ಅಂಚೆ ಮೂಲಕ ಮಾದಕ ವಸ್ತು ಸಾಗಾಟ: 21,17,34,000 ರೂ. ಮೌಲ್ಯದ ನಿಷೇಧಿತ ಮಾದಕದ್ರವ್ಯಗಳ ವಶ

ಸಿಸಿಬಿಯ ಮಾದಕದ್ರವ್ಯ ನಿಗ್ರಹ ವಿಭಾಗ ಹಾಗೂ ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಂಚೆ ಮೂಲಕ ಸಾಗಿಸುತ್ತಿದ್ದ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದರು.

ಬೆಂಗಳೂರು ನಗರ ಪೊಲೀಸ್ ಇಲಾಖೆಯ ಶ್ವಾನದಳದ ನೆರವಿನೊಂದಿಗೆ ಈ ತಂಡವನ್ನು ಪತ್ತೆಹಚ್ಚಲಾಗಿದೆ. ಕಾರ್ಯಾಚರಣೆಯಲ್ಲಿ 3500 ಪಾರ್ಸಲ್ ಗಳನ್ನು ಪತ್ತೆಹಚ್ಚಲಾಗಿದೆ. ಅದರಲ್ಲಿ 21,17,34,000 ರೂ. ಮೌಲ್ಯದ ನಿಷೇಧಿತ ಮಾದಕದ್ರವ್ಯಗಳು 606 ಪಾರ್ಸಲ್ ಗಳಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದರು.

ಪೋರ್ಟರ್ ಆಪ್ ಮೂಲಕ ಗ್ರಾಹಕರ ಹಾಗೂ ಚಾಲಕರ ನಕಲಿ ಗುರುತಿನ ಚೀಟಿ ಸೃಷ್ಟಿ ಮಾಡುತ್ತಿದ್ದ ಆರೋಪದ ಮೇಲೆ ದಕ್ಷಿಣ ವಲಯದ ಸಿಇಎನ್ ಪೊಲೀಸ್ ಠಾಣೆ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಈ ನಕಲಿ ಗುರುತಿನ ಚೀಟಿ ಬಳಸಿಕೊಂಡು ನಕಲಿ ಆರ್ಡರ್ ಬುಕ್ ಮಾಡುತ್ತಿದ್ದರು. ಕಂಪನಿಗಳು ಈ ನಕಲಿ ಚಾಲಕರಿಗೆ ಹಣ ಪಾವತಿ ಮಾಡುತ್ತಿತ್ತು. ನಂತರ ಈ ಆರ್ಡರ್ ಗಳನ್ನು ರದ್ದುಗೊಳಿಸಿದ ನಂತರ ಕಂಪನಿಯು ನಕಲಿ ಗ್ರಾಹಕರಿಗೂ ಹಣ ಮರುಪಾವತಿ ಮಾಡುತ್ತಿತ್ತು. ಕಳೆದ 8 ತಿಂಗಳಲ್ಲಿ ಈ ರೀತಿಯಾಗಿ ಕಂಪನಿಗೆ 90 ಲಕ್ಷ ವಂಚನೆ ಮಾಡಲಾಗಿದೆ ಎಂದರು.

ನಗರದ ವಿವಿಧ ಶಾಲಾ ಕಾಲೇಜುಗಳಿಗೆ ಹುಸಿ ಬಾಂಬ್ ಕರೆ ಹಾಗೂ ಇಮೇಲ್ ಗಳನ್ನು ಕಳುಹಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿವಿ ಪುರಂ ಪೊಲೀಸ್ ಠಾಣೆ ಅಧಿಕಾರಿಗಳು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಕೃತ್ಯಕ್ಕೆ ಬಳಸಿದ್ದ ಲ್ಯಾಪ್ ಟಾಪ್ ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಮಾದರಿಯ 10 ಪ್ರಕರಣಗಳು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ ಎಂದು ಹೇಳಿದರು.

ಹೂಡಿಕೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ವಲಯದ ಸಿಇಎನ್ ಪೊಲೀಸ್ ಠಾಣೆ ಅಧಿಕಾರಿಗಳು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಹಣ ದುಪ್ಪಟ್ಟು ಮಾಡುವ ಆಮೀಷ ಒಡ್ಡಿ ಯಾಮಾರಿಸುತ್ತಿದ್ದರು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತಿಬ್ಬರ ಆರೋಪಿಗಳ ಹುಡುಕಾಟ ನಡೆಸಲಾಗುತ್ತಿದ್ದು ಕಾರ್ಯಾಚರಣೆ ಮುಂದುವರಿದಿದೆ ಎಂದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

14 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago