ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು ‘ಅಧ್ಯಯನ ವೃತ್ತ’ (ಸ್ಟಡಿ ಸರ್ಕಲ್) ವತಿಯಿಂದ ಸರ್ಕಾರದಿಂದ ಅಧಿಸೂಚಿಸಲ್ಪಡುವ ವಿವಿಧ ಹುದ್ದೆಗಳ ನೇಮಕಾತಿ ಗೆ ಸಂಬಂಧಿಸಿದಂತೆ, ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ಪರೀಕ್ಷಾ ಪೂರ್ವ ತರಬೇತಿ ವರ್ಗಗಳನ್ನು ಶ್ರೀ. ವಿದ್ಯಾಶೇಖರ ಇನಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್, ನೆಲಮಂಗಲದಲ್ಲಿ ಹಮ್ಮಿಕೊಳ್ಳಲಾಗಿದೆ.
ಫೆಬ್ರವರಿ 18 ರಿಂದ 28 ರವರೆಗೆ ತರಬೇತಿ ನೀಡಲಾಗುವುದು, ಫೆ.18 ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಕಾರ್ಯಕ್ರಮದೊಂದಿಗೆ ತರಬೇತಿ ವರ್ಗಗಳು ಆರಂಭಗೊಳ್ಳಲಿದ್ದು, ಆಸಕ್ತ ಅಭ್ಯರ್ಥಿಗಳು ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಛೇರಿ ಸಿ.ಓ.ಇ.ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ತುಮಕೂರು ರಸ್ತೆ ಪೀಣ್ಯ, ಬೆಂಗಳೂರು-22 ಇಲ್ಲಿ ಕಚೇರಿಯ ವೇಳೆಯಲ್ಲಿ ಖುದ್ದಾಗಿ ಸಂಪರ್ಕಿಸಿ ಹೆಸರನ್ನು ನೊಂದಾಯಿಸಿಕೊಳ್ಳತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-29752338, ಮತ್ತು 9449728545 ಸಂಪರ್ಕಿಸಿ ಅಥವಾ ಕಛೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…
ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…