ಅಂಗವಿಕಲರ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಬೇಡಿಕೆ ಈಡೇರಿಕೆಗಾಗಿ ಆಗ್ರಹ

ಅಂಗವಿಕಲರ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಬೇಡಿಕೆ ಈಡೇರಿಕೆಗಾಗಿ ಏ.21ರಿಂದ ಶ್ರೀರಂಗಪಟ್ಟಣದಿಂದ ಪಾದಯಾತ್ರೆ ಆರಂಭಿಸಿ ಮೈಸೂರು ನಗರದ ಜೆ.ಕೆ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿವರೆಗೆ ಆಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಯಿತು.

ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಕಳೆದ 17 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಗ್ರಾಮೀಣ/ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಸೇವೆಯನ್ನು ಖಾಯಂ ಗೊಳಿಸಬೇಕು, ಖಾಯಂಗೊಳಿಸುವವರೆಗೂ ಕೂಡಲೇ ಈ ಹುದ್ದೆಗಳನ್ನು ಕನಿಷ್ಠ ವೇತನಕ್ಕೆ ಒಳಪಡಿಸಿ ಕನಿಷ್ಠ ವೇತನ ನೀಡಬೇಕು ಎಂಬ ಬೇಡಿಕೆಯನ್ನು ಇಟ್ಟುಕೊಂಡು ರಾಜ್ಯದ ಎಲ್ಲಾ ಪುನರ್ವಸತಿ ಕಾರ್ಯಕರ್ತರ ಶ್ರೇಯೋಭಿವೃದ್ಧಿಗಾಗಿ ಹೋರಾಟ ನಡೆಸಲಾಯಿತು.

ಏ.24ರಿಂದ ಜೆ.ಕೆ ಪಾರ್ಕ್, ಮೈಸೂರು ನಗರ ಇಲ್ಲಿ ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟಾವಧಿಯವರೆಗೆ ಅಹೋ ರಾತ್ರಿ ಧರಣಿಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಧರಣಿಯಲ್ಲಿ ರಾಜ್ಯದ ಎಲ್ಲಾ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಜಿಲ್ಲಾ ಮತ್ತು ರಾಜ್ಯ ಸಂಯೋಜಕರು ಒಟ್ಟಾಗಿ ಭಾಗವಹಿಸಲಿದ್ದು, ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

12 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

22 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

23 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago