ಅಂಚೆ ಮೂಲಕ ಮಾದಕ ವಸ್ತು ಸಾಗಾಟ: 21,17,34,000 ರೂ. ಮೌಲ್ಯದ ನಿಷೇಧಿತ ಮಾದಕದ್ರವ್ಯಗಳ ವಶ

ಸಿಸಿಬಿಯ ಮಾದಕದ್ರವ್ಯ ನಿಗ್ರಹ ವಿಭಾಗ ಹಾಗೂ ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಂಚೆ ಮೂಲಕ ಸಾಗಿಸುತ್ತಿದ್ದ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದರು.

ಬೆಂಗಳೂರು ನಗರ ಪೊಲೀಸ್ ಇಲಾಖೆಯ ಶ್ವಾನದಳದ ನೆರವಿನೊಂದಿಗೆ ಈ ತಂಡವನ್ನು ಪತ್ತೆಹಚ್ಚಲಾಗಿದೆ. ಕಾರ್ಯಾಚರಣೆಯಲ್ಲಿ 3500 ಪಾರ್ಸಲ್ ಗಳನ್ನು ಪತ್ತೆಹಚ್ಚಲಾಗಿದೆ. ಅದರಲ್ಲಿ 21,17,34,000 ರೂ. ಮೌಲ್ಯದ ನಿಷೇಧಿತ ಮಾದಕದ್ರವ್ಯಗಳು 606 ಪಾರ್ಸಲ್ ಗಳಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದರು.

ಪೋರ್ಟರ್ ಆಪ್ ಮೂಲಕ ಗ್ರಾಹಕರ ಹಾಗೂ ಚಾಲಕರ ನಕಲಿ ಗುರುತಿನ ಚೀಟಿ ಸೃಷ್ಟಿ ಮಾಡುತ್ತಿದ್ದ ಆರೋಪದ ಮೇಲೆ ದಕ್ಷಿಣ ವಲಯದ ಸಿಇಎನ್ ಪೊಲೀಸ್ ಠಾಣೆ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಈ ನಕಲಿ ಗುರುತಿನ ಚೀಟಿ ಬಳಸಿಕೊಂಡು ನಕಲಿ ಆರ್ಡರ್ ಬುಕ್ ಮಾಡುತ್ತಿದ್ದರು. ಕಂಪನಿಗಳು ಈ ನಕಲಿ ಚಾಲಕರಿಗೆ ಹಣ ಪಾವತಿ ಮಾಡುತ್ತಿತ್ತು. ನಂತರ ಈ ಆರ್ಡರ್ ಗಳನ್ನು ರದ್ದುಗೊಳಿಸಿದ ನಂತರ ಕಂಪನಿಯು ನಕಲಿ ಗ್ರಾಹಕರಿಗೂ ಹಣ ಮರುಪಾವತಿ ಮಾಡುತ್ತಿತ್ತು. ಕಳೆದ 8 ತಿಂಗಳಲ್ಲಿ ಈ ರೀತಿಯಾಗಿ ಕಂಪನಿಗೆ 90 ಲಕ್ಷ ವಂಚನೆ ಮಾಡಲಾಗಿದೆ ಎಂದರು.

ನಗರದ ವಿವಿಧ ಶಾಲಾ ಕಾಲೇಜುಗಳಿಗೆ ಹುಸಿ ಬಾಂಬ್ ಕರೆ ಹಾಗೂ ಇಮೇಲ್ ಗಳನ್ನು ಕಳುಹಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿವಿ ಪುರಂ ಪೊಲೀಸ್ ಠಾಣೆ ಅಧಿಕಾರಿಗಳು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಕೃತ್ಯಕ್ಕೆ ಬಳಸಿದ್ದ ಲ್ಯಾಪ್ ಟಾಪ್ ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಮಾದರಿಯ 10 ಪ್ರಕರಣಗಳು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ ಎಂದು ಹೇಳಿದರು.

ಹೂಡಿಕೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ವಲಯದ ಸಿಇಎನ್ ಪೊಲೀಸ್ ಠಾಣೆ ಅಧಿಕಾರಿಗಳು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಹಣ ದುಪ್ಪಟ್ಟು ಮಾಡುವ ಆಮೀಷ ಒಡ್ಡಿ ಯಾಮಾರಿಸುತ್ತಿದ್ದರು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತಿಬ್ಬರ ಆರೋಪಿಗಳ ಹುಡುಕಾಟ ನಡೆಸಲಾಗುತ್ತಿದ್ದು ಕಾರ್ಯಾಚರಣೆ ಮುಂದುವರಿದಿದೆ ಎಂದರು.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

14 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

14 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

18 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

24 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 day ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

2 days ago