Categories: ಕೋಲಾರ

ಅಂಗವಿಕಲರಿಗೆ ಸರ್ಕಾರ ಮತ್ತು ಸ್ವಯಂ ಸೇವಾ ಸಂಘಗಳಿಂದ ಸಿಗುವ ಸೌಲಭ್ಯಗಳು ಸದುಪಯೋಗವಾಗಬೇಕು-ಶ್ರೀನಿವಾಸ್

ಕೋಲಾರ: ಸಮಾಜದಲ್ಲಿ ಅಂಗವಿಕಲರಿಗೆ ಹಾಗೂ ವಿಕಲಚೇತನರಿಗೆ ಎಪಿಡಿ ಬೆಂಗಳೂರು ಮತ್ತು ಫೆವಾರ್ಡ್ ಕೋಲಾರ ಜಿಲ್ಲಾ ಒಕ್ಕೂಟದಿಂದ ಅವಶ್ಯಕ ಮಾಹಿತಿ ಮತ್ತು ಸೌಲಭ್ಯಗಳನ್ನು ಒದಗಿಸಲು ಸಿದ್ದವಿದ್ದು ಇದರ ಸದುಪಯೋಗವನ್ನು ಪ್ರತಿಯೊಬ್ಬ ರಿಗೂ ಸಿಗುವಂತಾಗಬೇಕು ಎಂದು ಎಪಿಡಿ ಸಂಸ್ಥೆಯ ರಾಜ್ಯದ ವಲಯ ವ್ಯವಸ್ಥಾಪಕ ಶ್ರೀನಿವಾಸ್ ತಿಳಿಸಿದರು.

ನಗರದ ವಿದ್ಯಾಲಯ ಸಂಹೆ ಸಭಾಂಗಣದಲ್ಲಿ ಎಪಿಡಿ ಸಂಸ್ಥೆ ಬೆಂಗಳೂರು ಹಾಗೂ ಫೆವಾರ್ಡ್ ಜಿಲ್ಲಾ ಒಕ್ಕೂಟದಿಂದ ಶನಿವಾರ ಅಂಗವಿಕಲರ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರಿಗೆ ಒಂದು ದಿನದ ಕಾರ್ಯಾಗಾರದಲ್ಲಿ ಮಾಹಿತಿ‌ ನೀಡಿ ಮಾತನಾಡಿದ ಅವರು ಈ ಸಂಸ್ಥೆಗಳ ಜೊತೆಯಲ್ಲಿ ಸರ್ಕಾರಿ, ಅರೆಸರ್ಕಾರಿ ಹಾಗೂ ಸಿಎಸ್ಆರ್ ಅನುದಾನದ ಮೂಲಕ ಅಂಗವಿಕಲರಿಗೆ ಹಾಗೂ ವಿಕಲಚೇತನರಿಗೆ ಸೌಲಭ್ಯಗಳನ್ನು ಒದಗಿಸಲು ಸಂಬಂಧಿಸಿದವರನ್ನು ಮುಂದಿನ ದಿನಗಳಲ್ಲಿ ಒತ್ತಾಯಿಸಬೇಕಾಗುತ್ತದೆ ಎಂದು ಕಾರ್ಯಾಗಾರದಲ್ಲಿ ಚರ್ಚೆ ನಡೆಸಿದರು.

ಅಂಗವಿಕಲರು ಮತ್ತು ವಿಕಲಚೇತನರಿಗೆ ಅನುಕೂಲವಾಗುವಂತೆ ಹೋಟೆಲ್, ಶಾಲಾ ಕಾಲೇಜುಗಳು, ರೈಲ್ವೆ, ಬಸ್ ನಿಲ್ದಾಣ, ಆಸ್ಪತ್ರೆ, ಪಾರ್ಕ್, ಶೌಚಾಲಯ ಸೇರಿದಂತೆ ಇತರೆ ಕಡೆಗಳಲ್ಲಿ ಅವರಿಗೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಸಮಾಜದ ಭಾಗವಾಗಿ ಗುರುಸಿಕೊಳ್ಳುವ ಮೂಲಕ ಮುಖ್ಯವಾಹಿನಿಗೆ ಬರಲು ಬೇಕಾದ ಸೌಲಭ್ಯಗಳನ್ನು ನೀಡುವಂತೆ ಒತ್ತಾಯಿಸಬೇಕು ಇವರ ಮಧ್ಯೆ ಕೆಲಸ ಮಾಡಲು ಸ್ವಯಂ ಸೇವಕರನ್ನು ಗುರುತಿಸಲು ಚರ್ಚಿಸಲಾಯಿತು.

ಕಾರ್ಯಾಗಾರದಲ್ಲಿ ಫೆವಾರ್ಡ್ ಕರ್ನಾಟಕ ರಾಜ್ಯ ಸಂಪನ್ಮೂಲಗಳ ಮ್ಯಾಫಿಂಗ್ ಸಂಯೋಜಕರಾದ ರಿನೀಟಾ, ಜಿಲ್ಲಾ ಒಕ್ಕೂಟದ ಅಧ್ಯಕ್ಷ ಫೋಕಸ್ ಅ‌.ನಾ ಹರೀಶ್, ಕಾರ್ಯದರ್ಶಿ ರತ್ನ ನಾಗರಾಜ್, ಎಪಿಡಿ ಸಂಸ್ಥೆಯ ಜಿಲ್ಲಾ ಸಂಯೋಜಕಿ ಗಿರಿಜಾ, ವಿವಿಧ ಸೇವಾ ಸಂಸ್ಥೆಗಳ ಮುಖ್ಯಸ್ಥರಾದ ಮಾಲೂರು ಸುಬ್ರಮಣಿ ಮುಳಬಾಗಿಲು ಕೃಷ್ಣಮೂರ್ತಿ, ಮಂಜುಳಾರೆಡ್ಡಿ, ಮುನಿರಾಜು, ಮಾಲೂರು ಸುಬ್ರಮಣಿ, ಕೆಜಿಎಫ್ ಸುಬ್ರಮಣಿ ಮುಂತಾದವರು ಇದ್ದರು

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

10 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

10 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

12 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

12 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

19 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago