ಅಂಗವಿಕಲರ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಬೇಡಿಕೆ ಈಡೇರಿಕೆಗಾಗಿ ಆಗ್ರಹ

ಅಂಗವಿಕಲರ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಬೇಡಿಕೆ ಈಡೇರಿಕೆಗಾಗಿ ಏ.21ರಿಂದ ಶ್ರೀರಂಗಪಟ್ಟಣದಿಂದ ಪಾದಯಾತ್ರೆ ಆರಂಭಿಸಿ ಮೈಸೂರು ನಗರದ ಜೆ.ಕೆ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿವರೆಗೆ ಆಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಯಿತು.

ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಕಳೆದ 17 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಗ್ರಾಮೀಣ/ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಸೇವೆಯನ್ನು ಖಾಯಂ ಗೊಳಿಸಬೇಕು, ಖಾಯಂಗೊಳಿಸುವವರೆಗೂ ಕೂಡಲೇ ಈ ಹುದ್ದೆಗಳನ್ನು ಕನಿಷ್ಠ ವೇತನಕ್ಕೆ ಒಳಪಡಿಸಿ ಕನಿಷ್ಠ ವೇತನ ನೀಡಬೇಕು ಎಂಬ ಬೇಡಿಕೆಯನ್ನು ಇಟ್ಟುಕೊಂಡು ರಾಜ್ಯದ ಎಲ್ಲಾ ಪುನರ್ವಸತಿ ಕಾರ್ಯಕರ್ತರ ಶ್ರೇಯೋಭಿವೃದ್ಧಿಗಾಗಿ ಹೋರಾಟ ನಡೆಸಲಾಯಿತು.

ಏ.24ರಿಂದ ಜೆ.ಕೆ ಪಾರ್ಕ್, ಮೈಸೂರು ನಗರ ಇಲ್ಲಿ ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟಾವಧಿಯವರೆಗೆ ಅಹೋ ರಾತ್ರಿ ಧರಣಿಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಧರಣಿಯಲ್ಲಿ ರಾಜ್ಯದ ಎಲ್ಲಾ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಜಿಲ್ಲಾ ಮತ್ತು ರಾಜ್ಯ ಸಂಯೋಜಕರು ಒಟ್ಟಾಗಿ ಭಾಗವಹಿಸಲಿದ್ದು, ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ.

Ramesh Babu

Journalist

Recent Posts

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

4 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

13 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

14 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

15 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

16 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

16 hours ago