Categories: ಕೋಲಾರ

ಅಂಗವಿಕಲರಿಗೆ ಸರ್ಕಾರ ಮತ್ತು ಸ್ವಯಂ ಸೇವಾ ಸಂಘಗಳಿಂದ ಸಿಗುವ ಸೌಲಭ್ಯಗಳು ಸದುಪಯೋಗವಾಗಬೇಕು-ಶ್ರೀನಿವಾಸ್

ಕೋಲಾರ: ಸಮಾಜದಲ್ಲಿ ಅಂಗವಿಕಲರಿಗೆ ಹಾಗೂ ವಿಕಲಚೇತನರಿಗೆ ಎಪಿಡಿ ಬೆಂಗಳೂರು ಮತ್ತು ಫೆವಾರ್ಡ್ ಕೋಲಾರ ಜಿಲ್ಲಾ ಒಕ್ಕೂಟದಿಂದ ಅವಶ್ಯಕ ಮಾಹಿತಿ ಮತ್ತು ಸೌಲಭ್ಯಗಳನ್ನು ಒದಗಿಸಲು ಸಿದ್ದವಿದ್ದು ಇದರ ಸದುಪಯೋಗವನ್ನು ಪ್ರತಿಯೊಬ್ಬ ರಿಗೂ ಸಿಗುವಂತಾಗಬೇಕು ಎಂದು ಎಪಿಡಿ ಸಂಸ್ಥೆಯ ರಾಜ್ಯದ ವಲಯ ವ್ಯವಸ್ಥಾಪಕ ಶ್ರೀನಿವಾಸ್ ತಿಳಿಸಿದರು.

ನಗರದ ವಿದ್ಯಾಲಯ ಸಂಹೆ ಸಭಾಂಗಣದಲ್ಲಿ ಎಪಿಡಿ ಸಂಸ್ಥೆ ಬೆಂಗಳೂರು ಹಾಗೂ ಫೆವಾರ್ಡ್ ಜಿಲ್ಲಾ ಒಕ್ಕೂಟದಿಂದ ಶನಿವಾರ ಅಂಗವಿಕಲರ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರಿಗೆ ಒಂದು ದಿನದ ಕಾರ್ಯಾಗಾರದಲ್ಲಿ ಮಾಹಿತಿ‌ ನೀಡಿ ಮಾತನಾಡಿದ ಅವರು ಈ ಸಂಸ್ಥೆಗಳ ಜೊತೆಯಲ್ಲಿ ಸರ್ಕಾರಿ, ಅರೆಸರ್ಕಾರಿ ಹಾಗೂ ಸಿಎಸ್ಆರ್ ಅನುದಾನದ ಮೂಲಕ ಅಂಗವಿಕಲರಿಗೆ ಹಾಗೂ ವಿಕಲಚೇತನರಿಗೆ ಸೌಲಭ್ಯಗಳನ್ನು ಒದಗಿಸಲು ಸಂಬಂಧಿಸಿದವರನ್ನು ಮುಂದಿನ ದಿನಗಳಲ್ಲಿ ಒತ್ತಾಯಿಸಬೇಕಾಗುತ್ತದೆ ಎಂದು ಕಾರ್ಯಾಗಾರದಲ್ಲಿ ಚರ್ಚೆ ನಡೆಸಿದರು.

ಅಂಗವಿಕಲರು ಮತ್ತು ವಿಕಲಚೇತನರಿಗೆ ಅನುಕೂಲವಾಗುವಂತೆ ಹೋಟೆಲ್, ಶಾಲಾ ಕಾಲೇಜುಗಳು, ರೈಲ್ವೆ, ಬಸ್ ನಿಲ್ದಾಣ, ಆಸ್ಪತ್ರೆ, ಪಾರ್ಕ್, ಶೌಚಾಲಯ ಸೇರಿದಂತೆ ಇತರೆ ಕಡೆಗಳಲ್ಲಿ ಅವರಿಗೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಸಮಾಜದ ಭಾಗವಾಗಿ ಗುರುಸಿಕೊಳ್ಳುವ ಮೂಲಕ ಮುಖ್ಯವಾಹಿನಿಗೆ ಬರಲು ಬೇಕಾದ ಸೌಲಭ್ಯಗಳನ್ನು ನೀಡುವಂತೆ ಒತ್ತಾಯಿಸಬೇಕು ಇವರ ಮಧ್ಯೆ ಕೆಲಸ ಮಾಡಲು ಸ್ವಯಂ ಸೇವಕರನ್ನು ಗುರುತಿಸಲು ಚರ್ಚಿಸಲಾಯಿತು.

ಕಾರ್ಯಾಗಾರದಲ್ಲಿ ಫೆವಾರ್ಡ್ ಕರ್ನಾಟಕ ರಾಜ್ಯ ಸಂಪನ್ಮೂಲಗಳ ಮ್ಯಾಫಿಂಗ್ ಸಂಯೋಜಕರಾದ ರಿನೀಟಾ, ಜಿಲ್ಲಾ ಒಕ್ಕೂಟದ ಅಧ್ಯಕ್ಷ ಫೋಕಸ್ ಅ‌.ನಾ ಹರೀಶ್, ಕಾರ್ಯದರ್ಶಿ ರತ್ನ ನಾಗರಾಜ್, ಎಪಿಡಿ ಸಂಸ್ಥೆಯ ಜಿಲ್ಲಾ ಸಂಯೋಜಕಿ ಗಿರಿಜಾ, ವಿವಿಧ ಸೇವಾ ಸಂಸ್ಥೆಗಳ ಮುಖ್ಯಸ್ಥರಾದ ಮಾಲೂರು ಸುಬ್ರಮಣಿ ಮುಳಬಾಗಿಲು ಕೃಷ್ಣಮೂರ್ತಿ, ಮಂಜುಳಾರೆಡ್ಡಿ, ಮುನಿರಾಜು, ಮಾಲೂರು ಸುಬ್ರಮಣಿ, ಕೆಜಿಎಫ್ ಸುಬ್ರಮಣಿ ಮುಂತಾದವರು ಇದ್ದರು

Ramesh Babu

Journalist

Recent Posts

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

6 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

7 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

7 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

16 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

1 day ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

1 day ago