ಅಂಗಾಂಗ ದಾನ, ನೇತ್ರದಾನದ ಕುರಿತು ಜಾಗೃತಿ

ದೊಡ್ಡಬಳ್ಳಾಪುರ ಲಯನ್ಸ್‌ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌, ಅಕ್ಷಯ ಲಿಯೋ ಕ್ಲಬ್ ಹಾಗೂ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಸಹಯೋಗದಲ್ಲಿ ಅಂಗಾಂಗ ದಾನ ಹಾಗೂ ನೇತ್ರದಾನದ ಕುರಿತು ಅರಿವು ಮೂಡಿಸುವ ಸಲುವಾಗಿ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು 3 ಕಿಲೋ ಮೀಟರ್‌ ವಾಕಥಾನ್‌ ನಡೆಸಿದರು.

ಜಯಚಾಮರಾಜೇಂದ್ರ ವೃತ್ತದ ಬಳಿ ಇರುವ ನೆಲದಾಂಜನೇಯಸ್ವಾಮಿ ದೇವಾಲಯದ ಮುಂಭಾಗ ವಾಕಥಾನ್‌ಗೆ ಲಯನ್ಸ್‌ ಜಿಲ್ಲಾ ದೃಷ್ಟಿ ವಿಭಾಗದ ಸಂಯೋಜಕ ವಿಜಯಕುಮಾರ್ ಹಾಗೂ ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಚಾಲನೆ ನೀಡಿದರು.

ಟಿ.ಸಿದ್ದಲಿಂಗಯ್ಯ ವೃತ್ತ, ಕೊಂಗಾಡಿಯಪ್ಪ ಬಸ್‌ ನಿಲ್ದಾಣ, ಸೌಂದರ್ಯಮಹಲ್ ವೃತ್ತ, ಚೌಕ, ಮುಕ್ತಾಂಬಿಕಾ ರಸ್ತೆ, ಎಚ್.ಮುಗುವಾಳಪ್ಪ ವೃತ್ತ, ಶಾಂತಿನಗರ ಮೂಲಕ ಆರ್.ಎಲ್.ಜಾಲಪ್ಪ ವಿದ್ಯಾ ಸಂಸ್ಥೆ ಕ್ಯಾಂಪಸ್‌ಗೆ ವಾಕಥಾನ್‌ ನಡೆಸಲಾಯಿತು. ವಿದ್ಯಾರ್ಥಿಗಳು ಅಂಗಾಂಗ ದಾನ, ನೇತ್ರದಾನದ ಬಗ್ಗೆ ಅರಿವು ಮೂಡಿಸುವ ಸಂದೇಶಗಳನ್ನು ಹೊತ್ತ ಬಿತ್ತಿಪತ್ರಗಳನ್ನು ಹಿಡಿದು ಘೋಷಣೆಗಳ ಮೂಲಕ ಸಾರ್ವಜನಿಕರಿಗೆ ಸಂದೇಶ ರವಾನಿಸಿದರು.

ಇಲ್ಲಿನ ಶ್ರೀದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಆರ್.ಎಲ್.ಜಾಲಪ್ಪ ಮೆಡಿಕಲ್ ಕಾಲೇಜಿನ ನೇತ್ರತಜ್ಞ ಡಾ.ನರೇಂದ್ರ ಮಾತನಾಡಿ, 18 ವರ್ಷ ಮೀರಿದ ಯಾವುದೇ ವ್ಯಕ್ತಿ ನೇತ್ರದಾನಕ್ಕೆ ನೊಂದಣಿ ಮಾಡಬಹುದು. ಡಾ.ರಾಜ್‌ಕುಮಾರ್, ಪುನಿತ್‌ರಾಜ್‌ಕುಮಾರ್‌, ಜಾಲಪ್ಪ ಸೇರಿದಂತೆ ಅನೇಕ ಮಹನೀಯರು ನೇತ್ರದಾನ ಮಾಡುವ ಮಾಡುವ ಅಂಧರ ಬಾಳಿಗೆ ಬೆಳಕಾಗಿದ್ದಾರೆ. ಇಂತಹ ಗಣ್ಯರ ನಡೆ ಇತರರಿಗೂ ಮಾದರಿಯಾಗಿದ್ದು, ಮರಣಾನಂತರ ಕಣ್ಣುಗಳನ್ನು ದಾನ ಮಾಡುವ ಜನರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ ಎಂದರು.

