಾಗೂ ವಿಕಲಚೇತನರಿಗೆ ಸೌಲಭ್ಯಗಳನ್ನು ಒದಗಿಸಲು ಸಂಬಂಧಿಸಿದವರನ್ನು ಮುಂದಿನ ದಿನಗಳಲ್ಲಿ ಒತ್ತಾಯಿಸಬೇಕಾಗುತ್ತದೆ ಎಂದು ಕಾರ್ಯಾಗಾರದಲ್ಲಿ ಚರ್ಚೆ ನಡೆಸಿದರು.

ಅಂಗವಿಕಲರು ಮತ್ತು ವಿಕಲಚೇತನರಿಗೆ ಅನುಕೂಲವಾಗುವಂತೆ ಹೋಟೆಲ್, ಶಾಲಾ ಕಾಲೇಜುಗಳು, ರೈಲ್ವೆ, ಬಸ್ ನಿಲ್ದಾಣ, ಆಸ್ಪತ್ರೆ, ಪಾರ್ಕ್, ಶೌಚಾಲಯ ಸೇರಿದಂತೆ ಇತರೆ ಕಡೆಗಳಲ್ಲಿ ಅವರಿಗೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಸಮಾಜದ ಭಾಗವಾಗಿ ಗುರುಸಿಕೊಳ್ಳುವ ಮೂಲಕ ಮುಖ್ಯವಾಹಿನಿಗೆ ಬರಲು ಬೇಕಾದ ಸೌಲಭ್ಯಗಳನ್ನು ನೀಡುವಂತೆ ಒತ್ತಾಯಿಸಬೇಕು ಇವರ ಮಧ್ಯೆ ಕೆಲಸ ಮಾಡಲು ಸ್ವಯಂ ಸೇವಕರನ್ನು ಗುರುತಿಸಲು ಚರ್ಚಿಸಲಾಯಿತು.

ಕಾರ್ಯಾಗಾರದಲ್ಲಿ ಫೆವಾರ್ಡ್ ಕರ್ನಾಟಕ ರಾಜ್ಯ ಸಂಪನ್ಮೂಲಗಳ ಮ್ಯಾಫಿಂಗ್ ಸಂಯೋಜಕರಾದ ರಿನೀಟಾ, ಜಿಲ್ಲಾ ಒಕ್ಕೂಟದ ಅಧ್ಯಕ್ಷ ಫೋಕಸ್ ಅ‌.ನಾ ಹರೀಶ್, ಕಾರ್ಯದರ್ಶಿ ರತ್ನ ನಾಗರಾಜ್, ಎಪಿಡಿ ಸಂಸ್ಥೆಯ ಜಿಲ್ಲಾ ಸಂಯೋಜಕಿ ಗಿರಿಜಾ, ವಿವಿಧ ಸೇವಾ ಸಂಸ್ಥೆಗಳ ಮುಖ್ಯಸ್ಥರಾದ ಮಾಲೂರು ಸುಬ್ರಮಣಿ ಮುಳಬಾಗಿಲು ಕೃಷ್ಣಮೂರ್ತಿ, ಮಂಜುಳಾರೆಡ್ಡಿ, ಮುನಿರಾಜು, ಮಾಲೂರು ಸುಬ್ರಮಣಿ, ಕೆಜಿಎಫ್ ಸುಬ್ರಮಣಿ ಮುಂತಾದವರು ಇದ್ದರು

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

8 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

9 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

10 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

10 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

14 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

16 hours ago