ಅಂಚೆ ಮೂಲಕ ಮಾದಕ ವಸ್ತು ಸಾಗಾಟ: 21,17,34,000 ರೂ. ಮೌಲ್ಯದ ನಿಷೇಧಿತ ಮಾದಕದ್ರವ್ಯಗಳ ವಶ

ಸಿಸಿಬಿಯ ಮಾದಕದ್ರವ್ಯ ನಿಗ್ರಹ ವಿಭಾಗ ಹಾಗೂ ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಂಚೆ ಮೂಲಕ ಸಾಗಿಸುತ್ತಿದ್ದ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದರು.

ಬೆಂಗಳೂರು ನಗರ ಪೊಲೀಸ್ ಇಲಾಖೆಯ ಶ್ವಾನದಳದ ನೆರವಿನೊಂದಿಗೆ ಈ ತಂಡವನ್ನು ಪತ್ತೆಹಚ್ಚಲಾಗಿದೆ. ಕಾರ್ಯಾಚರಣೆಯಲ್ಲಿ 3500 ಪಾರ್ಸಲ್ ಗಳನ್ನು ಪತ್ತೆಹಚ್ಚಲಾಗಿದೆ. ಅದರಲ್ಲಿ 21,17,34,000 ರೂ. ಮೌಲ್ಯದ ನಿಷೇಧಿತ ಮಾದಕದ್ರವ್ಯಗಳು 606 ಪಾರ್ಸಲ್ ಗಳಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದರು.

ಪೋರ್ಟರ್ ಆಪ್ ಮೂಲಕ ಗ್ರಾಹಕರ ಹಾಗೂ ಚಾಲಕರ ನಕಲಿ ಗುರುತಿನ ಚೀಟಿ ಸೃಷ್ಟಿ ಮಾಡುತ್ತಿದ್ದ ಆರೋಪದ ಮೇಲೆ ದಕ್ಷಿಣ ವಲಯದ ಸಿಇಎನ್ ಪೊಲೀಸ್ ಠಾಣೆ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಈ ನಕಲಿ ಗುರುತಿನ ಚೀಟಿ ಬಳಸಿಕೊಂಡು ನಕಲಿ ಆರ್ಡರ್ ಬುಕ್ ಮಾಡುತ್ತಿದ್ದರು. ಕಂಪನಿಗಳು ಈ ನಕಲಿ ಚಾಲಕರಿಗೆ ಹಣ ಪಾವತಿ ಮಾಡುತ್ತಿತ್ತು. ನಂತರ ಈ ಆರ್ಡರ್ ಗಳನ್ನು ರದ್ದುಗೊಳಿಸಿದ ನಂತರ ಕಂಪನಿಯು ನಕಲಿ ಗ್ರಾಹಕರಿಗೂ ಹಣ ಮರುಪಾವತಿ ಮಾಡುತ್ತಿತ್ತು. ಕಳೆದ 8 ತಿಂಗಳಲ್ಲಿ ಈ ರೀತಿಯಾಗಿ ಕಂಪನಿಗೆ 90 ಲಕ್ಷ ವಂಚನೆ ಮಾಡಲಾಗಿದೆ ಎಂದರು.

ನಗರದ ವಿವಿಧ ಶಾಲಾ ಕಾಲೇಜುಗಳಿಗೆ ಹುಸಿ ಬಾಂಬ್ ಕರೆ ಹಾಗೂ ಇಮೇಲ್ ಗಳನ್ನು ಕಳುಹಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿವಿ ಪುರಂ ಪೊಲೀಸ್ ಠಾಣೆ ಅಧಿಕಾರಿಗಳು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಕೃತ್ಯಕ್ಕೆ ಬಳಸಿದ್ದ ಲ್ಯಾಪ್ ಟಾಪ್ ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಮಾದರಿಯ 10 ಪ್ರಕರಣಗಳು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ ಎಂದು ಹೇಳಿದರು.

ಹೂಡಿಕೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ವಲಯದ ಸಿಇಎನ್ ಪೊಲೀಸ್ ಠಾಣೆ ಅಧಿಕಾರಿಗಳು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಹಣ ದುಪ್ಪಟ್ಟು ಮಾಡುವ ಆಮೀಷ ಒಡ್ಡಿ ಯಾಮಾರಿಸುತ್ತಿದ್ದರು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತಿಬ್ಬರ ಆರೋಪಿಗಳ ಹುಡುಕಾಟ ನಡೆಸಲಾಗುತ್ತಿದ್ದು ಕಾರ್ಯಾಚರಣೆ ಮುಂದುವರಿದಿದೆ ಎಂದರು.

Ramesh Babu

Journalist

Recent Posts

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

7 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

7 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

18 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

18 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

20 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

23 hours ago