ಅಂಗಾಂಗ ದಾನ, ನೇತ್ರದಾನದ ಕುರಿತು ಜಾಗೃತಿ

ದೊಡ್ಡಬಳ್ಳಾಪುರ ಲಯನ್ಸ್‌ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌, ಅಕ್ಷಯ ಲಿಯೋ ಕ್ಲಬ್ ಹಾಗೂ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಸಹಯೋಗದಲ್ಲಿ ಅಂಗಾಂಗ ದಾನ ಹಾಗೂ ನೇತ್ರದಾನದ ಕುರಿತು ಅರಿವು ಮೂಡಿಸುವ ಸಲುವಾಗಿ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು 3 ಕಿಲೋ ಮೀಟರ್‌ ವಾಕಥಾನ್‌ ನಡೆಸಿದರು.

ಜಯಚಾಮರಾಜೇಂದ್ರ ವೃತ್ತದ ಬಳಿ ಇರುವ ನೆಲದಾಂಜನೇಯಸ್ವಾಮಿ ದೇವಾಲಯದ ಮುಂಭಾಗ ವಾಕಥಾನ್‌ಗೆ ಲಯನ್ಸ್‌ ಜಿಲ್ಲಾ ದೃಷ್ಟಿ ವಿಭಾಗದ ಸಂಯೋಜಕ ವಿಜಯಕುಮಾರ್ ಹಾಗೂ ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಚಾಲನೆ ನೀಡಿದರು.

ಟಿ.ಸಿದ್ದಲಿಂಗಯ್ಯ ವೃತ್ತ, ಕೊಂಗಾಡಿಯಪ್ಪ ಬಸ್‌ ನಿಲ್ದಾಣ, ಸೌಂದರ್ಯಮಹಲ್ ವೃತ್ತ, ಚೌಕ, ಮುಕ್ತಾಂಬಿಕಾ ರಸ್ತೆ, ಎಚ್.ಮುಗುವಾಳಪ್ಪ ವೃತ್ತ, ಶಾಂತಿನಗರ ಮೂಲಕ ಆರ್.ಎಲ್.ಜಾಲಪ್ಪ ವಿದ್ಯಾ ಸಂಸ್ಥೆ ಕ್ಯಾಂಪಸ್‌ಗೆ ವಾಕಥಾನ್‌ ನಡೆಸಲಾಯಿತು. ವಿದ್ಯಾರ್ಥಿಗಳು ಅಂಗಾಂಗ ದಾನ, ನೇತ್ರದಾನದ ಬಗ್ಗೆ ಅರಿವು ಮೂಡಿಸುವ ಸಂದೇಶಗಳನ್ನು ಹೊತ್ತ ಬಿತ್ತಿಪತ್ರಗಳನ್ನು ಹಿಡಿದು ಘೋಷಣೆಗಳ ಮೂಲಕ ಸಾರ್ವಜನಿಕರಿಗೆ ಸಂದೇಶ ರವಾನಿಸಿದರು.

ಇಲ್ಲಿನ ಶ್ರೀದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಆರ್.ಎಲ್.ಜಾಲಪ್ಪ ಮೆಡಿಕಲ್ ಕಾಲೇಜಿನ ನೇತ್ರತಜ್ಞ ಡಾ.ನರೇಂದ್ರ ಮಾತನಾಡಿ, 18 ವರ್ಷ ಮೀರಿದ ಯಾವುದೇ ವ್ಯಕ್ತಿ ನೇತ್ರದಾನಕ್ಕೆ ನೊಂದಣಿ ಮಾಡಬಹುದು. ಡಾ.ರಾಜ್‌ಕುಮಾರ್, ಪುನಿತ್‌ರಾಜ್‌ಕುಮಾರ್‌, ಜಾಲಪ್ಪ ಸೇರಿದಂತೆ ಅನೇಕ ಮಹನೀಯರು ನೇತ್ರದಾನ ಮಾಡುವ ಮಾಡುವ ಅಂಧರ ಬಾಳಿಗೆ ಬೆಳಕಾಗಿದ್ದಾರೆ. ಇಂತಹ ಗಣ್ಯರ ನಡೆ ಇತರರಿಗೂ ಮಾದರಿಯಾಗಿದ್ದು, ಮರಣಾನಂತರ ಕಣ್ಣುಗಳನ್ನು ದಾನ ಮಾಡುವ ಜನರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ ಎಂದರು.

ಕಣ್ಣಿನ ದಾನದ ಬಗ್ಗೆ ಹಲವು ಮೂಢನಂಬಿಕೆಗಳು ಜನರಲ್ಲಿದ್ದು, ಅವುಗಳಿಂದ ಮುಕ್ತವಾಗುವುದು ಅಗತ್ಯ. ತಪ್ಪುಗ್ರಹಿಕೆಯನ್ನು ದೂರಮಾಡಿ, ವೈಜ್ಞಾನಿಕ ಸತ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕು. ಒಬ್ಬ ವ್ಯಕ್ತಿಯ ಕಣ್ಣುಗಳು ನಾಲ್ವರಿಗೆ ದೃಷ್ಟಿ ನೀಡಲು ನೆರವಾಗುತ್ತವೆ ಎಂದು ತಿಳಿಸಿದರು.

ಲಯನ್ಸ್‌ ಜಿಲ್ಲೆ 317ಎಫ್‌ನ ದೃಷ್ಟಿ ವಿಭಾಗದ ಸಂಯೋಜಕ ವಿಜಯಕುಮಾರ್ ಮಾತನಾಡಿ, ಮಾನವೀಯ ನೆಲೆಗಟ್ಟಿನ ಉದ್ದೇಶವೊಂದರ ಸಾಫಲ್ಯಕ್ಕೆ ನೂರಾರು ಜನರು ಕೈಜೋಡಿಸಿರುವುದು ಅತ್ಯಂತ ಶ್ಲಾಘನೀಯ ವಿಚಾರ ಎಂದರು.

ಎಸ್‌ಡಿಯುಇಟಿ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ನೇತ್ರದಾನದಲ್ಲಿ ದೊಡ್ಡಬಳ್ಳಾಪುರ ತನ್ನದೇ ಆದ ಮಹತ್ವವನ್ನು ಹೊಂದಿದೆ. ಈವರೆಗೆ ಸುಮಾರು ಎರಡೂವರೆ ಸಾವಿರ ಕಣ್ಣುಗಳನ್ನು ದಾನ ಮಾಡಿರುವ ಅನನ್ಯ ಕಾರ್ಯವನ್ನು ಈ ತಾಲೂಕು ಮಾಡಿದ್ದು, ಈ ಬಗ್ಗೆ ಮತ್ತಷ್ಟು ಜಾಗೃತಿ ಉಂಟಾಗಬೇಕು ಎಂದರು.

ಲಯನ್ಸ್‌ ಕ್ಲಬ್‌ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನ ಅಧ್ಯಕ್ಷ ಜೆ.ಆರ್.ರಾಕೇಶ್‌ ಅಧ್ಯಕ್ಷತೆ ವಹಿಸಿದ್ದರು. ಜಿಇಟಿ ಸಂಯೋಜಕ ಎಂ.ಆರ್.ಶ್ರೀನಿವಾಸ್‌, ಜಿಲ್ಲಾ ಗ್ರಾಮೀಣ ಡಯಾಬಿಟಿಕ್‌ ಸಂಯೋಜಕ ಎಲ್.ಎನ್.ಪ್ರದೀಪ್‌ಕುಮಾರ್, ಉಪಾಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್‌ಕಾರ್ತಿಕ್, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಚಿಕ್ಕಣ್ಣ, ಲಯನ್ಸ್‌ ಕ್ಲಬ್‌ ಪದಾಧಿಕಾರಿಗಳು ಭಾಗವಹಿಸಿದ್ದರು.

ಇದೇ ವೇಳೆ ನೇತ್ರದಾನ ನೊಂದಣಿ ಕಾರ್ಯ ನಡೆಯಿತು. ಹಲವರು ತಮ್ಮ ಮರಣಾ ನಂತರ ಕಣ್ಣುಗಳನ್ನು ದಾನ ಮಾಡುವುದಾಗಿ ನೊಂದಣಿ ಮಾಡಿದರು.

Ramesh Babu

Journalist

Recent Posts

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ, ಮತ್ತೊಂದು ಮಗುವಿಗೆ ಗಂಭೀರ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಸಮೀಪ ಶುಕ್ರವಾರ ಸಂಜೆ ಸುಮಾರು 6:15ಕ್ಕೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

19 hours ago

ಬಂಗಾರದ ಕಿವಿ ಓಲೆಗಳಿಗಾಗಿ 80 ವರ್ಷದ ವೃದ್ಧೆಯ ಭೀಕರ ಕೊಲೆ

ಚಿಕ್ಕಬಳ್ಳಾಪುರ: ಬಂಗಾರದ ಕಿವಿ ಓಲೆಗಳಿಗಾಗಿ 80 ವರ್ಷದ ವೃದ್ಧೆಯನ್ನು ಹತ್ಯೆ ಮಾಡಿ, ಕಿವಿಗಳನ್ನು ಕತ್ತರಿಸಿ ಆಭರಣ ಕಳವು ಮಾಡಿರುವ ಅಮಾನುಷ…

21 hours ago

ಹೊರ ರಾಜ್ಯದ ಕಾರ್ಮಿಕರನ್ನು ಗುರಿಯಾಗಿಸಿ ಗಾಂಜಾ ಮಾರಾಟ: ಇಬ್ಬರ ಬಂಧನ, 3.61 ಕೆಜಿ ಗಾಂಜಾ ವಶ

ದೇವನಹಳ್ಳಿ: ಹೊರ ರಾಜ್ಯದ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಚನ್ನರಾಯಪಟ್ಟಣ ಪೊಲೀಸರು ಬಂಧಿಸಿ, ಅವರಿಂದ 3…

22 hours ago

ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2026-27ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಜಿಲ್ಲೆಯಲ್ಲಿರುವ ಪ್ರತಿ ಕೈಮಗ್ಗ, ವಿದ್ಯುತ್…

23 hours ago

ಗಂಧದ ಮರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ: ₹30 ಲಕ್ಷಕ್ಕೂ ಅಧಿಕ ಮೌಲ್ಯದ 254 ಕೆಜಿ ತೂಕದ ಗಂಧದ ತುಂಡುಗಳ ವಶ

ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ನಡೆದಿದ್ದ ಗಂಧದ ಮರ ಕಳ್ಳತನ ಪ್ರಕರಣವನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

1 day ago

ಅಂತಾರಾಜ್ಯ ಮನೆಗಳ್ಳರ ಬಂಧನ: ₹11.42 ಲಕ್ಷ ಮೌಲ್ಯದ ಕಳವು ಮಾಲು ವಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ, ಬಿಹಾರ ಮೂಲದ…

1 day ago