ಕಣ್ಣಿನ ದಾನದ ಬಗ್ಗೆ ಹಲವು ಮೂಢನಂಬಿಕೆಗಳು ಜನರಲ್ಲಿದ್ದು, ಅವುಗಳಿಂದ ಮುಕ್ತವಾಗುವುದು ಅಗತ್ಯ. ತಪ್ಪುಗ್ರಹಿಕೆಯನ್ನು ದೂರಮಾಡಿ, ವೈಜ್ಞಾನಿಕ ಸತ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕು. ಒಬ್ಬ ವ್ಯಕ್ತಿಯ ಕಣ್ಣುಗಳು ನಾಲ್ವರಿಗೆ ದೃಷ್ಟಿ ನೀಡಲು ನೆರವಾಗುತ್ತವೆ ಎಂದು ತಿಳಿಸಿದರು.

ಲಯನ್ಸ್‌ ಜಿಲ್ಲೆ 317ಎಫ್‌ನ ದೃಷ್ಟಿ ವಿಭಾಗದ ಸಂಯೋಜಕ ವಿಜಯಕುಮಾರ್ ಮಾತನಾಡಿ, ಮಾನವೀಯ ನೆಲೆಗಟ್ಟಿನ ಉದ್ದೇಶವೊಂದರ ಸಾಫಲ್ಯಕ್ಕೆ ನೂರಾರು ಜನರು ಕೈಜೋಡಿಸಿರುವುದು ಅತ್ಯಂತ ಶ್ಲಾಘನೀಯ ವಿಚಾರ ಎಂದರು.

ಎಸ್‌ಡಿಯುಇಟಿ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ನೇತ್ರದಾನದಲ್ಲಿ ದೊಡ್ಡಬಳ್ಳಾಪುರ ತನ್ನದೇ ಆದ ಮಹತ್ವವನ್ನು ಹೊಂದಿದೆ. ಈವರೆಗೆ ಸುಮಾರು ಎರಡೂವರೆ ಸಾವಿರ ಕಣ್ಣುಗಳನ್ನು ದಾನ ಮಾಡಿರುವ ಅನನ್ಯ ಕಾರ್ಯವನ್ನು ಈ ತಾಲೂಕು ಮಾಡಿದ್ದು, ಈ ಬಗ್ಗೆ ಮತ್ತಷ್ಟು ಜಾಗೃತಿ ಉಂಟಾಗಬೇಕು ಎಂದರು.

ಲಯನ್ಸ್‌ ಕ್ಲಬ್‌ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನ ಅಧ್ಯಕ್ಷ ಜೆ.ಆರ್.ರಾಕೇಶ್‌ ಅಧ್ಯಕ್ಷತೆ ವಹಿಸಿದ್ದರು. ಜಿಇಟಿ ಸಂಯೋಜಕ ಎಂ.ಆರ್.ಶ್ರೀನಿವಾಸ್‌, ಜಿಲ್ಲಾ ಗ್ರಾಮೀಣ ಡಯಾಬಿಟಿಕ್‌ ಸಂಯೋಜಕ ಎಲ್.ಎನ್.ಪ್ರದೀಪ್‌ಕುಮಾರ್, ಉಪಾಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್‌ಕಾರ್ತಿಕ್, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಚಿಕ್ಕಣ್ಣ, ಲಯನ್ಸ್‌ ಕ್ಲಬ್‌ ಪದಾಧಿಕಾರಿಗಳು ಭಾಗವಹಿಸಿದ್ದರು.

ಇದೇ ವೇಳೆ ನೇತ್ರದಾನ ನೊಂದಣಿ ಕಾರ್ಯ ನಡೆಯಿತು. ಹಲವರು ತಮ್ಮ ಮರಣಾ ನಂತರ ಕಣ್ಣುಗಳನ್ನು ದಾನ ಮಾಡುವುದಾಗಿ ನೊಂದಣಿ ಮಾಡಿದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

10 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

13 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago