ಅಂಗವಿಕಲರ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಬೇಡಿಕೆ ಈಡೇರಿಕೆಗಾಗಿ ಆಗ್ರಹ

ಅಂಗವಿಕಲರ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಬೇಡಿಕೆ ಈಡೇರಿಕೆಗಾಗಿ ಏ.21ರಿಂದ ಶ್ರೀರಂಗಪಟ್ಟಣದಿಂದ ಪಾದಯಾತ್ರೆ ಆರಂಭಿಸಿ ಮೈಸೂರು ನಗರದ ಜೆ.ಕೆ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿವರೆಗೆ ಆಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಯಿತು.

ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಕಳೆದ 17 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಗ್ರಾಮೀಣ/ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಸೇವೆಯನ್ನು ಖಾಯಂ ಗೊಳಿಸಬೇಕು, ಖಾಯಂಗೊಳಿಸುವವರೆಗೂ ಕೂಡಲೇ ಈ ಹುದ್ದೆಗಳನ್ನು ಕನಿಷ್ಠ ವೇತನಕ್ಕೆ ಒಳಪಡಿಸಿ ಕನಿಷ್ಠ ವೇತನ ನೀಡಬೇಕು ಎಂಬ ಬೇಡಿಕೆಯನ್ನು ಇಟ್ಟುಕೊಂಡು ರಾಜ್ಯದ ಎಲ್ಲಾ ಪುನರ್ವಸತಿ ಕಾರ್ಯಕರ್ತರ ಶ್ರೇಯೋಭಿವೃದ್ಧಿಗಾಗಿ ಹೋರಾಟ ನಡೆಸಲಾಯಿತು.

ಏ.24ರಿಂದ ಜೆ.ಕೆ ಪಾರ್ಕ್, ಮೈಸೂರು ನಗರ ಇಲ್ಲಿ ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟಾವಧಿಯವರೆಗೆ ಅಹೋ ರಾತ್ರಿ ಧರಣಿಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಧರಣಿಯಲ್ಲಿ ರಾಜ್ಯದ ಎಲ್ಲಾ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಜಿಲ್ಲಾ ಮತ್ತು ರಾಜ್ಯ ಸಂಯೋಜಕರು ಒಟ್ಟಾಗಿ ಭಾಗವಹಿಸಲಿದ್ದು, ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

50 minutes ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 hour ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

5 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

13 hours ago