ಅಂಚೆ ಮೂಲಕ ಮಾದಕ ವಸ್ತು ಸಾಗಾಟ: 21,17,34,000 ರೂ. ಮೌಲ್ಯದ ನಿಷೇಧಿತ ಮಾದಕದ್ರವ್ಯಗಳ ವಶ

ಸಿಸಿಬಿಯ ಮಾದಕದ್ರವ್ಯ ನಿಗ್ರಹ ವಿಭಾಗ ಹಾಗೂ ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಂಚೆ ಮೂಲಕ ಸಾಗಿಸುತ್ತಿದ್ದ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದರು.

ಬೆಂಗಳೂರು ನಗರ ಪೊಲೀಸ್ ಇಲಾಖೆಯ ಶ್ವಾನದಳದ ನೆರವಿನೊಂದಿಗೆ ಈ ತಂಡವನ್ನು ಪತ್ತೆಹಚ್ಚಲಾಗಿದೆ. ಕಾರ್ಯಾಚರಣೆಯಲ್ಲಿ 3500 ಪಾರ್ಸಲ್ ಗಳನ್ನು ಪತ್ತೆಹಚ್ಚಲಾಗಿದೆ. ಅದರಲ್ಲಿ 21,17,34,000 ರೂ. ಮೌಲ್ಯದ ನಿಷೇಧಿತ ಮಾದಕದ್ರವ್ಯಗಳು 606 ಪಾರ್ಸಲ್ ಗಳಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದರು.

ಪೋರ್ಟರ್ ಆಪ್ ಮೂಲಕ ಗ್ರಾಹಕರ ಹಾಗೂ ಚಾಲಕರ ನಕಲಿ ಗುರುತಿನ ಚೀಟಿ ಸೃಷ್ಟಿ ಮಾಡುತ್ತಿದ್ದ ಆರೋಪದ ಮೇಲೆ ದಕ್ಷಿಣ ವಲಯದ ಸಿಇಎನ್ ಪೊಲೀಸ್ ಠಾಣೆ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಈ ನಕಲಿ ಗುರುತಿನ ಚೀಟಿ ಬಳಸಿಕೊಂಡು ನಕಲಿ ಆರ್ಡರ್ ಬುಕ್ ಮಾಡುತ್ತಿದ್ದರು. ಕಂಪನಿಗಳು ಈ ನಕಲಿ ಚಾಲಕರಿಗೆ ಹಣ ಪಾವತಿ ಮಾಡುತ್ತಿತ್ತು. ನಂತರ ಈ ಆರ್ಡರ್ ಗಳನ್ನು ರದ್ದುಗೊಳಿಸಿದ ನಂತರ ಕಂಪನಿಯು ನಕಲಿ ಗ್ರಾಹಕರಿಗೂ ಹಣ ಮರುಪಾವತಿ ಮಾಡುತ್ತಿತ್ತು. ಕಳೆದ 8 ತಿಂಗಳಲ್ಲಿ ಈ ರೀತಿಯಾಗಿ ಕಂಪನಿಗೆ 90 ಲಕ್ಷ ವಂಚನೆ ಮಾಡಲಾಗಿದೆ ಎಂದರು.

ನಗರದ ವಿವಿಧ ಶಾಲಾ ಕಾಲೇಜುಗಳಿಗೆ ಹುಸಿ ಬಾಂಬ್ ಕರೆ ಹಾಗೂ ಇಮೇಲ್ ಗಳನ್ನು ಕಳುಹಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿವಿ ಪುರಂ ಪೊಲೀಸ್ ಠಾಣೆ ಅಧಿಕಾರಿಗಳು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಕೃತ್ಯಕ್ಕೆ ಬಳಸಿದ್ದ ಲ್ಯಾಪ್ ಟಾಪ್ ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಮಾದರಿಯ 10 ಪ್ರಕರಣಗಳು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ ಎಂದು ಹೇಳಿದರು.

ಹೂಡಿಕೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ವಲಯದ ಸಿಇಎನ್ ಪೊಲೀಸ್ ಠಾಣೆ ಅಧಿಕಾರಿಗಳು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಹಣ ದುಪ್ಪಟ್ಟು ಮಾಡುವ ಆಮೀಷ ಒಡ್ಡಿ ಯಾಮಾರಿಸುತ್ತಿದ್ದರು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತಿಬ್ಬರ ಆರೋಪಿಗಳ ಹುಡುಕಾಟ ನಡೆಸಲಾಗುತ್ತಿದ್ದು ಕಾರ್ಯಾಚರಣೆ ಮುಂದುವರಿದಿದೆ ಎಂದರು.

Ramesh Babu

Journalist

Recent Posts

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

2 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

23 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago