ಅಂಚೆ ಮೂಲಕ ಮಾದಕ ವಸ್ತು ಸಾಗಾಟ: 21,17,34,000 ರೂ. ಮೌಲ್ಯದ ನಿಷೇಧಿತ ಮಾದಕದ್ರವ್ಯಗಳ ವಶ

ಸಿಸಿಬಿಯ ಮಾದಕದ್ರವ್ಯ ನಿಗ್ರಹ ವಿಭಾಗ ಹಾಗೂ ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಂಚೆ ಮೂಲಕ ಸಾಗಿಸುತ್ತಿದ್ದ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದರು.

ಬೆಂಗಳೂರು ನಗರ ಪೊಲೀಸ್ ಇಲಾಖೆಯ ಶ್ವಾನದಳದ ನೆರವಿನೊಂದಿಗೆ ಈ ತಂಡವನ್ನು ಪತ್ತೆಹಚ್ಚಲಾಗಿದೆ. ಕಾರ್ಯಾಚರಣೆಯಲ್ಲಿ 3500 ಪಾರ್ಸಲ್ ಗಳನ್ನು ಪತ್ತೆಹಚ್ಚಲಾಗಿದೆ. ಅದರಲ್ಲಿ 21,17,34,000 ರೂ. ಮೌಲ್ಯದ ನಿಷೇಧಿತ ಮಾದಕದ್ರವ್ಯಗಳು 606 ಪಾರ್ಸಲ್ ಗಳಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದರು.

ಪೋರ್ಟರ್ ಆಪ್ ಮೂಲಕ ಗ್ರಾಹಕರ ಹಾಗೂ ಚಾಲಕರ ನಕಲಿ ಗುರುತಿನ ಚೀಟಿ ಸೃಷ್ಟಿ ಮಾಡುತ್ತಿದ್ದ ಆರೋಪದ ಮೇಲೆ ದಕ್ಷಿಣ ವಲಯದ ಸಿಇಎನ್ ಪೊಲೀಸ್ ಠಾಣೆ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಈ ನಕಲಿ ಗುರುತಿನ ಚೀಟಿ ಬಳಸಿಕೊಂಡು ನಕಲಿ ಆರ್ಡರ್ ಬುಕ್ ಮಾಡುತ್ತಿದ್ದರು. ಕಂಪನಿಗಳು ಈ ನಕಲಿ ಚಾಲಕರಿಗೆ ಹಣ ಪಾವತಿ ಮಾಡುತ್ತಿತ್ತು. ನಂತರ ಈ ಆರ್ಡರ್ ಗಳನ್ನು ರದ್ದುಗೊಳಿಸಿದ ನಂತರ ಕಂಪನಿಯು ನಕಲಿ ಗ್ರಾಹಕರಿಗೂ ಹಣ ಮರುಪಾವತಿ ಮಾಡುತ್ತಿತ್ತು. ಕಳೆದ 8 ತಿಂಗಳಲ್ಲಿ ಈ ರೀತಿಯಾಗಿ ಕಂಪನಿಗೆ 90 ಲಕ್ಷ ವಂಚನೆ ಮಾಡಲಾಗಿದೆ ಎಂದರು.

ನಗರದ ವಿವಿಧ ಶಾಲಾ ಕಾಲೇಜುಗಳಿಗೆ ಹುಸಿ ಬಾಂಬ್ ಕರೆ ಹಾಗೂ ಇಮೇಲ್ ಗಳನ್ನು ಕಳುಹಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿವಿ ಪುರಂ ಪೊಲೀಸ್ ಠಾಣೆ ಅಧಿಕಾರಿಗಳು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಕೃತ್ಯಕ್ಕೆ ಬಳಸಿದ್ದ ಲ್ಯಾಪ್ ಟಾಪ್ ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಮಾದರಿಯ 10 ಪ್ರಕರಣಗಳು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ ಎಂದು ಹೇಳಿದರು.

ಹೂಡಿಕೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ವಲಯದ ಸಿಇಎನ್ ಪೊಲೀಸ್ ಠಾಣೆ ಅಧಿಕಾರಿಗಳು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಹಣ ದುಪ್ಪಟ್ಟು ಮಾಡುವ ಆಮೀಷ ಒಡ್ಡಿ ಯಾಮಾರಿಸುತ್ತಿದ್ದರು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತಿಬ್ಬರ ಆರೋಪಿಗಳ ಹುಡುಕಾಟ ನಡೆಸಲಾಗುತ್ತಿದ್ದು ಕಾರ್ಯಾಚರಣೆ ಮುಂದುವರಿದಿದೆ ಎಂದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

5 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

5 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

8 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

9 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

13 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

17 hours ago